ಬರ ಘೋಷಣೆಗೆ ಆಗ್ರಹಿಸಿ ಮೌನ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

KannadaprabhaNewsNetwork |  
Published : Sep 20, 2026, 03:30 AM IST
ಕುಷ್ಟಗಿ ಪ್ರಜ್ಞಾವಂತ ಪ್ರಗತಿಪರ ಪ್ರಜಾಪ್ರಭುಗಳ ಹೋರಾಟ ವೇದಿಕೆ ವತಿಯಿಂದ ಶನಿವಾರ ತಹಸೀಲ್ದಾರ್ ಕಚೇರಿ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಮೌನ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಾಯಿತು. | Kannada Prabha

ಸಾರಾಂಶ

ಕುಷ್ಟಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಕುಷ್ಟಗಿ ಪ್ರಜ್ಞಾವಂತ ಪ್ರಗತಿಪರ ಪ್ರಜಾಪ್ರಭುಗಳ ಹೋರಾಟ ವೇದಿಕೆ ವತಿಯಿಂದ ಶನಿವಾರ ತಹಸೀಲ್ದಾರ್ ಕಚೇರಿ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಮೌನ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಕುಷ್ಟಗಿ: ಕುಷ್ಟಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಕುಷ್ಟಗಿ ಪ್ರಜ್ಞಾವಂತ ಪ್ರಗತಿಪರ ಪ್ರಜಾಪ್ರಭುಗಳ ಹೋರಾಟ ವೇದಿಕೆ ವತಿಯಿಂದ ಶನಿವಾರ ತಹಸೀಲ್ದಾರ್ ಕಚೇರಿ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಮೌನ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಹೋರಾಟಗಾರ ಬಸವರಾಜ ಗಾಣಿಗೇರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ, ಕೂಡಲೇ ಕುಷ್ಟಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಲಾಯಿತು.

ತಾಲೂಕಿನಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳ ಸ್ಥಿತಿಗತಿ ಹದಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕುಷ್ಟಗಿ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿರುವುದು ರೈತರಿಗೆ ಮಾಡಿದ ಅನ್ಯಾಯ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸೆಟಲೈಟ್‌ ಮೂಲಕ ನಡೆಸುವ ಬೆಳೆ ಸಮೀಕ್ಷೆಯಿಂದ ತಾಲೂಕಿನ ನೈಜ ಪರಿಸ್ಥಿತಿ ತಿಳಿಯಲು ಸಾಧ್ಯವಿಲ್ಲ. ಅಧಿಕಾರಿಗಳು ರೈತರ ಜಮೀನುಗಳಿಗೆ ಖುದ್ದು ಭೇಟಿ ನೀಡಿ ಬೆಳೆ ಸಮೀಕ್ಷೆ ನಡೆಸಿದರೆ ಮಾತ್ರ ಬೆಳೆ ಹಾನಿಯ ವಾಸ್ತವ ಚಿತ್ರಣ ತಿಳಿಯಲಿದೆ ಎಂದು ಹೋರಾಟಗಾರರು ಹೇಳಿದರು.

ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿ ಮನವೊಲಿಸಲು ಪ್ರಯತ್ನಿಸಿದರು. ಆದರೆ ಬೇಡಿಕೆ ಈಡೇರುವ ವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ ಹೋರಾಟಗಾರರು, ಉಪವಾಸ ಸತ್ಯಾಗ್ರಹ ಮುಂದುವರಿಸಿದರು.

ಸಿಪಿಐ ವಿಶ್ವನಾಥ ಹಿರೇಗೌಡರ್ ಹಾಗೂ ಪಿಎಸ್ಐ ಹನುಮಂತಪ್ಪ ತಳವಾರ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು.

ಹೋರಾಟದ ಮುಖ್ಯಸ್ಥರಾದ ಬಸವರಾಜ ಗಾಣಿಗೇರ, ಮಲ್ಲಿಕಾರ್ಜುನ ದೋಟಿಹಾಳ, ರಮೇಶ ಮೇಲಿನಮನಿ, ಕಿರಣ ಜ್ಯೋತಿ, ಕಾಶೀಂ ಶ್ರೀಶಾಲ, ಅಕ್ಕಮ್ಮ ಮರೇಗೌಡರ್, ಸಂಗಮ್ಮ ಗುಳಗೌಡ್ರ ಭಾಗವಹಿಸಿದ್ದರು.‌

ಪ್ರತಿಭಟನೆ ಮುಂದುವರಿಯಲಿದೆ: ರಾಜ್ಯ ಸರ್ಕಾರ ಮೂರು ಬರಪಟ್ಟಿ ತಾಲೂಕು ಬಿಡುಗಡೆ ಮಾಡಿದರೂ ನಮ್ಮ ಕುಷ್ಟಗಿ ತಾಲೂಕು ಇರಲಾರದ್ದು ನಮ್ಮ ತಾಲೂಕಿನ ರೈತರಲ್ಲಿ ಆತಂಕ ಮೂಡಿದೆ. ಮೊದಲನೆಯ ಬರಪಟ್ಟಿಯಲ್ಲಿ ಬರುವಂತಹ ಪರಿಸ್ಥಿತಿ ನಮ್ಮ ತಾಲೂಕಿನಲ್ಲಿದ್ದರೂ ಸರ್ಕಾರ ನಮ್ಮ ಕುಷ್ಟಗಿ ತಾಲೂಕು ನಿರ್ಲಕ್ಷ್ಯ ಮಾಡಿದ್ದು ಬರಪೀಡಿತ ಎಂದು ಘೋಷಣೆ ಮಾಡುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರ ಬಸವರಾಜ ಗಾಣಿಗೇರ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಂಪ್ಯೂಟರ್ ತಂತ್ರಜ್ಞರು ವೃತ್ತಿ ಮೌಲ್ಯ ಹೆಚ್ಚಿಸಿಕೊಳ್ಳಲಿ: ರಫೀಕ್‌ಅಹ್ಮದ್ ಅಣ್ಣಿಗೇರಿ
ಅಧಿವೇಶನದಲ್ಲಿ 5 ಅಂಶಗಳ ಬಗ್ಗೆ ಗಮನ ಸೆಳೆಯಲು ಶಾಸಕರಿಗೆ ಆಗ್ರಹ