ಉಗ್ರರ ದಾಳಿಗೆ ಬಲಿ: ಹಿಂದುಗಳ ಆತ್ಮಕ್ಕೆ ಶಾಂತಿಕೋರಿ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ

KannadaprabhaNewsNetwork | Published : Apr 24, 2025 12:05 AM

ಸಾರಾಂಶ

ವಿಶ್ವ ಹಿಂದೂ ಪರಿಷತ್ತು, ಹಿಂದೂ ಜಾಗರಣ ವೇದಿಕೆ, ಧರ್ಮ ಜಾಗರಣ ವೇದಿಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ನೂರಾರು ಹಿಂದೂ ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು. ಮದ್ದೂರು ಪಟ್ಟಣದ ಹಳೇಬಸ್ ನಿಲ್ದಾಣದ ಶ್ರೀಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಬಳಿ ಕೆಲಕಾಲ ಮೌನಚರಣೆ ನಡೆಸಿದ ಕಾರ್ಯಕರ್ತರು ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹತರಾದ ಹಿಂದೂಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್‌ನಲ್ಲಿ ಉಗ್ರರ ದಾಳಿಯಿಂದ ಹತ್ಯೆಗೀಡಾದ ಹಿಂದುಗಳ ಆತ್ಮಕ್ಕೆ ಶಾಂತಿ ಕೋರಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ರಾತ್ರಿ ಮೇಣದಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿದರು.

ವಿಶ್ವ ಹಿಂದೂ ಪರಿಷತ್ತು, ಹಿಂದೂ ಜಾಗರಣ ವೇದಿಕೆ, ಧರ್ಮ ಜಾಗರಣ ವೇದಿಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ನೂರಾರು ಹಿಂದೂ ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಪಟ್ಟಣದ ಹಳೇಬಸ್ ನಿಲ್ದಾಣದ ಶ್ರೀಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಬಳಿ ಕೆಲಕಾಲ ಮೌನಚರಣೆ ನಡೆಸಿದ ಕಾರ್ಯಕರ್ತರು ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹತರಾದ ಹಿಂದೂಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ನಂತರ ಪ್ರಮುಖ ಬೀದಿಗಳ ಮೂಲಕ ಸಂಜಯ ಚಿತ್ರಮಂದಿರದವರೆಗೆ ಮೇಣದ ಬತ್ತಿಗಳನ್ನು ಹಿಡಿದು ಮೆರವಣಿಗೆ ನಡೆಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭರತಭೂಷಣ್, ಮಧುಸೂದನ್ ಅವರುಗಳ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಹಿಂದೂಪರ ಸಂಘಟನೆಗಳ ಮುಖಂಡರು, ಹಿಂದುಗಳು ಜಾತಿ ವ್ಯವಸ್ಥೆ ಬಿಟ್ಟು ಜಾಗೃತರಾಗುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಬೇಕು. ಕೇಂದ್ರ ಸರ್ಕಾರ ಇಂತಹ ಪೈಶಾಚಿಕ ಕೃತ್ಯಕ್ಕೆ ಕಾರಣರಾದ ಉಗ್ರರನ್ನು ಯಾವುದೇ ಕಾರಣಕ್ಕೂ ಬಿಡದೆ ಸದೆ ಬಡಿಯಲು ಮುಂದಾಗಬೇಕು ಎಂದು ಆಗ್ರಹ ಪಡಿಸಿದರು. ಇದೇ ವೇಳೆ ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಪ್ರತಿಭಟನೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರಾದ ಶಾಮಿಯಾನ ಗುರುಸ್ವಾಮಿ, ಎಂ.ಸಿ.ಸಿದ್ದು, ಎಂ. ರೂಪ, ನೈದಿಲೆ ಚಂದ್ರು, ಗೌತಮ್ ಚಂದ್, ಮಂಜು, ಪ್ರಿಯಾಂಕ ಅಪ್ಪು ಗೌಡ, ತ್ರಿವೇಣಿ, ಮಮತಾ ರಾಂಕಾ, ಶ್ರೇಯಸ್, ಕೆ.ಟಿ. ನವೀನ್ , ಮಧು, ನಿತ್ಯಾನಂದ, ಮಾ.ನ.ಪ್ರಸನ್ನ ಕುಮಾರ್, ಎಂಸಿ ಲಿಂಗರಾಜು, ಜಯರಾಮ, ಕುಂದನ ಕುಪ್ಪೆ ಕುಮಾರ, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

Share this article