ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ತಾಲೂಕು ಕೇಂದ್ರದ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುವುದು ಸುಲಭವಲ್ಲ. ಆದರೆ, ಸಿದ್ದೇಗೌಡರು ಒಂದು ಸಣ್ಣ ಕಪ್ಪುಚುಕ್ಕೆ ಇಲ್ಲದಂತೆ ಉತ್ತಮ ಸಾಧನೆಯೊಂದಿಗೆ ಸೇವೆ ಸಲ್ಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಸರಳ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಸಿದ್ದೇಗೌಡರು ಯಾವೊಂದು ಕಡತಗಳನ್ನು ಬಾಕಿ ಉಳಿಸಿಕೊಳ್ಳದೆ ಸಕಾಲದಲ್ಲಿ ವಿಲೇವಾರಿ ಮಾಡುತ್ತಿದ್ದರು, ಉತ್ತಮ ವ್ಯವಹಾರ ಮಾಡುವ ಮೂಲಕ ಇಲಾಖೆ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾರೆ. ಇವರಲ್ಲಿದ್ದ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಇಲಾಖೆಯಲ್ಲಿ ಯಾವ ರೀತಿ ಕೆಲಸ ಮಾಡಬೇಕೆಂಬುದನ್ನು ಇತರೆ ಸಿಬ್ಬಂದಿ ಕಲಿಯಬೇಕಿದೆ ಎಂದು ತಿಳಿಸಿದರು.ಸಿದ್ದೇಗೌಡರ ನಿವೃತ್ತಿ ಜೀವನ ಸುಖಕರವಾಗಿರಲಿ, ಸೇವಾ ನಿವೃತ್ತಿ ನಂತರ ಮನೆಯಲ್ಲಿ ಕೂರುವ ಬದಲು ಉತ್ತಮ ಆರೋಗ್ಯ ಕಾಪಾಡಿಕೊಂಡು ಕ್ಷೇತ್ರ ಅಧಿಕಾರಿಯಾಗಿ ಬಂದು ಅಂಚೆ ಇಲಾಖೆಗೆ ಮತ್ತಷ್ಟು ಸೇವೆ ಸಲ್ಲಿಸಬೇಕು ಎಂದು ಹೇಳಿದರು.
ಸಿದ್ದೇಗೌಡರ ಪುತ್ರಿ ಮಧುಶ್ರೀ ಮಾತನಾಡಿ, ತಂದೆ ಅವರ ಸಾಧನೆ ಕೇಳಿ ಬಹಳ ಖುಷಿಯಾಯಿತು. ಕರ್ತವ್ಯದಲ್ಲಿ ನಿಷ್ಠೆ, ಪ್ರಾಮಾಣಿಕತೆ ಹಾಗೂ ಮಾನವೀಯತೆಯಿಂದ ಜನಮನ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಸಿದ್ದೇಗೌಡರಿಗೆ ಮಾಶಾಸನ ಮಂಜೂರಾತಿ ಪತ್ರ ನೀಡಿ ಗೌರವಿಸಲಾಯಿತು.