ಸಿದ್ದರಾಮಯ್ಯ ನಿಮ್ಮ ಸಾಧನೆಗಳ ಶ್ವೇತಪತ್ರ ಹೊರಡಿಸಿ

KannadaprabhaNewsNetwork |  
Published : Jun 13, 2025, 04:12 AM IST
ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಧಾನಿ ನರೇಂದ್ರ ಮೋದಿ ಸಾಧನೆಗೆ ಶೂನ್ಯ ಅಂಕ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಪ್ರಧಾನಿ ನರೇಂದ್ರ ಮೋದಿ ಸಾಧನೆಗೆ ಶೂನ್ಯ ಅಂಕ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ತಿರುಗೇಟು ನೀಡಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ. ರಾಜ್ಯದಲ್ಲಿ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ. ಅಲ್ಲದೇ ಅತೀ ಹೆಚ್ಚು ಬಜೆಟ್ ಮಂಡಿಸಿದ್ದಾಗಿ ಹೇಳುವ ಸಿದ್ದರಾಮಯ್ಯ ಅವರು ಮೊದಲು ತಮ್ಮ ಅಧಿಕಾರದ ಸಾಧನೆಗಳ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು. ಬಜೆಟ್‌ನಲ್ಲಿ ಯೋಜನಾ ವೆಚ್ಚ ಹಾಗೂ ಯೋಜನೇತರ ವೆಚ್ಚವೆಂಬ ಎರಡು ಭಾಗಗಳಿರುತ್ತವೆ. ಈ ಯೋಜನಾ ವೆಚ್ಚದಲ್ಲಿ ಸಿದ್ದರಾಮಯ್ಯ ಇರಿಸಿದ ಅನುದಾನ ಎಷ್ಟು? ಅದರಲ್ಲಿ ಏನೇಲ್ಲ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆಂಬುದನ್ನು ಬಹಿರಂಗಪಡಿಸಲಿ ಎಂದು ವಾಗ್ದಾಳಿ ನಡೆಸಿದರು.

ರಾಜಕೀಯ ಇತಿಹಾಸದಲ್ಲೇ ಭಾರತಕ್ಕಿದು ಪರಿವರ್ತನೆ ಯುಗ. 11 ವರ್ಷದಲ್ಲಿ ಬಡತನವನ್ನು ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಸಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಬಡತನ ನಿರ್ಮೂಲನೆಗೆ ಮೋದಿ ಸರ್ಕಾರ ಪಣ ತೊಟ್ಟಿದೆ. ಇನ್ನು ಕೆಲವೇ ದಿನಗಳಲ್ಲಿ ಭಾರತ ಜಗತ್ತಿನ 3ನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತ ಬಡತನ ರೇಖೆಯನ್ನು ಅಳಿಸಿ ಹಾಕುವತ್ತ ಮಹತ್ತರ ಹೆಜ್ಜೆಯಿರಿಸಿದೆ. 2011-12ರಲ್ಲಿ ಶೇ.27.1 ರಷ್ಟಿದ್ದ ಬಡತನ ಪ್ರಮಾಣ ಇದೀಗ ಅತ್ಯಂತ ಕನಿಷ್ಠ ಮಟ್ಟ ಶೇ.5.3ಕ್ಕೆ ಇಳಿದಿದೆ. 26 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರ ಬಂದಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನಾದರೂ ವಿರೋಧ ಪಕ್ಷದವರು ಪ್ರಧಾನಿ ಬಗ್ಗೆ ವೃಥಾ ಆರೋಪ ನಿಲ್ಲಿಸಲಿ. ಯಾರ ಅವಧಿಯಲ್ಲಿ ಏನೇನು ಸಾಧನೆಯಾಗಿದೆ ಎಂಬುದನ್ನು ಅರಿತುಕೊಳ್ಳಲಿ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯದಲ್ಲೂ ಮುಂದಿದೆ. ತಾವೇ ಸಾಮಾಜಿಕ ಹರಿಕಾರರು ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದವರು ಸಂಪುಟದಲ್ಲಿ ಶೇ.20ರಷ್ಟ ಸ್ಥಾನಮಾನ ಸಹ ಹಿಂದುಳಿದವರಿಗೆ ಕೊಟ್ಟ ಉದಾಹರಣೆಯಿಲ್ಲ. ಆದರೆ, ಮೋದಿ ಅಧಿಕಾರ ಮಂತ್ರಿ ಮಂಡಲದಲ್ಲಿ ಶೇ.60ರಷ್ಟು ಎಸ್ಸಿ, ಎಸ್ಟಿಯವರಿಗೆ ಅವಕಾಶ ನೀಡಿ ಸಾಮಾಜಿಕ ನ್ಯಾಯ ಮೆರೆದಿದೆ. ಭಾರತ ಹತ್ತು ವರ್ಷದ ಹಿಂದೆ ಆಮದು ಮೇಲೆ ಅವಲಂಬಿತವಾಗಿತ್ತು. ಆದರೆ ಇಂದು ರಫ್ತು ವಲಯದಲ್ಲಿ ವಿಶ್ವ ಪ್ರಸಿದ್ಧವಾಗಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮಾಜಿ ಶಾಸಕ ರಮೇಶ ಭೂನೂರ, ಸೋಮನಗೌಡ ಪಾಟೀಲ ಶಾಸನೂರ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ‌, ಉಮೇಶ ಕಾರಜೋಳ, ವಿಜಯ್ ಜೋಶಿ, ಪಾಪುಸಿಂಗ್ ರಜಪೂತ ಮುಂತಾದವರು ಇದ್ದರು.------

ಕೋಟ್‌ಆಲಮಟ್ಟಿ ಯೋಜನೆಗೆ ಎಷ್ಟು ಕೋಟಿ ಕೊಟ್ಟಿದ್ದೀರಿ? 130 ಟಿಎಂಸಿ ನೀರು ಪಡೆಯಲು ಈವರೆಗೆ ಏನು ತಯಾರಿ ಮಾಡಿದ್ದೀರಿ? ಯೋಜನೆ ಮೇಲಿನ ಬ್ಯಾಂಕ್ ಸಾಲದ ಅಸಲು, ಬಡ್ಡಿ ಸಹ ಕೊಡಲಾಗುತ್ತಿಲ್ಲ. ಕಾಂಗ್ರೆಸ್ ಅವಧಿಯಲ್ಲಿ 3400 ರೈತರು, 713 ಬಾಣಂತಿಯರ ಸಾವಾಗಿದೆ. 779 ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣದ ವರದಿಯಾಗಿವೆ. ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ 11 ಜನ ಮೃತರಾದರು. ಯಾವ ನೈತಿಕತೆ ಇಟ್ಟುಕೊಂಡು ಮೋದಿ ಆಡಳಿತದ ಬಗ್ಗೆ ಇವರು ಪ್ರಶ್ನೆ ಮಾಡುತ್ತಾರೆ?.ಗೋವಿಂದ ಕಾರಜೋಳ, ಚಿತ್ರದುರ್ಗ ಸಂಸದ

------ಬಾಕ್ಸ್‌

ಜಾತಿ ಸಮೀಕ್ಷೆ ರಾಜಕೀಯ ಗಿಮಿಕ್: ಜಾತಿ ಸಮೀಕ್ಷೆಗೆ ನಾವು ವಿರೋಧ ಮಾಡಿದ್ದೇವೆ ಎಂದು ಹೇಳುವುದು ಮೂರ್ಖತನ. ಇದು ಒಂದು ಗಿಮಿಕ್. ಅಭಿವೃದ್ಧಿ ಮಾಡಲು ಆಗದ ಕಾರಣ ಜನರ ದೃಷ್ಠಿಕೋನ ಬೇರೆ ಕಡೆ ಸೆಳೆಯಲು ಈ ಚರ್ಚೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿಯೇ ಮೂರು ಗುಂಪು ಇದೆ. ಅವರೇ ಗೊಂದಲ ಸೃಷ್ಟಿಸುತ್ತಿದ್ದಾರೆ. ಬಿಜೆಪಿಯೂ ಜಾತಿ ಗಣತಿ ಬಗ್ಗೆ ಪ್ರಸ್ತಾಪಿಸಿದೆಯಾದರೂ ಕಾಂಗ್ರೆಸ್‌ನಂತೆ ಗಿಮಿಕ್ ಮಾಡುವ ಉದ್ದೇಶ ಇಲ್ಲ. ಜಾತಿ-ಧರ್ಮಗಳ ಮಧ್ಯೆ ಒಡಕು ಉಂಟು ಮಾಡುವ ಉದ್ದೇಶ ಬಿಜೆಪಿಗೆ ಇಲ್ಲ. ಈಗಾಗಲೇ ಶೇ.33 ರಷ್ಟು ಮಹಿಳಾ ಮೀಸಲಾತಿ ಕಲ್ಪಿಸುವ ಬಿಲ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಅದನ್ನು ಅನುಷ್ಠಾನಕ್ಕೆ ತರಲು ಜಾತಿಗಣತಿ ಅವಶ್ಯಕ. ಏಕೆಂದರೆ ಮಹಿಳಾ ಮೀಸಲಾತಿಯಲ್ಲಿಯೂ ಒಳಮೀಸಲಾತಿ ನೀಡುವ ಉದ್ದೇಶ ಹೊಂದಲಾಗಿದೆ. ಅದರಲ್ಲಿರುವ ಎಸ್ಸಿ-ಎಸ್ಟಿ ಮಹಿಳೆಯರಿಗೆ ಮೀಸಲಾತಿ ನೀಡಬೇಕಿರುವ ಕಾರಣಕ್ಕೆ ಜಾತಿಗಣತಿ ವಿಚಾರ ಪ್ರಸ್ತಾಪಿಸಲಾಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''