ಕಾಯಕ ತತ್ವ ಸಾರಿದ ಸಿದ್ದರಾಮೇಶ್ವರರು

KannadaprabhaNewsNetwork |  
Published : Jan 24, 2025, 12:47 AM IST
ಪಟ್ಟಣದ ರಂಭಾಪುರಿ ಜಗದ್ಗುರು ವೀರ ಗಂಗಾಧರ ಸಮುದಾಯ ಭವನದಲ್ಲಿ ಭೋವಿ ಸಮಾಜದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಭೋವಿ ಸಮಾಜವು ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡು ಶ್ರಮ ಪಡುವ ಮೂಲಕ ತಮ್ಮ ದಿನನಿತ್ಯದ ಬದುಕು ಸಾಗಿಸುತ್ತಾರೆ

ಲಕ್ಷ್ಮೇಶ್ವರ: 12 ಶತಮಾನದಲ್ಲಿ ಬಾಳಿದ ಶಿವಶರಣ ಸಿದ್ದರಾಮೇಶ್ವರರು ಅನೇಕ ವಚನ ರಚಿಸಿ ಕಾಯಕ ತತ್ವ ಸಾರಿದ ಮಹಾನ್ ಶರಣಾಗಿದ್ದಾರೆ. ಅವರ ಆದರ್ಶ ನಾವು ಅಳವಡಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಪಟ್ಟಣದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ನಡೆದ ಸಿದ್ದರಾಮೇಶ್ವರರ 852 ನೇ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭೋವಿ ಸಮಾಜವು ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡು ಶ್ರಮ ಪಡುವ ಮೂಲಕ ತಮ್ಮ ದಿನನಿತ್ಯದ ಬದುಕು ಸಾಗಿಸುತ್ತಾರೆ. ಶಿವಶರಣ ಸಿದ್ದರಾಮೇಶ್ವರರು ಕಾಯಕ ತತ್ವದ ಮೇಲೆ ಅಪಾರ ನಂಬಿಕೆ ಇಟ್ಟು ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಿದ್ದರು. ಸಿದ್ದರಾಮೇಶ್ವರರು ಅನೇಕ ವಚನ ರಚಿಸಿ ಕಾಯಕದ ಮಹತ್ವ ಸಾರಿದ್ದಾರೆ. ಅನುಭವ ಮಂಟಪದಲ್ಲಿ ಶಿವಶರಣ ಸಿದ್ದರಾಮೇಶ್ವರರು ಅತ್ಯಂತ ಶ್ರೇಷ್ಠ ಶರಣಾಗಿದ್ದರು ಎಂಬುದು ಇತಿಹಾಸದಿಂದ ತಿಳಿದು ಬರುತ್ತದೆ. ಭೋವಿ ಸಮಾಜವನ್ನು ಎಸ್ಸಿ ಮೀಸಲಾತಿ ಪಡೆಯುವದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಕಲ್ಲು ಒಡೆದು ಜೀವನ ಸಾಗಿಸುವ ಬಡ ಭೋವಿ ಸಮಾಜದ ಜನತೆ ನಿಜವಾಗಿಯೂ ಹಿಂದುಳಿದವರಾಗಿದ್ದಾರೆ. ಭೋವಿ ಸಮಾಜದ ಪೀಠಾಧಿಪತಿ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಅತ್ಯಂತ ಪ್ರಭಾವಶಾಲಿಗಳಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಮಾಜ ಇನ್ನೂ ಉತ್ತಮ ರೀತಿಯಲ್ಲಿ ಸಾಗಲಿ ಎಂದು ಹೇಳಿದರು.

ಈ ವೇಳೆ ಭೋವಿ ವಡ್ಡರ ಸಮಾಜದ ಪೀಠಾಧಿಪತಿ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಮಾತನಾಡಿ, ಭೋವಿ ಸಮಾಜವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ಕಲ್ಲು ಒಡೆದು ಮನೆ ಮಂದಿರ ಕಟ್ಟಿ ಜೀವನ ಸಾಗಿಸುವ ಸಮಾಜ ನಮ್ಮದಾಗಿದೆ. ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಶೈಕ್ಷಣಿಕ ಹಾಗೂ ಸಾಮಾಜಿಕ, ಆರ್ಥಿಕ, ರಾಜಕೀಯ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಎತ್ತರಿಸುವ ಕಾರ್ಯ ನಾವೆಲ್ಲ ಮಾಡಬೇಕಿದೆ. ಮಹಿಳೆಯರು ತಮ್ಮ ಮಕ್ಕಳಿಗೆ ನೈತಿಕ ಮೌಲ್ಯ, ಸಂಸ್ಕೃತಿ ಹಾಗೂ ಸಂಪ್ರದಾಯ ತಿಳಿಸಿಕೊಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ರವಿ ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಫ್.ಎಸ್. ಕರಿದುರಗಣ್ಣವರ ಸಿದ್ದರಾಮೇಶ್ವರ ಕುರಿತು ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ, ರವಿ ಪೂಜಾರ, ಹುಚ್ಚಪ್ಪ ಸಂದಕದ, ರವಿ ಗುಂಜಿಕರ್, ನಿರ್ಮಲಾ ಬರದೂರ, ಜಯಕ್ಕ ಕಳ್ಳಿ, ರವಿಕುಮಾರ ಭೋವಿ, ಬಸವರಾಜ ಬಳ್ಳಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ವೇಳೆ ‌ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸಮಾಜದ ಹಿರಿಯರು ಇದ್ದರು.

ನಿವೃತ್ತ ಶಿಕ್ಷಕ ಎಫ್.ಎಸ್. ಮುದಗಲ್ಲ ಸ್ವಾಗತಿಸಿದರು. ಈರಣ್ಣ ಮುದಗಲ್ಲ ಕಾರ್ಯಕ್ರಮ ನಿರ್ವಹಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ