ರಾಜ್ಯ ರಾಜಕೀಯದಲ್ಲಿ ಇತಿಹಾಸ ಬರೆದ ಸಿದ್ದರಾಮಯ್ಯ: ಸಚಿವ ತಿಮ್ಮಾಪೂರ

KannadaprabhaNewsNetwork |  
Published : Jan 07, 2026, 03:15 AM IST
ಪೊಟೋ ಜ.6ಎಂಡಿಎಲ್ 2ಎ, 2ಬಿ. ಸಿದ್ದರಾಮಯ್ಯನವರು ಸಿಎಂ ಆಗಿ ದಾಖಲೆ ಮಾಡಿರುವದಕ್ಕೆ ಕಾಂಗ್ರೆಸ್ ವತಿಯಿಂದ ಮುಧೋಳದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. | Kannada Prabha

ಸಾರಾಂಶ

ಸಿಎಂ ಆಗಿ ದೇವರಾಜ ಅರಸು ದಾಖಲೆ ಸರಿಗಟ್ಟಿದ ಕರ್ನಾಟಕ ರಾಜ್ಯದ ಜನಪ್ರೀಯ, ಅಹಿಂದ ನಾಯಕ, ಅತೀ ಹೆಚ್ಚು ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯನವರು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಯ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಮುಧೋಳ

ಸಿಎಂ ಆಗಿ ದೇವರಾಜ ಅರಸು ದಾಖಲೆ ಸರಿಗಟ್ಟಿದ ಕರ್ನಾಟಕ ರಾಜ್ಯದ ಜನಪ್ರೀಯ, ಅಹಿಂದ ನಾಯಕ, ಅತೀ ಹೆಚ್ಚು ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯನವರು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಯ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ನಗರದ ಬಸವೇಶ್ವರ ಸರ್ಕಲ್ ನಲ್ಲಿ ಮುಧೋಳ-ಲೋಕಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಮಂಗಳವಾರ ಆಯೋಜಿಸಿದ್ದ ಸಿಹಿ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸ ದಲ್ಲಿ ದೀರ್ಘಾವಧಿಯ ಕಾಲ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯನವರಿಗೆ ಅಭಿನಂದಿಸಿದ ಅವರು, ಕರ್ನಾಟಕದ ಕೌಟಿಲ್ಯ ಅರ್ಥಶಾಸ್ತ್ರಜ್ಞರಾಗಿ ದೇಶಕ್ಕೆ ಮಾದರಿಯಾಗಿದ್ದಾರೆ. ಜನಪರ ಯೋಚನೆ ಮತ್ತು ಯೋಜನೆ ರೂಪಿಸುವ ಸರಳ ವ್ಯಕ್ತಿತ್ವಹೊಂದಿರುವ ಮಹಾನ್ ನಾಯಕ ಇತರರಿಗೆ ಮಾದರಿಯಾಗಿ, ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಇರುವಂತೆ ಮಾಡಿದ್ದಾರೆಂದರು.

ಕಾಂಗ್ರೆಸ್ ಮುಖಂಡರಾದ ಉದಯಸಿಂಗ ಫಡತಾರೆ, ಶಿವಕುಮಾರ ಮಲಘಾಣ, ಅಶೋಕ ಕಿವಡಿ, ಸಿದ್ದು ಕಾಳಗಿ, ಐ.ಎಚ್.ಅಂಬಿ, ಸದುಗೌಡ ಪಾಟೀಲ ಸೇರಿದಂತೆ ಇತರರು ಸಾಂದರ್ಭಿಕವಾಗಿ ಮಾತನಾಡಿದರು. ಕಾಂಗ್ರೆಸ್ ನಾಯಕರಾದ ವೆಂಕಣ್ಣ ಗಿಡಪ್ಪನವರ, ಸಂಜಯ ತಳೇವಾಡ, ನಾರಾಯಣ ಹವಾಲ್ದಾರ, ಭೀಮಶಿ ಸರಕಾರಕುರಿ, ಹನುಮಂತ ತೇಲಿ, ಸಂತೋಷ ಪಾಲೋಜಿ, ಸಿದ್ರಾಮ ಕುರಿ, ಮಾರುತಿ ಮಾನೆ, ರಾಮನಗೌಡ ನಾಡಗೌಡ, ಮುದಕಣ್ಣ ಅಂಬಿಗೇರ, ಪರಮಾನಂದ ಕುಟ್ರಟ್ಟಿ, ಸಂಗಪ್ಪ ಇಮ್ಮನ್ನವರ, ಎಸ್.ಎ.ಸೂರ್ಯವಂಶಿ, ಬಸವಂತ ಕಾಟೆ, ಸುನಂದಾ ತೇಲಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬೈನಿಂದ ಊಟಿಯವರೆಗೆ ಸೈಕಲ್ ಪ್ರವಾಸ
ಸಾಹೇಬ್ರ ನೀರ್ ಬರದಿದ್ರ ನಾವ್ ಬರ್ಬಾದಾಗ್ತೇವ್ರಿ: ರೈತರ ಅಳಲು