ಕನ್ನಡಪ್ರಭ ವಾರ್ತೆ ಕೋಲಾರ
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ನೆಪದಲ್ಲಿ ಭೋವಿ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ಮಂಡಳಿ, ಆದಿಜಾಂಭವ ಅಭಿವೃದ್ಧಿ ಮಂಡಳಿ ಸೇರಿ ಎಲ್ಲಾ ಅಭಿವೃದ್ಧಿ ನಿಗಮ, ಮಂಡಳಿಗಳಿಗೆ ಮಂಜೂರು ಮಾಡಿದ್ದ ಅನುದಾನಗಳನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಸಿಕೊಳ್ಳಲಾಗಿದೆ ಎಂದು ಹೇಳಿದರು.
ಅಹಿಂದ ನಾಯಕರೆನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅಹಿಂದ ವರ್ಗಗಳನ್ನು ಅಭಿವೃದ್ಧಿಪಡಿಸದೆ ನಿಗಮ ಮಂಡಳಿಗಳ ಅನುದಾನ ದುರ್ಬಳಸಿಕೊಂಡು ಅಹಿಂದ ವರ್ಗದವರ ಕೈಗೆ ಚಿಪ್ಪು ನೀಡಿದ್ದಾರೆ. ೩೯ ಸಾವಿರ ಕೋಟಿ ರು. ಗ್ಯಾರಂಟಿಗಳಿಗೆ ದುರ್ಬಳಸಿಕೊಂಡು ಒಂದು ಕೋಮಿನವರನ್ನು (ಅಲ್ಪಸಂಖ್ಯಾತರನ್ನು) ಮಾತ್ರ ತುಷ್ಟೀಕರಣ ಮಾಡುತ್ತಿದ್ದಾರೆ ಎಂದು ದೂರಿದರು.ಸಚಿವ ಮಹಾದೇವಪ್ಪ ಕೆ.ಆರ್.ಎಸ್. ಡ್ಯಾಂಗೆ ಶಿಲಾನ್ಯಾಸ ಮಾಡಿದ್ದು ಟಿಪ್ಪು ಸುಲ್ತಾನ್ ಎಂದು ತಪ್ಪು ಮಾಹಿತಿ ನೀಡಿ ಇತಿಹಾಸ ತಿರುಚಲು ಪ್ರಯತ್ನಿಸಿರುವುದನ್ನು ಖಂಡಿಸುತ್ತೇವೆ, ಮೈಸೂರು ಮಹಾರಾಜರ ಕುಟುಂಬದ ಮೇಲಿರುವ ದ್ವೇಷಕ್ಕೆ ಸಿದ್ದರಾಮಯ್ಯ ಮಹಾದೇವಪ್ಪರ ಬಾಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ಲಾಭ ಮಾಡಿಕೊಳ್ಳಲು ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ವೇಮಗಲ್, ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳನ್ನು ಕೈಗೊಂಬೆಗಳನ್ನಾಗಿ ಮಾಡಿಕೊಂಡಿದ್ದಾರೆ. ಎನ್.ಡಿ.ಎ ಪಕ್ಷವನ್ನು ಗುರಿಯಾಗಿಸಿಕೊಂಡು ಸಾಮಾನ್ಯ ಮುಖಂಡರ ಮೇಲೆ ದಾಳಿ ಮಾಡಿಸುತ್ತಿರುವುದು ಖಂಡನಾರ್ಹವಾಗಿದೆ. ಪಟ್ಟಣ ಪಂಚಾಯಿತಿ ಮಾಡಲು ಅನುಮೋದನೆ ಮಾಡಿದ್ದು ಆಗಿನ ಬಿಜೆಪಿ ಸಿಎಂ ಬಿ.ಎಸ್.ಯಡಿಯೂರಪ್ಪನವರು. ಆಗ ಬಿಜೆಪಿಯು ಮಂಜೂರು ಮಾಡಿದ್ದ ಕಾಮಗಾರಿಗಳನ್ನೇ ಈಗಿನ ಸರ್ಕಾರ ಮುಂದುವರಿಸುತ್ತಿದೆ. ಪ್ರಸ್ತುತ ಸರ್ಕಾರವು ಏನಿದ್ದರೂ ಗುದ್ದಲಿ ಪೂಜೆಗಳಿಗೆ ಮಾತ್ರ ಸೀಮಿತವಾಗಿದ್ದು, ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಟೀಕಿಸಿದರು.
ಸರ್ಕಾರದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿದಿದೆ. ಖಜಾನೆ ದಿವಾಳಿ ಆಗಿದೆ. ಸರ್ಕಾರಿ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ವೇತನ ನೀಡಲು ಆಗದಷ್ಟು ಎಕ್ಕುಟ್ಟಿ ಹೋಗಿದೆ. ಕಾನೂನು ಆಡಳಿತ ಇಲಾಖೆಯಲ್ಲಿ ೯ ಕೋಟಿ ರು., ಅರಣ್ಯ ಇಲಾಖೆಯಲ್ಲಿ ೮ ಕೋಟಿ ರು., ಕಂದಾಯ ಇಲಾಖೆಯಲ್ಲಿ ೭೫ ಕೋಟಿ ರು., ಹಿಂದುಳಿದ ಇಲಾಖೆಯಲ್ಲಿ ೪೪ ಕೋಟಿ ರು., ಹಣಕಾಸು ಇಲಾಖೆಯಲ್ಲಿ ೫೮ ಕೋಟಿ ರು., ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ೪೭ ಕೋಟಿ ರು., ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ೪೧ ಕೋಟಿ ರು., ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯಲ್ಲಿ ೨೦ ಕೋಟಿ ರು. ಸೇರಿ ಬಹುತೇಕ ಸರ್ಕಾರಿ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಯ ವೇತನ ಬಾಕಿ ಇರಿಸಿಕೊಂಡಿದ್ದು, ಸರ್ಕಾರಕ್ಕೆ ಭಿಕ್ಷೆ ಎತ್ತುವಂತಹ ದುರ್ಗತಿ ಉಂಟಾಗಿದೆ ಎಂದು ವ್ಯಂಗವಾಡಿದರು.
ಮಹಾದೇವಪ್ಪ ಕ್ಷಮೆ ಯಾಚಿಸಲಿ:
14ರಂದು ಹರ್ ಘರ್ ತಿರಂಗಾ:
ರಾಹುಲ್ ಗಾಂಧಿಗೆ ಪ್ರಭುದ್ಧತೆಯ ಕೊರತೆ:
ವಕೀಲ ಪ್ರಕೋಷ್ಠದ ರಾಜ್ಯಾಧ್ಯಕ್ಷ ವಸಂತ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಿ.ಡಿ.ರಾಮಚಂದ್ರ, ವಿಜಯಕುಮಾರ್, ಕೆಂಬೋಡಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ಹಾರೋಹಳ್ಳಿ ವೆಂಕಟೇಶ್, ವಕೀಲರಾದ ಮಂಜುನಾಥ್, ನಾಗೇಂದ್ರ, ಓಹೀಲೇಶ್, ಮುಳಬಾಗಿಲು ಸುಂದರ್, ಮಹೇಶ್, ರಾಜೇಶ್ ಸಿಂಗ್, ನಾಮಾಲ್ ಮಂಜುನಾಥ್ ಇದ್ದರು.