ವೈದ್ಯರಿಗೆ ಸೂಕ್ತ ರಕ್ಷಣೆಗೆ ಒತ್ತಾಯಿಸಿ ಮೌನ ಪ್ರತಿಭಟನೆ

KannadaprabhaNewsNetwork |  
Published : Aug 18, 2024, 01:47 AM IST
17ಕೆಪಿಡಿವಿಡಿ02 | Kannada Prabha

ಸಾರಾಂಶ

ದೇವದುರ್ಗ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ವೈದ್ಯರು, ಸಿಬ್ಬಂದಿ ಮೌನ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ದೇವದುರ್ಗ

ವೈದ್ಯರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಒದಗಿಸಲು ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘ ಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾ ದೇವದುರ್ಗ ಶಾಖೆಯ ಪದಾಧಿಕಾರಿಗಳು ಮೌನ ಪ್ರತಿಭಟನೆ ಮಾಡುವ ಮೂಲಕ ಒತ್ತಾಯಿಸಿತು.

ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮೌನ ಪ್ರತಿಭಟನೆ ಮಾಡಿ, ದೇಶದ ಪ್ರತಿಷ್ಠಿತ ನಗರವಾದ ಕೊಲ್ಕತ್ತದ ಆರ್‌ಜಿಕರ್ ವೈದ್ಯಕೀಯ ವಿದ್ಯಾಲಯದ ಡಾ.ಮೌಮಿತ ದೇಬನಾಥರನ್ನು ಕರ್ತವ್ಯದಲ್ಲಿ ಇರುವಾಗಲೇ ಅತ್ಯಾಚಾರವೆಸಗಿ, ಬರ್ಬರವಾಗಿ ಹತ್ಯೆಗೈದಿರುವ ಘಟನೆಯನ್ನು ಖಂಡಿಸಿತು.

ವೈದ್ಯೆಯ ಭಾವಚಿತ್ರದ ಮುಂದೆ ಮೇಣದ ಬತ್ತಿ ಹೊತ್ತಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪಟ್ಟಣದ ವಿವಿಧ ಬೀದಿಗಳ ಮೂಲಕ ಮೌನ ಮೆರವಣಿಗೆ ಮಾಡಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಚನ್ನಮಲ್ಲಪ್ಪ ಘಂಟಿರಿಗೆ ಸಲ್ಲಿಸಿದರು.

ಈ ವೇಳೆ ಡಾ.ರಾಜೇಂದ್ರ ಜಹಗೀರದಾರ, ಡಾ.ಬಸವರಾಜ ರೆಡ್ಡಿ, ಡಾ.ಮಂಜುನಾಥ ಬೆನಕನ್, ಡಾ.ಶಿವಾನಂದ ಚೌವ್ಹಾಣ, ಡಾ.ಸಿದ್ರಾಮರೆಡ್ಡಿ, ಡಾ.ಮಾರುತಿ, ಡಾ.ನಿರ್ಮಲಾ, ಡಾ.ಶ್ರೀದೇವಿ, ಡಾ.ಅಪ್ಸನಾ ಸೇರಿ ಖಾಸಗಿ ಹಾಗೂ ಸರ್ಕಾರಿ ವೈದ್ಯರು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬೈನಿಂದ ಊಟಿಯವರೆಗೆ ಸೈಕಲ್ ಪ್ರವಾಸ
ಸಾಹೇಬ್ರ ನೀರ್ ಬರದಿದ್ರ ನಾವ್ ಬರ್ಬಾದಾಗ್ತೇವ್ರಿ: ರೈತರ ಅಳಲು