ಕನ್ನಡಪ್ರಭ ವಾರ್ತೆ ಮಂಗಳೂರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ 1862 ಬೂತ್ಗಳಿದ್ದು, ಪ್ರತಿ ಬೂತ್ನಲ್ಲಿ ಕನಿಷ್ಠ 100ರಂತೆ ಸಹಿ ಸಂಗ್ರಹ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅ.13 ಮತ್ತು 14ರಂದು ಈ ಅಭಿಯಾನ ನಡೆಯಲಿದೆ. ಅ.13ರಂದು ಸಂಜೆ 4 ಗಂಟೆಗೆ ಉರ್ವ ಜಂಕ್ಷನ್ನಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಸಿ ಸಹಿ ಸಂಗ್ರಹ, ಸಂಜೆ 5.30ಕ್ಕೆ ಉರ್ವ ಸ್ಟೋರ್, 6.30ಕ್ಕೆ ಕುದ್ರೋಳಿ, ಅ.14ರಂದು ಸಂಜೆ 3 ಗಂಟೆಗೆ ಶಕ್ತಿನಗರ, 4.30ಕ್ಕೆ ಬಿಕರ್ನಕಟ್ಟೆ, 6 ಗಂಟೆಗೆ ಕದ್ರಿ ಮಾರುಕಟ್ಟೆ ಬಳಿ ಸಹಿ ಸಂಗ್ರಹ ಅಭಿಯಾನ ನಡೆಯಲಿದೆ ಎಂದು ಐವನ್ ಡಿಸೋಜ ಹೇಳಿದರು.ದ.ಕ.ದಲ್ಲೂ ಮತಗಳ್ಳತನ!:ದ.ಕ.ದಲ್ಲೂ ಮತಗಳ್ಳತನ ನಮ್ಮ ಅರಿವಿಗೆ ಬಂದಿದೆ. ಕೆಲವೆಡೆ ಒಂದೇ ಮನೆ ನಂಬ್ರದಲ್ಲಿ ಹೊರ ಜಿಲ್ಲೆ- ರಾಜ್ಯಗಳ 30-35ರಷ್ಟು ಮತದಾರರ ನೋಂದಣಿ ಆಗಿದೆ. ಕೆಲವು ಅಂಗಡಿ ಡೋರ್ ನಂಬ್ರದಲ್ಲೂ ಇಂಥದ್ದು ನಡೆದಿರುವುದು ಗಮನಕ್ಕೆ ಬಂದಿದೆ ಎಂದ ಅವರು, ಶೀಘ್ರದಲ್ಲೇ ಈ ಕುರಿತು ದಾಖಲೆಯೊಂದಿಗೆ ಬಹಿರಂಗಪಡಿಸುತ್ತೇನೆ ಎಂದರು.
ರಾಜ್ಯದ ಜನರ ನೈಜ ಪರಿಸ್ಥಿತಿ ಅರಿತು ಅದಕ್ಕೆ ಪೂರಕವಾಗಿ ಯೋಜನೆಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ನಡೆಯುತ್ತಿರುವ ಸಮೀಕ್ಷೆಯನ್ನು ಯಶಸ್ವಿಗೊಳಿಸುವುದು ಎಲ್ಲ ಜನಪ್ರತಿನಿಧಿಗಳ ಕರ್ತವ್ಯ. ಇದಕ್ಕೆ ವಿರೋಧ ಮಾಡುವವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎನ್ನುವುದನ್ನು ತೋರಿಸುತ್ತದೆ. ದ.ಕ.ದಲ್ಲಿ ಈಗಾಗಲೇ ಶೇ.80ರಷ್ಟು ಸಮೀಕ್ಷೆ ನಡೆದಿದೆ. ಜನರು ವಿರೋಧ ಮಾಡದೆ, ಕೇವಲ ರಾಜಕೀಯಕ್ಕಾಗಿ ವಿರೋಧ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.