ಸಿದ್ದಸಿರಿ ಸಹಕಾರಿಗೆ 26.14 ಕೋಟಿ ನಿವ್ವಳ ಲಾಭ

KannadaprabhaNewsNetwork |  
Published : Sep 22, 2025, 01:02 AM IST
ಸಿದ್ದಸಿರಿ ಸಹಕಾರಿಗೆ ರೂ.26.14 ಕೋಟಿ ನಿವ್ವಳ ಲಾಭ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಸಿಬ್ಬಂದಿ ಹಾಗೂ ಗ್ರಾಹಕರ ಸಹಕಾರದಿಂದ ಸಿದ್ದಸಿರಿ ಸೌಹಾರ್ದ ಸಹಕಾರಿ ₹ 4117.94 ಕೋಟಿ ಠೇವಣಿ ಹೊಂದಿದ್ದು, 2024-25ನೇ ಸಾಲಿನಲ್ಲಿ ₹ 26.14 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸೌಹಾರ್ದದ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಸಿಬ್ಬಂದಿ ಹಾಗೂ ಗ್ರಾಹಕರ ಸಹಕಾರದಿಂದ ಸಿದ್ದಸಿರಿ ಸೌಹಾರ್ದ ಸಹಕಾರಿ ₹ 4117.94 ಕೋಟಿ ಠೇವಣಿ ಹೊಂದಿದ್ದು, 2024-25ನೇ ಸಾಲಿನಲ್ಲಿ ₹ 26.14 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸೌಹಾರ್ದದ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಭಾನುವಾರ ನಡೆದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ 19ನೇ ಸರ್ವ ಸಾಧಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲೇ ನಂಬರ್-1 ಸೌಹಾರ್ದ ಸ್ಥಾನದಲ್ಲಿರುವ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ಪ್ರಸಕ್ತ ವರ್ಷ ಶೇ.18 ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಹಕಾರಿಯ ಶೇರು ಬಂಡವಾಳ ₹ 67.80 ಕೋಟಿ, ದುಡಿಯುವ ಬಂಡವಾಳ ₹ 4549.37 ಕೋಟಿ ಇದ್ದು, ಠೇವಣಿಗಳು ₹ 4117.94 ಕೋಟಿ, ಸಾಲ ಮುಂಗಡ ₹ 3038.59 ಕೋಟಿ, ಕಾಯ್ದಿಟ್ಟ ನಿಧಿ ₹ 85.67 ಕೋಟಿ, ನಿಶ್ಚಿತ ಆಸ್ತಿಗಳು ₹ 49.33 ಕೋಟಿ, ಹೂಡಿಕೆಗಳು ₹ 389.12 ಕೋಟಿ ಹೊಂದಿದೆ. ರಾಜ್ಯಾದ್ಯಂತ ಸಂಪೂರ್ಣ ಗಣಕೀಕೃತ 211 ಶಾಖೆಗಳಾಗಿ ಕಾರ್ಯನಿರ್ವಹಿಸುತ್ತಿದ್ದು, 17 ಸ್ವಂತ ಕಟ್ಟಡಗಳು, 24 ಖಾಲಿ ನಿವೇಶನಗಳನ್ನು ಹೊಂದಿದೆ. ಒಟ್ಟು 81,923 ಸದಸ್ಯರನ್ನು ಸಂಘ ಹೊಂದಿದೆ ಎಂದು ತಿಳಿಸಿದರು.

ಇದೇ ವೇಳೆ ಇತ್ತೀಚೆಗೆ ನಿಧನರಾದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಹಿತ್ಯ, ಕಲಾ, ಸಹಕಾರ ಮತ್ತು ಧಾರ್ಮಿಕ ಕ್ಷೇತ್ರಗಳ ಗಣ್ಯರಿಗೆ ಬ್ಯಾಂಕ್‌ ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ, ಸಿದ್ದಸಿರಿ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ, ರಮೇಶ ಬಿರಾದಾರ, ಅಶೋಕಗೌಡ ತೊರವಿ, ಶೈಲಜಾ ಪಾಟೀಲ, ಸೀಮಾ ಕೋರೆ, ಸೋಮಶೇಖರ ಬಂಡಿ, ಡಾ.ಬಸನಗೌಡ ಪಾಟೀಲ ನಾಗರಾಳ ಹುಲಿ, ಗಣಪತಿ ಜಾಧವ, ವ್ಯವಸ್ಥಾಪಕ ನಿರ್ದೇಶಕ ಜೋತಿಬಾ ಖಂಡಗಾಳೆ ಉಪಸ್ಥಿತರಿದ್ದರು. ರಾಜಶೇಖರ ಸ್ವಾಮಿ ವರದಿ ವಾಚಿಸಿದರು. ಆರ್‌.ಟಿ.ಪಾಟೀಲ ವಾದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೃಹಲಕ್ಷ್ಮಿ ಹಣ ಮುಂದಿನ ವಾರ ಖಾತೆಗೆ ಜಮೆ: ಎಂ.ಎಲ್.ದಿನೇಶ್
ಗೆಜ್ಜಲಗೆರೆ ಗ್ರಾಮಸ್ಥರ ಪ್ರತಿಭಟನೆ ರಾಜಕೀಯ ಪ್ರೇರಿತ: ಸತೀಶ್ ಆರೋಪ