ಕೋಳಿ ಸಾಕಣೆ ಕೃಷಿಯೆಂದು ಪರಿಗಣಿಸಲಿ

KannadaprabhaNewsNetwork |  
Published : Aug 20, 2025, 01:30 AM IST
೧೮ಕೆಎಲ್‌ಆರ್-೩ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉಧ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ ೧೯೬೪ರ  ಕಾನೂನು ರೂಪಿಸಬೇಕು ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ ೧೨ ರೂ ಪರಿಷ್ಕರಿಸುವಂತೆ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನಡೆಸುತ್ತಿರುವುದು. | Kannada Prabha

ಸಾರಾಂಶ

ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು ೩ ಕೋಟಿ ಮಂದಿಗೆ ಉದ್ಯೋಗ ಅವಕಾಶ ನೀಡಲಾಗಿದೆ, ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸ ಆಳುವ ಸರ್ಕಾರಗಳು ಮಾಡಬೇಕಾಗಿದೆ.

ಕನ್ನಡಪ್ರಭ ವಾರ್ತೆ ಕೋಲಾರಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ ೧೯೬೪ರ ಕಾನೂನು ರೂಪಿಸಬೇಕು ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ ೧೨ ರು.ಗಳಿಗೆ ನಿಗದಿಪಡಿಸಲು ಅಗತ್ಯ ಕ್ರಮ ವಹಿಸಲು ರಾಜ್ಯ ಸರ್ಕಾರವನ್ನು ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸುಗಟೂರು ಶ್ರೀಧರ್ ರೆಡ್ಡಿ ಮಾತನಾಡಿ, ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ದುಂಡು ಮೇಜಿನ ಸಭೆ, ಹೋರಾಟ ನಡೆಸಿದ್ದೇವೆ, ಕೋಳಿ ಸಾಕಾಣಿಕೆದಾರರ ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದೇವೆ, ಆದರೂ ಯಾವುದೇ ರೀತಿಯ ಕ್ರಮ ವಹಿಸಿಲ್ಲ ಕೂಡಲೇ ರಾಜ್ಯ ಸರ್ಕಾರವು ಕುಕ್ಕುಟ ಉದ್ಯಮದ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.ಕೋಳಿ ಸಾಕಣೆ ಪ್ರೋತ್ಸಾಹಿಸಿ

ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು ೩ ಕೋಟಿ ಮಂದಿಗೆ ಉದ್ಯೋಗ ಅವಕಾಶ ನೀಡಲಾಗಿದೆ, ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸ ಆಳುವ ಸರ್ಕಾರಗಳು ಮಾಡಬೇಕಾಗಿದೆ ಎಂದು ಮನವಿ ಮಾಡಿದರು. ಕೋಳಿ ಸಾಕಾಣಿಕೆದಾರರ ಪರವಾಗಿ ಸಿದ್ದಪಡಿಸಿರುವ ಕರಡನ್ನು ರಾಜ್ಯ ಸರ್ಕಾರವು ಇವತ್ತಿನ ಅಧಿವೇಶನದಲ್ಲಿ ಮಂಡಿಸಬೇಕು, ರೈತರ ಜೀವನೋಪಾಯ ರಕ್ಷಿಸಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ದೊಡ್ದ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದ ನಂತರ ಉಪ ತಹಸೀಲ್ದಾರ್ ಡಾ.ನಯನರಿಗೆ ಮನವಿಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಅಧ್ಯಕ್ಷ ಜೆ.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಅಬ್ಬಣಿ ಶಿವಪ್ಪ, ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಪದಾಧಿಕಾರಿಗಳಾದ ಗಿರೀಶ್ ಗೌಡ, ಪಿ.ಶ್ರೀನಿವಾಸ್, ನಟರಾಜ್, ಕಿರಣ್, ರಮೇಶ್, ಅಂಬರೀಶ್ ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ