)
- ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಟು ಟೀಕೆ
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ತಮ್ಮ ಮೊದಲ ಮಗನನ್ನು ರಾಜಕೀಯದಲ್ಲಿ ಬೆಳೆಸಲು ಮುಂದಾಗಿದ್ದರು. ಅವರ ಅಕಾಲಿಕ ಮರಣದಿಂದ ಎರಡನೇ ಮಗನನ್ನು ರಾಜಕಾರಣಕ್ಕೆ ತಂದಿದ್ದಾರೆ. ವೈದ್ಯರಾಗಿದ್ದವರನ್ನು ರಾಜಕೀಯಕ್ಕೆ ಕರೆತಂದು ವಸೂಲಿಗೆ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.
ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯನವರು ಟೀಕಿಸುತ್ತಿರುವ ಬಗ್ಗೆ ತಾಲೂಕಿನ ಟಿ.ಎಸ್.ಛತ್ರ ಗ್ರಾಮದಲ್ಲಿ ಕೇಳಿದಾಗ, ದೇವೇಗೌಡರ ಕುಟುಂಬದ ಬಗ್ಗೆ ದೂರುವ ಕುಟುಂಬ ಸದಸ್ಯರು ಎಷ್ಟು ಜನ ರಾಜಕೀಯದಲ್ಲಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಬೇಕು. ಉಪಮುಖ್ಯಮಂತ್ರಿ ಕುಟುಂಬದಲ್ಲಿ ಎಷ್ಟು ಜನ ಅಧಿಕಾರ ಪಡೆದಿದ್ದಾರೆ. ಅವರ ತಮ್ಮನನ್ನೇ ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡಲು ಹೊರಟಿಲ್ಲವೇ. ಎರಡು, ಮೂರು ಜನ ಶಾಸಕರಿರುವ ಕುಟುಂಬಗಳು ಸಾಕಷ್ಟಿವೆ. ಹಾಗಾಗಿ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕುಟುಕಿದರು.ದೇವೇಗೌಡರು ನಮ್ಮನ್ನು ವಸೂಲಿ ಮಾಡುವುದಕ್ಕಾಗಿ ರಾಜಕೀಯಕ್ಕೆ ಕರೆತರಲಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಧ್ಯೇಯವನ್ನಿಟ್ಟುಕೊಂಡು ರಾಜಕೀಯಕ್ಕೆ ಬಂದೆವು. ಜನರೇ ನಮ್ಮನ್ನು ರಾಜಕಾರಣಕ್ಕೆ ಕರೆತಂದರು ಎಂದು ಹೇಳಿದರು.ಅಧಿಕಾರದ ರುಚಿ ಬಿಡೋಲ್ಲ:ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುವ ಬಗ್ಗೆ ಕೇಳಿದಾಗ, ಮುಂದಿನ ಚುನಾವಣೆವರೆಗೂ ಕಾದು ನೋಡಬೇಕು. ೨೦೨೮ಕ್ಕೆ ಮತ್ತೆ ನಾನೇ ಸಿಎಂ ಎನ್ನುತ್ತಿದ್ದಾರೆ. ಕೊನೆ ಉಸಿರಿರುವವರೆಗೂ ರಾಜಕೀಯ ಮಾಡುವೆ ಎಂದಿದ್ದಾರೆ. ಈ ಹಿಂದೆ ೨೦೧೩ರ ವಿಧಾನಸಭೆಯಲ್ಲಿ ಇದೇ ನನ್ನ ಕೊನೆ ಚುನಾವಣೆ ಎಂದಿದ್ದರು. ಅಧಿಕಾರದ ರುಚಿ ನೋಡಿದ ಮೇಲೆ ನಾನೇ ಪರ್ಮನೆಂಟ್ ಸಿಎಂ ಎನ್ನುತ್ತಿದ್ದಾರೆ. ಜನರೇ ಮುಂದೆ ತೀರ್ಮಾನ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು.ಕಾಂಗ್ರೆಸ್ನದ್ದು ಬರೀ ರಾಜಕೀಯ:
ಮೇ ತಿಂಗಳಲ್ಲಿ ಎಆರ್ಎಐ ಪರೀಕ್ಷಾ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸುವ ಗುರಿ ಇಟ್ಟುಕೊಂಡಿದ್ದೇನೆ. ರಾಜ್ಯ ಸರ್ಕಾರ ಯಾವ ಜಾಗವನ್ನು ಅಭಿವೃದ್ಧಿಪಡಿಸಿಕೊಡಲಿದೆ ಎಂಬುದನ್ನು ಹೇಳಬೇಕು. ಮಂಡ್ಯದಲ್ಲಿ ಎಆರ್ಎಐ ಪರೀಕ್ಷಾ ಕೇಂದ್ರ ಸ್ಥಾಪನೆಯಿಂದ ಟೌನ್ಶಿಪ್ ಬೆಳವಣಿಗೆ ಕಾಣಲಿದೆ ಎಂದು ನುಡಿದರು.ಉಪ ಚುನಾವಣೆ ಪ್ರಚಾರ: