ಕುಂಬಳೂರು ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳ ಕೊರತೆ

KannadaprabhaNewsNetwork |  
Published : Jul 16, 2024, 12:32 AM IST
ವಿದ್ಯಾರ್ಥಿಗಳ ಮನೆಗೆ ಸಿಬಿಸಿ ಮತ್ತು ಉಪನ್ಯಾಸಕರ ತಂಡ ಭೇಟಿ | Kannada Prabha

ಸಾರಾಂಶ

ಮಲೇಬೆನ್ನೂರು ಸಮೀಪದ ಕುಂಬಳೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ತರಗತಿಗೆ ವಿದ್ಯಾರ್ಥಿಗಳ ದಾಖಲಾತಿ ಮಾಡಲು ಉಪನ್ಯಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ (ಸಿಬಿಸಿ) ಸದಸ್ಯರು ಮನೆಗಳಿಗೆ ತೆರಳಿ ಮನವೊಲಿಸುತ್ತಿದ್ದಾರೆ.

ಮಲೇಬೆನ್ನೂರು: ಇಲ್ಲಿಗೆ ಸಮೀಪದ ಕುಂಬಳೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ತರಗತಿಗೆ ವಿದ್ಯಾರ್ಥಿಗಳ ದಾಖಲಾತಿ ಮಾಡಲು ಉಪನ್ಯಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ (ಸಿಬಿಸಿ) ಸದಸ್ಯರು ಮನೆಗಳಿಗೆ ತೆರಳಿದ ಘಟನೆ ನಡೆದಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆಯಾದ ಹಿನ್ನೆಲೆ ಈ ಬಾರಿ ಪ್ರಥಮ ಪಿಯು ತರಗತಿಗೆ ದಾಖಲಾತಿ ಕೊರತೆಯಾಗಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ-೨ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಜಿಗಳಿ, ಗುಡ್ಡದ ಬೇವಿನಹಳ್ಳಿ, ಜಿಗಳಿ, ನಿಟ್ಟೂರು ಮತ್ತು ಕುಂಬಳೂರು ಗ್ರಾಮಗಳ ಯೋಗೀಶ್, ವಜ್ರ, ಮಾರುತಿ, ಶರತ್, ಭಾಗ್ಯ, ನಯನ, ಗಂಗಾ ಎಂಬ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಈ ಹಿನ್ನೆಲೆ ಈ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ, ಕಾಲೇಜಿನಲ್ಲಿನ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಪ್ರವೇಶ ಪಡೆಯುವಂತೆ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಭಾರ ಪ್ರಾಂಶುಪಾಲ ಹನುಮಂತಯ್ಯ, ಉಪನ್ಯಾಸಕರಾದ ಮರುಳಸಿದ್ದಪ್ಪ, ಲತಾ, ಸಿಬಿಸಿ ಸದಸ್ಯರಾದ ಎನ್.ಕಲ್ಲೇಶ್ ಬಾಬು, ಬೆನ್ನೂರು ರಮೇಶ್, ಎಚ್.ಎಂ. ಸದಾನಂದ, ವೈ.ಶ್ರೀನಿವಾಸಮೂರ್ತಿ ಮತ್ತಿತರರು 3 ಗಂಟೆಗಳ ಕಾಲ ಪೋಷಕರು, ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ವಾಪಸ್ ಕಾಲೇಜಿಗೆ ಆಗಮಿಸಿದ್ದಾರೆ. ೨೦೧೮ರಲ್ಲಿಯೂ ಪ್ರಥಮ ಪಿಯುಸಿಗೆ ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆಯಾಗಿತ್ತು. ಆಗಲೂ ಇದೇ ತಂಡ ಮನೆ ಮನೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚು ಮಾಡಿಕೊಂಡಿದ್ದು ಸ್ಮರಿಸಬಹುದು.

- - - (** ಈ ಫೋಟೋ ಕ್ಯಾಪ್ಷನ್‌ ಪ್ಯಾನೆಲ್‌ಗೆ ಬಳಸಬಹುದು) -೧೫-ಎಂಬಿಆರ್೧:

ಮಲೇಬೆನ್ನೂರು ಸಮೀಪದ ಕುಂಬಳೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ತರಗತಿಗೆ ವಿದ್ಯಾರ್ಥಿಗಳ ಕೊರತೆ ಎದುರಾಗಿದ್ದು, ಸಿಬಿಸಿ ಮತ್ತು ಉಪನ್ಯಾಸಕರ ತಂಡ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ, ಪೋಷಕರ ಮನವೊಲಿಸುವ ಪ್ರಯತ್ನ ಮಾಡಿದರು.

PREV

Recommended Stories

ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ