ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿ, ಪ್ರತಿಪಕ್ಷಗಳು ವಿಧಾನಮಂಡಲ ಉಭಯ ಸದನಗಳಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಉಂಟಾದ ದುರಂತ ಪ್ರಸ್ತಾಪಿಸಿವೆ. ಈ ಬಗ್ಗೆ ಸರ್ಕಾರವು ಬುಧವಾರ ಉತ್ತರ ನೀಡಲಿದೆ. ಈ ವೇಳೆ ಕಾಂಗ್ರೆಸ್ ಶಾಸಕರು ಗಟ್ಟಿಯಾಗಿ ಸರ್ಕಾರದ ಜತೆ ನಿಲ್ಲಬೇಕು ಎಂದು ತಿಳಿಸಿದರು ಎನ್ನಲಾಗಿದೆ.
ಇದೇ ವೇಳೆ ದುರ್ಘಟನೆ ಬಗ್ಗೆ ಸ್ಪಷ್ಟ ಚಿತ್ರ ನೀಡಿದ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಆಗಿರುವ ಬಗ್ಗೆ ಹಾಗೂ ಸಾವು ಸಂಭವಿಸಿರುವ ಬಗ್ಗೆ ಅಧಿಕಾರಿಗಳು ನಮಗೆ ಮಾಹಿತಿ ನೀಡಿರಲಿಲ್ಲ. ಮೊದಲ ಸಾವು ಸಂಭವಿಸಿದಾಗಲೇ ಮಾಹಿತಿ ನೀಡಿದ್ದರೆ ವಿಧಾನಸೌಧ ಭವ್ಯ ಮೆಟ್ಟಿಲ ಮೇಲಿನ ಕಾರ್ಯಕ್ರಮವನ್ನು ರದ್ದು ಮಾಡುತ್ತಿದ್ದೆವು. ಕಾರ್ಯಕ್ರಮ ಮುಗಿದ ಬಳಿಕವೂ ನಮಗೆ ಸಾವಿನ ಬಗ್ಗೆ ಮಾಹಿತಿ ಇರಲಿಲ್ಲ. ಸಂಜೆ 5.30 ಗಂಟೆಗೆ ಎ.ಎಸ್. ಪೊನ್ನಣ್ಣ ಅವರು ನನಗೆ ಮಾಹಿತಿ ನೀಡಿದರು. ಬಳಿಕ ನಾನು ನಗರ ಪೊಲೀಸ್ ಆಯುಕ್ತರನ್ನು ವಿಚಾರಿಸಿದರೆ ಆಗ ಅವರು ಸಾವು ಖಚಿತಪಡಿಸಿದರು. ಆಗಲೂ ನನಗೆ ಸರಿಯಾದ ಸಾವಿನ ಸಂಖ್ಯೆ ನೀಡಿರಲಿಲ್ಲ. ಹೀಗಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಾಯಿತು ಎಂದು ವಿವರಣೆ ನೀಡಿದರು ಎಂದು ಮೂಲಗಳು ತಿಳಿಸಿವೆ.ಸಿಎಲ್ಪಿಗೆ ಕೆ.ಎನ್.ರಾಜಣ್ಣ ಗೈರು