ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಅಮ್ಮನವರ ಜಯಂತ್ಯುತ್ಸವದ ಅಂಗವಾಗಿ ಕಾವೇರಿ ನದಿಯಿಂದ ಪೂರ್ಣಕುಂಭ ಕಳಸ ತಂದು ಪ್ರತಿಸ್ಥಾಪನೆ ಮಾಡಿ, ದೇವಾಲಯದಲ್ಲಿ ದೇವಿಗೆ ವಜ್ರ ವೈಡೂರ್ಯ ಹಾಗೂ ವಿಶೇಷ ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆ, ಹೋಮ- ಹವನಗಳು ನಡೆದು ಪೂರ್ಣಾಹುತಿ ನಡೆಸಲಾಯಿತು.
ದೇವಾಲಯ ಸೇರಿದಂತೆ ದೇವಿಗೆ ವಿಶೇಷವಾಗಿ ಹೂವಿನ ಅಲಂಕಾರ, ದೀಪಾಲಂಕಾರ ಇತರೆ ಸೇವೆಗಳು ನಡೆದು ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪ, ಕಲಶ ಸ್ಥಾಪನೆ, ಸಪ್ತಶತಿ ಪಾರಾಯಣ, ಕಲಶ ಪೂಜೆಯಿಂದ ಪ್ರಾರಂಭಗೊಂಡು ನಿಮಿಷಾಂಬ ಹೋಮ ಪೂರ್ಣಾಹುತಿಯೊಂದಿಗೆ 121 ಕಲಶಗಳ ಮಹಾಭಿಷೇಕ, ಅಷ್ಟದಿಗ್ಬಲಿ ಪೂಜೆ ಕಾರ್ಯಕ್ರಮ ನಡೆಯಿತು.ದೇವಿ ದರ್ಶನಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ದೇವಾಲಯದಿಂದ ಪ್ರಸಾದ ವಿತರಿಸಲಾಯಿತು. ನಂತರ ಸಂಜೆ ದಕ್ಷಿಣ ಗಂಗೆ ಕಾವೇರಿ ಮಹಾ ಮಂಗಳಾರತಿ, ಪ್ರಾಕಾರೋತ್ಸವ ಸೇವೆಗಳು ವೈಭವಯುತವಾಗಿ ಜರುಗಿ ಸಾವಿರಾರು ಭಕ್ತರು ಪಾಲ್ಗೊಂಡು ವಿಶೇಷ ದರ್ಶನ ಪಡೆದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ತಹಸೀಲ್ದಾರ್ ಚೇತನ ಯಾದವ್, ಶಾಸಕರ ಪತ್ನಿ ಸುಮತಿ ರಮೇಶ್ ಬಂಡಿಸಿದ್ದೇಗೌಡ, ದೇವಾಲಯದ ಇಒ ಮಹೇಶ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಎಲ್.ದಿನೇಶ್, ದೇವಾಲಯದ ಸಮಿತಿ ಅಧ್ಯಕ್ಷ ದಯಾನಂದ್, ಸಮಿತಿ ಸದಸ್ಯರಾದ ಬಾಲಸುಬ್ರಮಣ್ಯ, ಸೂರ್ಯನಾರಾಯಣ ಭಟ್, ಪೂರ್ಣಪ್ರಜ್ಞಮೂರ್ತಿ, ಟಿ.ಕೃಷ್ಣ, ಕೃಷ್ಣಾಚಾರಿ, ಭಾಗ್ಯಲಕ್ಷ್ಮಿ, ರಂಗಸ್ವಾಮಿ, ಸುಮಲತಾ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮಸ್ಥರು ಭಾಗವಹಿಸಿದ್ದರು.