ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಹಿಂಜಾವೇ ಮುಖಂಡರ ಮೇಲೆ ಪೊಲೀಸರ ಹಲ್ಲೆ ಖಂಡಿಸಿ ನವನಗರದ ನಗರಸಭೆ ಎದುರು ಸೋಮವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೊಲೀಸರು ತಾವು ಸಹ ಹಿಂದುಗಳೆಂದು ಮರೆಯಬೇಡಿ. ನಿಮ್ಮ ಮನೆಯ ಹೆಣ್ಣು ಮಕ್ಕಳಿಗೆ ಅನ್ಯಾಯವಾದಾಗ ಬಂದು ನಿಲ್ಲುವವರು ನಾವೇ ಎನ್ನುವುದು ನಿಮ್ಮ ಗಮನದಲ್ಲಿರಲಿ ಎಂದರು.
ಬಿಟಿಡಿಎ ಮಾಜಿ ಸಭಾಪತಿ, ಬಿಜೆಪಿ ಹಿರಿಯ ಮುಖಂಡ ಜಿ.ಎನ್. ಪಾಟೀಲ ಮಾತನಾಡಿ, ಅನವಶ್ಯಕವಾಗಿ ಹಿಂದೂಪರ ಸಂಘಟನೆಗಳ ಮುಖಂಡರ ಮೇಲೆ ಹಲ್ಲೆ ಮಾಡಿರುವ ಪೊಲೀಸರ ವರ್ತನೆ ಖಂಡನೀಯ. ಹಿಂದೂಗಳ ರಕ್ಷಣೆಗಾಗಿ ನಾವೆಲ್ಲರೂ ಒಂದಾಗಬೇಕಿದೆ ಎಂದು ಕರೆ ನೀಡಿದರು.ಗುಳೇದಗುಡ್ಡದ ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಅಧಿಕಾರಿಗಳು ರಾಜಕಾರಣಿಗಳ ಮಾತು ಕೇಳಬೇಡಿ. ರಾಜಕಾರಣಿಗಳ ಅಧಿಕಾರ 5 ವರ್ಷ ಮಾತ್ರ. ನಿಮ್ಮ ಅಧಿಕಾರ 60 ವರ್ಷ. ಪೊಲೀಸರು ಅಮಾನುಷವಾಗಿ ವರ್ತಿಸುವುದನ್ನು ಬಿಡಬೇಕು. ಹಿಂದೂಗಳು ಇಂತಹ ಘಟನೆಗಳನ್ನು ನೋಡಿಯಾದರೂ ಒಗ್ಗಟ್ಟಾಗಬೇಕಿದೆ. ಇಲ್ಲದಿದ್ದರೆ ನಮ್ಮ ದೇಶದ ಸ್ಥಿತಿ ಹೇಳದಂತಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹಿಂಜಾವೇ ಮುಖಂಡರಾದ ಕಿರಣ ಪವಾಡಶೆಟ್ಟರ, ಅಯ್ಯನಗೌಡ ಹೆರೂರ, ಯಲ್ಲಪ್ಪ ಭಜಂತ್ರಿ, ವಿಕ್ರಂ ದೇಶಪಾಂಡೆ, ಮಹಾಂತೇಶ ಕೋಟಿ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ. ಪಾಟೀಲ, ಬಿಜೆಪಿ ಮುಖಂಡ ಬಸವರಾಜ ಯಂಕಂಚಿ, ಜಯಂತ ಕುರಂದವಾಡ, ನಗರಸಭೆ ಮಾಜಿ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಸೇರಿದಂತೆ ಇತರರಿದ್ದರು.