ಲೋಕಾ ಬಲೆ ವೇಳೆ ಎಸ್‌ಐ ಹೈಡ್ರಾಮಾ

KannadaprabhaNewsNetwork |  
Published : Jan 31, 2026, 03:00 AM IST
ಪಿಕಲ್‌ಬಾಲ್ | Kannada Prabha

ಸಾರಾಂಶ

ಕ್ರಿಮಿನಲ್ ಪ್ರಕರಣವೊಂದರಲ್ಲಿ ಸಹಾಯ ಮಾಡಲು ₹4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗೋವಿಂದರಾಜು ಬಂಧನದ ವೇಳೆ ಚಿರಾಡಿ ಹೈಡ್ರಾಮಾ ಸೃಷ್ಟಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕ್ರಿಮಿನಲ್ ಪ್ರಕರಣವೊಂದರಲ್ಲಿ ಸಹಾಯ ಮಾಡಲು ₹4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗೋವಿಂದರಾಜು ಬಂಧನದ ವೇಳೆ ಚಿರಾಡಿ ಹೈಡ್ರಾಮಾ ಸೃಷ್ಟಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗುರುವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ. ಖಾಕಿ ಸಮವಸ್ತ್ರದಲ್ಲಿದ್ದ ಇನ್‌ಸ್ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ಮಾಡಿದ್ದಾರೆ. ಈ ವೇಳೆ 5-6 ಲೋಕಾ ಅಧಿಕಾರಿಗಳ ತಂಡ ಗೋವಿಂದರಾಜು ಅವರನ್ನು ಹಿಡಿದಿಡಲು ಪರದಾಡಿದೆ.

ಕಳ್ಳರಂತೆ 2 ಕೈ ಲಾಕ್:

ಲೋಕಾಯುಕ್ತ ಪೊಲೀಸರು ಕಳ್ಳರನ್ನು ಹಿಡಿಯುವ ರೀತಿ ಗೋವಿಂದರಾಜು ಅವರ ಎರಡು ಕೈಗಳನ್ನು ಲಾಕ್ ಮಾಡಿದ್ದಾರೆ. ಈ ವೇಳೆ ಗೋವಿಂದರಾಜು ಜೋರಾಗಿ ಚೀರಾಡಿದ್ದಾರೆ. ಬಳಿಕ ಲೋಕಾಯುಕ್ತ ಪೊಲೀಸರೇ ಸಮಾಧಾನಪಡಿಸಿ, ಸೊಂಟದಲ್ಲಿದ್ದ ಸರ್ವಿಸ್ ಪಿಸ್ತೂಲ್ ವಶಕ್ಕೆ ಪಡೆದು ಬಳಿಕ ಜೀಪಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.

ನೆಟ್ಟಿಗರು ಆಕ್ರೋಶ:

ಬಂಧನದ ವೇಳೆ ಗೋವಿಂದರಾಜು ನಡೆಸಿದ ಹೈಡ್ರಾಮಾವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚ ಸ್ವೀಕಾರಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ಭ್ರಷ್ಟ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟಿಬಿ ಗೇಟ್‌ ಬದಲಿಸಲು ಹಣ ಕೊಡಿ : ಬಿವೈವಿ
ರಾಯ್‌ ಸಾವಿಗೆ ಐ.ಟಿ. ಕಿರುಕುಳ ಕಾರಣ : ಬಾಬು