- ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ 118ನೇ ಜಯಂತಿ
ದಾವಣಗೆರೆ: ಸಿದ್ಧಗಂಗಾ ಮಠದ ಶ್ರೀಗಳು ಗುರು ಪರಂಪರೆಗೆ ಮಾದರಿ ಆಗಿದ್ದರು. ಆ ನಿಟ್ಟಿನಲ್ಲಿಯೇ ನಡೆದಂತಹವರು. ಸರ್ವಧರ್ಮಗಳನ್ನು ಸಮಾನತೆಯಿಂದ ನೋಡಿದ ಮಹಾನ್ ಪುರುಷರು ಎಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದರು.
ನಗರದ ಕೊಂಡಜ್ಜಿ ರಸ್ತೆಯ ಆರ್ಟಿಒ ಕಚೇರಿ ಸಮೀಪ ಮಂಗಳವಾರ ಶ್ರೀ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಸರ್ಕಲ್ ಬಳಗದಿಂದ ಆಯೋಜಿಸಿದ್ದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ 118ನೇ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.ಸಾವಿರಾರು ವಿದ್ಯಾರ್ಥಿಗಳು ಸಿದ್ಧಗಂಗಾ ಶ್ರೀಗಳ ಆಶ್ರಯದಲ್ಲಿ ನೆರಳನ್ನು ಕಂಡಿದ್ದಾರೆ. ಇಂತಹ ಪೂಜ್ಯರು ಊರಿಗೊಬ್ಬಬ್ಬರು ಇರಬೇಕು. ಅಂತಹ ಪೂಜ್ಯರಿಂದ ದೇಶ, ನಾಡು ಶಾಂತಿ-ನೆಮ್ಮದಿಯಿಂದ ಇರಲು ಸಾಧ್ಯ ಎಂದರು.
- - - -1ಕೆಡಿವಿಜಿ31.ಜೆಪಿಜಿ:
ದಾವಣಗೆರೆಯಲ್ಲಿ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ ಕಾರ್ಯಕ್ರಮ ಸಂಪನ್ನಗೊಂಡಿತು.