ಅರಸೀಕೆರೆ ತಾಲೂಕಿನ ಉಂಡಿಗನಾಳು, ಬಂದೂರು ಹಾಗೂ ಜಾವಗಲ್ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳಡಿ ಅನುಷ್ಠಾನ ಮಾಡಲಾಗಿರುವ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು. ಉಂಡಿಗನಾಳು ಗ್ರಾಮ ಪಂಚಾಯಿತಿಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಾಲದಲ್ಲಿ ಚುಚ್ಚುಮದ್ದುಗಳು ಹಾಗೂ ಔಷದಿಗಳು ಲಭ್ಯವಿರುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಂ ಶುಕ್ಲಾ ತಿಳಿಸಿದ್ದಾರೆ.ಅರಸೀಕೆರೆ ತಾಲೂಕಿನ ಉಂಡಿಗನಾಳು, ಬಂದೂರು ಹಾಗೂ ಜಾವಗಲ್ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳಡಿ ಅನುಷ್ಠಾನ ಮಾಡಲಾಗಿರುವ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು. ಉಂಡಿಗನಾಳು ಗ್ರಾಮ ಪಂಚಾಯಿತಿಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಗಳು ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.ಅಂಗನವಾಡಿಯಲ್ಲಿ ಅಳವಡಿಸಿರುವ ನಲ್ಲಿಯಲ್ಲಿ ನೀರು ಬರದಿರುವುದನ್ನು ಗಮನಿಸಿ ಕೂಡಲೇ ಸರಿಪಡಿಸಿ ವರದಿ ಮಾಡುವಂತೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಪೈಪ್ಲೈನ್ ಅನ್ನು ಚರಂಡಿಯಲ್ಲಿಯೇ ಅಳವಡಿಸಿರುವುದನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಸರಿಪಡಿಸುವಂತೆ ಸೂಚಿಸಿದರು. ೫೦೫೪ ಯೋಜನೆಯಡಿ ಅನುಷ್ಠಾನ ಮಾಡಲಾಗಿರುವ ಕಾಂಕ್ರೀಟ್ ರಸ್ತೆಗಳನ್ನು ಪರಿಶೀಲಿಸಿ, ಖುದ್ದಾಗಿ ಅಳತೆ- ಪ್ರಮಾಣಗಳನ್ನು ಪರಿಶೀಲಿಸಿ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಸೂಚಿಸಿದರು. ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಿಂಗ್ಲಾಪುರ ಗ್ರಾಮಕ್ಕೆ ಹೋಗುವ ಡಾಂಬರು ರಸ್ತೆಯನ್ನು ಪರಿಶೀಲಿಸಿದರು.
ಜಾವಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಪಿ.ಎಸ್ಗೆ ಭೇಟಿ ನೀಡಿ ಶಾಲೆಯ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ನೀರು ಪೋಲಾಗದಂತೆ ನಲ್ಲಿಗಳನ್ನು ಅಳವಡಿಸುವಂತೆ ಶಾಲಾ ಶಿಕ್ಷಕರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ಆವರಣದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ಶಾಲಾ ಶೌಚಾಲಯ ಹಾಗೂ ಶಾಲಾ ಅಡುಗೆ ಕೋಣೆ ಕಾಮಗಾರಿಗಳನ್ನು ಪರಿಶೀಲಿಸಿ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು. ಶಾಲಾ ಮಕ್ಕಳೊಂದಿಗೆ ಸಮಾಲೋಚಿಸಿ ಕುಂದುಕೊರತೆಗಳನ್ನು ವಿಚಾರಿಸಿದರು.ಕ್ಷೇತ್ರ ಭೇಟಿ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.