ಸಿದ್ಧೇಶ್ವರ ಜಾತ್ರೆ, ಅಕ್ಷತಾರ್ಪಣೆ-ಬೋಗಿ ಕಾರ್ಯಕ್ರಮ

KannadaprabhaNewsNetwork |  
Published : Jan 14, 2025, 01:00 AM IST
ಬೋಗಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ಸಿದ್ಧೇಶ್ವರ ದೇವಸ್ಥಾನದ ಮುಂದೆ ವಿವಿಧ ಕಾರ್ಯಕ್ರಮಗಳು ಜರುಗಿದವು. ವೇದಿಕೆಯ ಮೇಲೆ ಸಿದ್ಧರಾಮನ ಯೋಗ ದಂಡದೊಂದಿಗೆ ಮಧ್ಹಾಹ್ನ 12.35ಕ್ಕೆ ಕುಂಬಾರ ಗುಂಡಮ್ಮಳ ಅಕ್ಷತಾರ್ಪಣೆ ಬೋಗಿ ಕಾರ್ಯಕ್ರಮ ಮತ್ತು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಚರಿತ್ರೆ ಓದುವ ಕಾರ್ಯಕ್ರಮ ನಡೆಯಿತು. ಬಳಿಕ ಶುಭ ಮಾಂಗಲ್ಯದ ಧಾರಣ ಅಕ್ಷತಾರೋಪಣ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ಸಿದ್ಧೇಶ್ವರ ದೇವಸ್ಥಾನದ ಮುಂದೆ ವಿವಿಧ ಕಾರ್ಯಕ್ರಮಗಳು ಜರುಗಿದವು. ವೇದಿಕೆಯ ಮೇಲೆ ಸಿದ್ಧರಾಮನ ಯೋಗ ದಂಡದೊಂದಿಗೆ ಮಧ್ಹಾಹ್ನ 12.35ಕ್ಕೆ ಕುಂಬಾರ ಗುಂಡಮ್ಮಳ ಅಕ್ಷತಾರ್ಪಣೆ ಬೋಗಿ ಕಾರ್ಯಕ್ರಮ ಮತ್ತು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಚರಿತ್ರೆ ಓದುವ ಕಾರ್ಯಕ್ರಮ ನಡೆಯಿತು. ಬಳಿಕ ಶುಭ ಮಾಂಗಲ್ಯದ ಧಾರಣ ಅಕ್ಷತಾರೋಪಣ ನಡೆಸಲಾಯಿತು.

ಶಾಸ್ತ್ರಬದ್ಧವಾಗಿ ಸಜ್ಜುಗೊಂಡ ಮದುವೆ ಮಂಟಪದಲ್ಲಿ ಸಿದ್ದರಾಮನ ಕುಂಬಾರ ಕನ್ನೆಯೊಬ್ಬಳ ಮೂರ್ತಿಗಳು ಮದುವೆ ಮಕ್ಕಳಾಗಿದ್ದರು. ಶಿವಯೋಗಿಯ ಯೋಗ ದಂಡದೊಂದಿಗೆ ವಿವಾಹ ಸಾಂಕೇತಿಸಲು ಸಾಲಂಕ್ರುತಗೊಂಡ 7 ನಂದಿಕೋಲುಗಳು ಹಾಗೂ ಶಿವಯೋಗಿ ಸಿದ್ಧರಾಮೇಶ್ವರ ಉತ್ಸವ ಮೂರ್ತಿಯು ಮನಸೂರೆಗೊಂಡವು. ಸಂಪ್ರದಾಯದಂತೆ ವಿಜಯಪುರ ನಗರ ಶಾಸಕರಾದ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ನೇತೃತ್ವ ವಹಿಸಿದ್ದರು.

ಅಕ್ಷತೆಯ ಕಾರ್ಯಕ್ರಮದ ವಿದಿ ವಿಧಾನದಂತೆ ನೆರೆವೇರಿತು. ಹೆಣ್ಣು ಮಕ್ಕಳಿಗೆ ಅರಿಶಿಣ, ಕುಂಕುಮ ನೀಡಲಾಯಿತು.

ಕಾರ್ಯಕ್ರಮವನ್ನು ವೇದಮೂರ್ತಿ ಮುರಗಯ್ಯಾ ಗಚ್ಚಿನಮಠ ನೆರೆವೇರಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ಸಿದ್ಧೇಶ್ವರ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.

ಸಂಸ್ಥೆಯ ಉಪಾಧ್ಯಕ್ಷ ಸಂಗು ಸಜ್ಜನ, ಚೇರಮನ್‌ ಬಸಯ್ಯಾ ಹಿರೇಮಠ, ಪದಾಧಿಕಾರಿಗಳಾದ ಬಿ.ಎಸ್.ಸುಗೂರ, ಸದಾನಂದ ದೇಸಾಯಿ, ಶಿವಾನಂದ ನೀಲಾ, ಗುರು ಗಚ್ಚಿನಮಠ, ಅಮೃತ ತೋಸನಿವಾಲ, ಪ್ರೇಮಾನಂದ ಬಿರಾದಾರ, ರಾಹುಲ ಜಾಧವ, ಪಾಂಡು ಸಾಹುಕಾರ ದೊಡಮನಿ, ಚಂದ್ರು ಚೌಧರಿ, ಮುಂತಾದ ಪ್ರಮುಖರು ಹಾಗೂ ಭಕ್ತಾದಿಗಳು ಹಾಜರಿದ್ದರು.

ಮಹಾಪ್ರಸಾದ ಸೇವೆಯನ್ನು ಅರುಣ ಹುಂಡೆಕಾರ ನೇರೆವೆರಿಸಿದರು. ಜನೇವರಿ 14ರಂದು ಮಧ್ಯಾಹ್ನ 12.30ಕ್ಕೆ ನಂದಿ ಧ್ವಜಗಳಿಗೆ ಪೂಜೆ ಹಾಗೂ ಹೋಮ-ಹವನ ಕಾರ್ಯಕ್ರಮ ಜರುಗಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ