ಕುಷ್ಟಗಿ:
ಬೆಳಗ್ಗೆ ಶ್ರೀಅವಧೂತ ಶುಖಮುನಿ ಸ್ವಾಮಿಗಳ ಭಾವಚಿತ್ರವನ್ನು ದೋಟಿಹಾಳ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಾಜಾಭಜಂತ್ರಿಗಳ ವಾದ್ಯಮೇಳಗಳೊಂದಿಗೆ ಹಾಗೂ ಭಜನೆಯ ಮೂಲಕ ಸಂಚರಿಸಿ ಮೆರವಣಿಗೆ ನಡೆಸಲಾಯಿತು. ನಂತರ ಸಪ್ತಭಜನೆ, ಶುಖಮುನಿ ಸ್ವಾಮಿಗಳ ಮೂರ್ತಿಗೆ ವಿಶೇಷ ಅಭಿಷೇಕ, ಪೂಜೆ-ಪುನಸ್ಕಾರ ಸೇರಿದಂತೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಬೆಳಗ್ಗೆ 9 ಗಂಟೆ ಹೊತ್ತಿಗೆ ಶುಖಮುನಿ ತಾತನ ಪಲ್ಲಕ್ಕಿ ಉತ್ಸವವು ವಿಶೇಷ ಪೂಜೆಯೊಂದಿಗೆ ಪ್ರಾರಂಭವಾಗಿ ದೋಟಿಹಾಳ ಹಾಗೂ ಕೇಸೂರು ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆಯೊಂದಿಗೆ ಸಂಚರಿಸಿತು. ಗುರುವಾರ ಆರಂಭವಾದ ಪಲ್ಲಕ್ಕಿ ಉತ್ಸವ ಒಂದು ವಾರ ದೋಟಿಹಾಳ, ಕೇಸೂರು ಹಾಗೂ ಸುತ್ತಮುತ್ತಲಿನ ಹೆಸರೂರು, ಮಾಟೂರು, ಜಾಲಿಹಾಳ, ರ್ಯಾವಣಕಿ, ಕಲಕೇರಿ, ನಡುವಲಕೊಪ್ಪಕ್ಕೆ ತೆರಳಿ ತಾತನ ಪಲ್ಲಕ್ಕಿ ಸಂಚರಿಸುತ್ತದೆ. ಅಲ್ಲಿಂದ ಸಾವಿರಾರು ಭಕ್ತರು ಆಗಮಿಸಿ ಮಠಕ್ಕೆ ಆಹಾರ, ದವಸ- ಧಾನ್ಯಗಳನ್ನು ಸಮರ್ಪಣೆ ಮಾಡುವ ಮೂಲಕ ಭಕ್ತಿಯಿಂದ ಮೆರೆಯುತ್ತಾರೆ.ಪಲ್ಲಕ್ಕಿ ಉತ್ಸವ ಉಸ್ತುವಾರಿ ಜವಾಬ್ದಾರಿಯನ್ನು ಸ್ಥಳೀಯ ಯುವಕ ಸಂಘ-ಸಂಸ್ಥೆಗಳಿಗೆ ನೀಡಲಾಗಿದ್ದು ಪ್ರತಿದಿನ ಸಂಘದ ಸದಸ್ಯರ ಸಮ್ಮುಖದಲ್ಲಿ ಬೆಳಗ್ಗೆ ಮತ್ತು ರಾತ್ರಿ ತಾತನ ಪಲ್ಲಕ್ಕಿ ಉತ್ಸವ ನಡೆಯುತ್ತದೆ. ದೋಟಿಹಾಳ ಹಾಗೂ ಕೇಸೂರು ಗ್ರಾಪಂ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ರಸ್ತೆಗಳಲ್ಲಿ ವಿದ್ಯುತ್ ದೀಪ ಜೋಡಣೆ, ಚರಂಡಿ ಸ್ವಚ್ಛತೆ ಮತ್ತು ಸಾರ್ವಜನಿಕರ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಜಾತ್ರೆಗೆ ಬಂದಿರುವ ಭಕ್ತರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಸೂಕ್ತ ಕ್ರಮಕೈಗೊಳ್ಳಲು ಮುಂದಾಗಿರುವುದು ಕಂಡು ಬರುತ್ತಿದೆ.
ಶುಖಮುನಿ ತಾತನ ಪಲ್ಲಕ್ಕಿ ಉತ್ಸವದಲ್ಲಿ ಅವಘಡಗಳು ಉಂಟಾಗಬಾರದೆಂಬ ಉದ್ದೇಶದಿಂದ ಮುಂಜಾಗ್ರತಾವಾಗಿ ತಾಲೂಕಾಡಳಿತದ ನಿರ್ದೇಶನದಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಪಲ್ಲಕ್ಕಿ ಉತ್ಸವವನ್ನು ಪೊಲೀಸರು ವಿಡಿಯೋ ಚಿತ್ರೀಕರಣ ಮಾಡಲಿದ್ದು ಅವಘಡಗಳು ನಿಯಂತ್ರಣಕ್ಕೆ ಬರಲು ಸಹಕಾರಿಯಾಗಿದೆ.ರಶೀದಿ ಪಡೆಯಿರಿ: