ಸುರಪುರ : ಸರಳವಾಗಿ ಅಂಬೇಡ್ಕರ್, ಜಗಜೀವನರಾಂ ಜಯಂತ್ಯುತ್ಸವಕ್ಕೆ ನಿರ್ಧಾರ

KannadaprabhaNewsNetwork |  
Published : Apr 03, 2024, 01:40 AM ISTUpdated : Apr 03, 2024, 08:29 AM IST
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಅಂಬೇಡ್ಕರ್-ಜಗಜೀವನರಾಮ್ ಜಯಂತಿಗಳ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.

 ಸುರಪುರ : ತಾಲೂಕಿನಾದ್ಯಂತ ಲೋಕಾಸಭೆ ಮತ್ತು ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಂಬರುವ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.

ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಯಂತಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಏ.5ರಂದು ಬಾಬು ಜಗಜೀವನರಾಂ ಮತ್ತು ಏ.14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ತಹಸೀಲ್ದಾರ್ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಗುವುದು ಎಂದರು.

ಲೋಕಾಸಭಾ ಮತ್ತು ಉಪಚುನಾವಣೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಚುನಾವಣಾ ನೀತಿ ಸಂಹಿತೆ ಸಂದರ್ಭದಲ್ಲಿ ಸರಕಾರಿ ಸಭೆ-ಸಮಾರಂಭಗಳನ್ನು ನೀತಿ ಸಂಹಿತೆಗೆ ಅನುಗುಣವಾಗಿ ಸಭೆ-ಸಮಾರಂಭಗಳನ್ನು ನಡೆಸಲಾಗುವುದು. ಕಾರ್ಯಕ್ರಮ ನಡೆಸುವುದಿದ್ದರೆ ಮುಂಚಿತವಾಗಿ ಚುನಾವಣಾಧಿಕಾರಿಗಳಿಂದ ಪರವಾನಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಿಪಿಐ ಆನಂದ ವಾಗ್ಮೋಡೆ, ತಾ.ಪಂ. ಅಧಿಕಾರಿ ಬಸವರಾಜ, ಡಾ. ಆರ್.ವಿ. ನಾಯಕ, ಹಣಮಂತ್ರಾಯ ಪಾಟೀಲ್, ಭೀಮರಾಯ, ಮಂಜುನಾಥ ಶಿಡ್ಲಘಟ್ಟ, ಮಹೇಶ, ಮುಖಂಡರಾದ ನಿಂಗಣ್ಣ ಗೋನಾಲ, ತಿಪ್ಪಣ್ಣ ಶೆಳ್ಳಗಿ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ