ಕನ್ನಡಪ್ರಭ ವಾರ್ತೆ ಬೀದರ್
ಅವರು ಭಾನುವಾರ ಇಲ್ಲಿನ ಬೆಲ್ದಾಳೆ ಕನ್ವೆಶನ್ ಸಭಾಂಗಣದಲ್ಲಿ ಶ್ರಾವಣ ಮಾಸದ ಅಂಗವಾಗಿ ಶ್ರಾವಣ ಶಿವ ದರ್ಶನ ಸಂಚಾರ, ವೀರಶೈವ ಲಿಂಗಾಯತ ಧರ್ಮಗ್ರಂಥ ಸಿದ್ಧಾಂತ ಶಿಖಾಮಣಿ ಅಭಿಯಾನ ಸಮಾರೋಪ ಹಾಗೂ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿ, ಭಗವಂತನ ಸಾಕ್ಷಾರಕ್ಕೆ ಸಮನ್ವಯವನ್ನು ಸಿದ್ಧಾಂತ ಶಿಖಾಮಣಿ ಪ್ರತಿಪಾದನೆ ಮಾಡುತ್ತದೆ.
ಜ್ಞಾನ ಮತ್ತು ಕರ್ಮವನ್ನು ಆಶ್ರಯಿಸಿಕೊಳ್ಳುವವನೇ ಭಗವತ್ ಸಾಕ್ಷಾಕಾರವನ್ನು ಪಡೆಯುತ್ತಾನೆ. ಇಂಥ ಅನೇಕ ಸಮನ್ವಯಗಳನ್ನು ಮಾಡುವದೇ ಸಿದ್ಧಾಂತ ಶಿಖಾಮಣಿ ಆಗಿದೆ. ಕೆಲವರು ತಮ್ಮ ಮೂಗಿನ ನೇರವಾಗಿ ಮಾತನಾಡುವವರಿಗೆ ಈ ಗ್ರಂಥದ ಗಂಧ ಗಾಳಿ ಗೊತ್ತಿಲ್ಲ ಎಂದು ಅರ್ಥೈಸಿಕೊಳ್ಳಬೇಕು. ಧರ್ಮ, ಅದರ ಸಿದ್ಧಾಂತಕ್ಕಾಗಿ ಶ್ರಮಿಸುತ್ತಿರುವ ರಾಜಶೇಖರ ಶಿವಾಚಾರ್ಯರ ಶ್ರಮ ಕಾರ್ಯಕ್ರಮದ ಸಮಾರೋಪದ ಅದ್ಭುತ ಯಶಸ್ವಿಗೆ ಸಾಕ್ಷಿಯಾಗಿದೆ ಎಂದರು.ಸಿದ್ಧಾಂತ ಶಿಖಾಮಣಿ ತಿರಸ್ಕರಿಸುವವರು ಪೂರ್ಣ ಓದಿ:ಯಾವುದೇ ಗ್ರಂಥವನ್ನು ವರ್ಣಿಸುವಾಗ ಅಪೂರ್ಣ ಓದಿದ್ದರೂ ಸೈ ಆದರೆ ಅದನ್ನು ತಿರಸ್ಕರಿಸುವ ಮೊದಲು ಪೂರ್ಣವಾಗಿ ತಿಳಿದುಕೊಳ್ಳಬೇಕು. ಸಿದ್ಧಾಂತ ಶಿಖಾಮಣಿಯನ್ನು ವಿರೋಧಿಸಿ ತಿರಸ್ಕರಿಸುವವರು ಮೊದಲು ಅದನ್ನು ಪೂರ್ಣವಾಗಿ ಓದಿ ತಿಳಿದುಕೊಳ್ಳಲಿ ಎಂದು ತಿಳಿಸಿದ್ದಾರೆ.ಐವರಿಗೆ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ ಪ್ರದಾನ:
ಬೆಮಳಖೇಡಾ-ಗೋರಟಾ ಹಿರೇಮಠದ ಪೀಠಾಧಿಪತಿಗಳಾದ ಡಾ. ರಾಜಶೇಖರ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಗುರುಪಾದ ಶಿವಾಚಾರ್ಯರು ಹಿರೇಮಠ ಸಂಸ್ಥಾನ, ಬೇಮಳಖೇಡ, ವೀರಭದ್ರ ಶಿವಾಚಾರ್ಯರು ಸಾವಿರ ದೇವರ ಸಂಸ್ಥಾನ ಮಠ, ಬಿಚ್ಚಾಲಿ, ಕಡಗಂಚಿ ಗುರುಲಿಂಗ ಶಿವಾಚಾರ್ಯರು ಬೃಹನ್ಮಠ ಚಿಟಗುಪ್ಪ-ಚಾಂಗಲೇರ, ಶಿವಾನಂದ ಶಿವಾಚಾರ್ಯರು ಹಿರೇಮಠ ತಮಲೂರು, ಕರುಣಾದೇವಿ ಮಾತಾ ಶ್ರೀ ಅಕ್ಕಮಹಾದೇವಿ ಚೈತನ್ಯಪೀಠ, ಶ್ರೀಶೈಲಂ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್, ಕಾರ್ಯಕ್ರಮದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಶಿವಶರಣಪ್ಪ ವಾಲಿ ಮೆರವಣಿಗೆಗೆ ಚಾಲನೆ ನೀಡಿದರು.