ಶ್ರೀ ಮಂಚಮ್ಮ ದೇವಿ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

KannadaprabhaNewsNetwork |  
Published : Feb 01, 2026, 02:15 AM IST
29ಕೆಎಂಎನ್ ಡಿ19 | Kannada Prabha

ಸಾರಾಂಶ

ಮದ್ದೂರು ತಾಲೂಕಿನ ಅಡಗನಹಳ್ಳಿಯಲ್ಲಿ ಗುರುವಾರ ಶ್ರೀ ಮಂಚಮ್ಮ ದೇವಿ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಡಗರ- ಸಂಭ್ರಮದಿಂದ ನೆರವೇರಿತು.

ಮದ್ದೂರು:

ತಾಲೂಕಿನ ಅಡಗನಹಳ್ಳಿಯಲ್ಲಿ ಗುರುವಾರ ಶ್ರೀ ಮಂಚಮ್ಮ ದೇವಿ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಡಗರ- ಸಂಭ್ರಮದಿಂದ ಈಚೆಗೆ ನೆರವೇರಿತು.

ಅಂಕುರಾರ್ಪಣೆ, ಸ್ವಸ್ತಿವಾಚನ, ಧ್ವಜಾರೋಹಣ ಮತ್ತು ರಾತ್ರಿ 8 ಗಂಟೆಗೆ ಶುದ್ಧ ಪುಣ್ಯಾಹ, ಮಹಾಗಣಪತಿ ಪೂಜೆ, ಉಮಾಮಹೇಶ್ವರ, ವರುಣ, ಕಮಲವಾಸ್ತು ಮೃತ್ಯುಂಜಯ ಪೂಜೆ, ಅಷ್ಟ ದಿಕ್ಪಾಲಕ ಪೂಜೆ, ನವಗ್ರಹ ಪೂಜೆ , ಯಜ್ಞ ನಡೆದು, ಗುರುವಾರ ಗಂಗಾಪೂಜೆಗೆ ಮುಂಜಾನೆ 5.30 ರಿಂದ 6-30ರ ಸಮಯದಲ್ಲಿ ಆಲಯ ಪ್ರವೇಶ, ವಿಗ್ರಹ ಶುದ್ಧಿ, ಬೆಳಗ್ಗೆ 8.16 ರಿಂದ 9.30ಕ್ಕೆ ಶ್ರೀ ಮಂಚಮ್ಮದೇವಿಯ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ, ಗೋಪುರ ಕಳಶ ಸ್ಥಾಪನೆ, ಶ್ರೀಗಣಪತಿ ವಿಗ್ರಹ, ಶ್ರೀಮಾಸ್ತಮ್ಮಹಸ್ತರೇಖೆ ಪ್ರತಿಷ್ಠಾಪನೆ ನಂತರ ಅಭಿಷೇಕ, ಅಷ್ಟೋತ್ತರ ಹೂವಿನ ಅಲಂಕಾರ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಮಧ್ಯಾಹ್ನ 12-30 ರಿಂದ‌ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಿತು.

ಶಾಸಕ ಕೆ.ಎಂ.ಉದಯ್, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಸೇರಿದಂತೆ ಹಲವು ಗಣ್ಯರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕರಾದ ಶಿವರಾಮು ಮಹಾದೇವಮ್ಮ, ಕುಮಾರಸ್ವಾಮಿ, ಯಜಮಾನರಾದ ಮಹೇಶ್, ಮಂಚಣ್ಣ, ಮಹದೇವ, ಕೃಷ್ಣ, ನಂದೀಶ, ಮಲ್ಲೇಶ್, ಗಿರೀಶ್, ಪ್ರಕಾಶ್, ಹಲೋ ಬ್ಲಾಕ್ ಸಂತೋಷ, ವಿನೋದ್ ರಾಜ್, ಧನಂಜಯ, ಮೃತ್ಯುಂಜಯ, ಹರಿಪ್ರಸಾದ್, ಅಡುಗನಹಳ್ಳಿ ಗ್ರಾಮಸ್ಥರು, ಅಕ್ಕ ಪಕ್ಕದ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ