ಕನ್ನಡಪ್ರಭ ವಾರ್ತೆ, ದಾವಣಗೆರೆ:
ನಗರದಲ್ಲಿ ಶನಿವಾರ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ.ದಾಸಕರಿಯಪ್ಪ ಪರ ಬೃಹತ್ ರೋಡ್ ಶೋ ನಡೆಸಿ, ಮತಯಾಚಿಸಿದರು. ಈ ವೇಳೆ ಮಾತನಾಡಿ, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಸಿದ್ದರಾಮಯ್ಯ ಗೊಂದಲಕ್ಕೆ ಸಿಲುಕಿದ್ದಾರೆ. ಎರಡೂ ಕ್ಷೇತ್ರ ಕೈತಪ್ಪುವ ಭೀತಿಯಿಂದ ಸಿದ್ದುಗೆ ನಿದ್ದೆಯೇ ಬರ್ತಿಲ್ಲ. ಸಚಿವರು ಸೂಟ್ ಕೇಸ್ ಹಿಡಿದುಕೊಂಡು ಬಂದು, ಅದೇ ಹಣದಲ್ಲಿ ಗೆಲ್ಲಲು ಬಂದಿದ್ದಾರೆ. ವಾಲ್ಮೀಕಿ ನಿಗಮದ ಹಣ ಲೂಟಿ ಮಾಡಿ ಲೋಕಸಭೆ ಚುನಾವಣೆ ಮಾಡಿದ್ದರು. ಈಗ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಅದೇ ರೀತಿ ಮಾಡಲು ಬಂದಿದ್ದಾರೆ ಎಂದು ಆರೋಪಿಸಿದರು.
ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಾಗಲಿ, ಮುಖ್ಯಮಂತ್ರಿಗಾಗಲಿ ಇಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಮಾಡಿದವರು ಅವರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ನವರು ಮತದಾರರಿಗೆ ದುಡ್ಡು ಹಂಚುತ್ತಿದ್ದಾರೆ. ‘ಶಾಮನೂರುರ ನೋಟು, ಬಿಜೆಪಿಗೆ ಓಟು’ ಎಂಬುದಾಗಿ ನಮ್ಮ ಕಾರ್ಯಕರ್ತರು ಹೇಳುತ್ತಿದ್ದಾರೆ. ಆದರೆ, ಎರಡೂ ಕ್ಷೇತ್ರದಲ್ಲೂ ಕಮಲದ ಹೂವನ್ನು ಅರಳಿಸಬೇಕೆಂಬ ಸಂಕಲ್ಪವನ್ನು ಸ್ವತಃ ಮತದಾರರು ಮಾಡಿದ್ದಾರೆ ಎಂದರು. ಈ ವೇಳೆ, ನೆರೆದಿದ್ದ ಕಾರ್ಯಕರ್ತರು, ‘ಶಾಮನೂರುರ ನೋಟು, ಬಿಜೆಪಿಗೆ ಓಟು’ ಎಂದು ಘೋಷಣೆ ಕೂಗಿದರು.ಕಾಂಗ್ರೆಸ್ನವರು ಹಣದಿಂದ ಮತ ಗಳಿಸಲು ಸಾಧ್ಯವಿಲ್ಲ. ಮತದಾರರು ಈಗಾಗಲೇ ಬಿಜೆಪಿಯನ್ನು ಗೆಲ್ಲಿಸುವ ತೀರ್ಮಾನ ಮಾಡಿದ್ದಾರೆ. ‘ಹಿಂದುಳಿದವರ ನಡೆ, ಬಿಜೆಪಿ ಕಡೆ’ ಎನ್ನುವ ಸ್ಥಿತಿ ದಾವಣಗೆರೆಯಲ್ಲಿದೆ. ಸರ್ವ ಸಮಾಜದವರೂ ನಮ್ಮ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರನ್ನು ಗೆಲ್ಲಿಸಲು ಸಂಕಲ್ಪ ತೊಟ್ಟಿದ್ದಾರೆ ಎಂದು ಅವರು ಹೇಳಿದರು.
ಬೃಹತ್ ರೋಡ್ ಶೋ: