ಸಂಭ್ರಮದಿಂದ ಜರುಗಿದ ಶ್ರೀ ಪ್ರಭುಲಿಂಗೇಶ್ವರ ಜಾತ್ರೆ

KannadaprabhaNewsNetwork |  
Published : Apr 13, 2024, 01:02 AM ISTUpdated : Apr 13, 2024, 01:03 AM IST
ಪ್ರಭುಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವದಲ್ಲಿ ನೂತನ ಮಹಾದ್ವಾರವನ್ನು ಉದ್ಘಾಟಿಸಲಾಯಿತು.  | Kannada Prabha

ಸಾರಾಂಶ

ಯಮಕನಮರಡಿ: ಸಮೀಪದ ಹೊಸವಂಟಮೂರಿ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು. ಯುಗಾದಿ ನಿಮಿತ್ತ ಶ್ರೀ ಪ್ರಭುಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಷ್ಟ್ರೀಯ ಹೆದ್ದಾರಿಯಿಂದ ಪ್ರಭುಲಿಂಗೇಶ್ವರ ದೇವಸ್ಥಾನದವರೆಗೆ ಕುಂಭೋತ್ಸವದ ಭವ್ಯ ಮೆರವಣಿಗೆ ನಡೆಯಿತು.

ಯಮಕನಮರಡಿ: ಸಮೀಪದ ಹೊಸವಂಟಮೂರಿ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು. ಯುಗಾದಿ ನಿಮಿತ್ತ ಶ್ರೀ ಪ್ರಭುಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಷ್ಟ್ರೀಯ ಹೆದ್ದಾರಿಯಿಂದ ಪ್ರಭುಲಿಂಗೇಶ್ವರ ದೇವಸ್ಥಾನದವರೆಗೆ ಕುಂಭೋತ್ಸವದ ಭವ್ಯ ಮೆರವಣಿಗೆ ನಡೆಯಿತು. ಭೂತರಾಮನಹಟ್ಟಿಯ ಮುಕ್ತಿಮಠದ ಶಿವಸಿದ್ದ ಸೋಮೇಶ್ವರ ಸ್ವಾಮೀಜಿ ನೂತನ ಮಹಾದ್ವಾರ ಉದ್ಘಾಟಿಸಿ ಆಶೀರ್ವಚನ ನೀಡಿ, ವಂಟಮೂರಿ ಗ್ರಾಮಸ್ಥರು ಸಂಸ್ಥಾನ ಪರಂಪರೆಯಿಂದ ಬಂದಿದ್ದು, ಅದನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಹೇಳಿದರು.

ಹಿರೇಮುನ್ನವಳ್ಳಿ-ಪಾರಿಶ್ವಾಡದ ಶಂಭುಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು. ಗ್ರಾಮಸ್ಥರು ಭಕ್ತಾದಿಗಳು ಪಾಲ್ಗೊಂಡಿದ್ದರು. ನಂತರ ಮಹಾಪ್ರಸಾದ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ