ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗಾಗಿ ಎಂಟು ಸಾಹಿತಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಎಂಟು ಅರ್ಜಿಗಳನ್ನು ಆಯ್ಕೆ ಸಮಿತಿ ಪರಿಶೀಲನೆ ಮಾಡಿದಾಗ ಸಿದ್ದರಾಮ ಬಿರಾದಾರ ಉಳಿದ ಸಾಹಿತಿಗಳಿಗಿಂತ ಸಾಹಿತ್ಯಿಕವಾಗಿ, ಶೈಕ್ಷಣಿಕವಾಗಿ ಸೇರಿದಂತೆ ಇತರೇ ವಿಷಯಗಳ ಕುರಿತು ಹೆಚ್ಚು ಪುಸ್ತಕಗಳನ್ನು ರಚಿಸಿದ್ದಾರೆ. ಇದನ್ನು ಪರಿಗಣಿಸಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ತಿಳಿಸಿದ್ದಾರೆ.ಸಮ್ಮೇಳನ ಸರ್ವಾಧ್ಯಕ್ಷತೆಗೆ ಸಿದ್ದರಾಮ ಬಿರಾದಾರ ಅವರ ಹೆಸರನ್ನು ಹಾಸಿಂಪೀರ ವಾಲೀಕಾರ, ಶಿವು ಮಡಿಕೇಶ್ವರ, ಯಮನಪ್ಪ ಮಿಣಜಗಿ ಸೂಚಿಸಿದರು. ತಾಲೂಕು ಕಸಾಪ ಗೌರವಾಧ್ಯಕ್ಷ ಬಸವರಾಜ ಸೋಮಪುರ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಆರ್.ಜಿ.ಅಳ್ಳಗಿ ಅನುಮೋದಿಸಿದರು. ಎಸ್.ಎಲ್.ಓಂಕಾರ, ಬಸವರಾಜ ಮೇಟಿ ಅಂಗೀಕರಿಸಿದರು. ಸಭೆಯಲ್ಲಿ ಆಯ್ಕೆ ಸಮಿತಿ ಸದಸ್ಯರಾದ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಮಾಧವ ಗುಡಿ, ವಕೀಲರಾದ ವೀರಣ್ಣ ಮರ್ತುರ, ರವಿ ರಾಠೋಡ, ಚಂದ್ರಶೇಖರ ಸುಭಾನಪ್ಪರ, ಜಿಲ್ಲಾ ದತ್ತಿ ಸಂಚಾಲಕ ರಾಜೇಸಾಬ ಶಿವನಗುತ್ತಿ, ಎಂ.ಎನ್.ಅಂಗಡಗೇರಿ, ಶಾಂತಾ ಚೌರಿ, ಬಿ.ವ್ಹಿ.ಚಕ್ರಮನಿ ಇತರರು ಹಾಜರಿದ್ದರು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.