ಕನ್ನಡಪ್ರಭ ವಾರ್ತೆ ಉಡುಪಿ
ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ಧಾರ್ಮಿಕ ಕಾರ್ಯಕ್ರಮಗಳ ಜೊತೆ ಜೊತೆಗೆ ಸಮಾಜ ಸೇವೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಾ ಹಿಂದುತ್ವದ ಪ್ರಬಲ ಪ್ರತಿಪಾದಕರಾಗಿ ಸಂಘಟನೆಯ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುವ ಮೂಲಕ ಹಿಂದೂ ಸಮಾಜಕ್ಕೆ ಪ್ರೇರಕ ಶಕ್ತಿಯಾಗಿದ್ದರು ಎಂದರು.
ಕಾಪು ಶಾಸಕ ಸುರೇಶ್ ಶೆಟ್ಟಿ ಪರಮಪೂಜ್ಯ ಶಿರೂರು ಶ್ರೀಗಳ ಸಮಾಜಮುಖಿ ಸೇವಾ ಚಿಂತನೆ ನಮಗೆಲ್ಲ ಸದಾ ಆದರ್ಶವಾಗಿರಲಿದೆ ಎಂದರು.ಸಮಾರಂಭದಲ್ಲಿ ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಹಿಂದೂ ಯುವಸೇನೆಯ ಪ್ರಮುಖರಾದ ಶೇಖರ್ ಶೆಟ್ಟಿ ಹಿರಿಯಡ್ಕ, ಕಾರ್ಯದರ್ಶಿ ಅರುಣ್, ಉಡುಪಿ ನಗರ ಅಧ್ಯಕ್ಷ ಸುನೀಲ್ ನೇಜಾರ್, ಪ್ರದೀಪ್ ಶೆಟ್ಟಿ ಶೀರೂರು, ರೋಹಿತ್ ಶೆಟ್ಟಿ ಬೆಳ್ಳರ್ಪಾಡಿ, ಸುರೇಶ್ ಸಾಲ್ಯಾನ್, ಮೋಹನ್ ಭಟ್, ಬೆಳ್ಳರ್ಪಾಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ, ಪವನ್ ಹೆರ್ಗ, ನವೀನ್ ಪುತ್ರನ್, ಉದಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.