ಕೆ.ಆರ್.ಪೇಟೆ ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಎಚ್‌.ಟಿ.ಮಂಜು

KannadaprabhaNewsNetwork |  
Published : Feb 16, 2026, 01:30 AM IST
15ಕೆಎಂಎನ್‌ಡಿ-13ಕೆ.ಆರ್‌.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಅವರು ರಾಮನಕೊಪ್ಪಲು ಗ್ರಾಮದಲ್ಲಿ ಸುಮಾರು ಇಪ್ಪತ್ತು ಲಕ್ಷ ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಹೆಚ್.ಟಿ.ಮಂಜು ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ವಿರೋಧ ಪಕ್ಷದ ಶಾಸಕನಾಗಿದ್ದರೂ ತಾಲೂಕಿನ ಅಭಿವೃದ್ಧಿಗೆ ಎಲ್ಲಾ ಸಚಿವರ ಬಳಿ ತೆರಳಿ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವಂತೆ ಹತ್ತಾರು ಬಾರಿ ಮನವಿ ಸಲ್ಲಿಸಿದ್ದೇನೆ. ಅದೇ ರೀತಿ ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ತಿಳಿಸಿ ಅನುದಾನ ನೀಡುವಂತೆ ಕೋರಿದ್ದೇನೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆಶಾಸಕನಾಗಿರುವ ಕೊನೆಯ ದಿನದವರೆಗೂ ನನ್ನ ತಾಲೂಕಿನ ಅಭಿವೃದ್ಧಿಗಾಗಿ ಅನುದಾನ ತಂದು ತಾಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.

ಅವರು ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಅವರು ರಾಮನಕೊಪ್ಪಲು ಗ್ರಾಮದಲ್ಲಿ ಸುಮಾರು ಇಪ್ಪತ್ತು ಲಕ್ಷ ರು. ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ವಿರೋಧ ಪಕ್ಷದ ಶಾಸಕನಾಗಿದ್ದರೂ ತಾಲೂಕಿನ ಅಭಿವೃದ್ಧಿಗೆ ಎಲ್ಲಾ ಸಚಿವರ ಬಳಿ ತೆರಳಿ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವಂತೆ ಹತ್ತಾರು ಬಾರಿ ಮನವಿ ಸಲ್ಲಿಸಿದ್ದೇನೆ. ಅದೇ ರೀತಿ ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ತಿಳಿಸಿ ಅನುದಾನ ನೀಡುವಂತೆ ಕೋರಿದ್ದೇನೆ. ಅಲ್ಲದೇ, ಇನ್ನೂ ಎರಡು ಕಾಲು ವರ್ಷ ಮುಖ್ಯಮಂತ್ರಿಗಳಿಗೂ ಸಮಯವಿದೆ. ಅನುದಾನಕ್ಕಾಗಿ ಸಚಿವರ ಮನವೊಲಿಸುವ ಕೆಲಸವನ್ನು ಕೊನೆಯವರೆಗೂ ಮಾಡುತ್ತೇನೆ. ಈಗ ಲಭ್ಯವಾದ ಅನುದಾನವನ್ನು ತಾಲೂಕಿನ ಎಲ್ಲಾ ಗ್ರಾಮಗಳಿಗೂ ಸಿಗುವಂತೆ ನೋಡಿಕೊಂಡಿದ್ದೇನೆ. ನನಗೆ ಎಲ್ಲಾ ಗ್ರಾಮಗಳೂ ಚಿರಪರಿಚಿತವಾಗಿದ್ದು ಯಾವುದೇ ಗ್ರಾಮಗಳನ್ನೂ ಸಹ ಕಡೆಗಣಿಸುವುದಿಲ್ಲ ಎಂದರು.

ಟಿಎಪಿಸಿಎಂಎಸ್ ನಿರ್ದೇಶಕ ಮಲ್ಲೇನಹಳ್ಳಿ ಮೋಹನ್,ನಾಗರಘಟ್ಟ ದಿಲೀಪ್ ಕುಮಾರ್, ಗ್ರಾಪಂ ಮಾಜಿ ಸದಸ್ಯರುಗಳು, ಗ್ರಾಮದ ಮುಖಂಡರು ಸಾರ್ವಜನಿಕರು ಸೇರಿದಂತೆ ಹಲವರು ಹಾಜರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳ ವಿತರಣೆ

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಬೆಸಗರಹಳ್ಳಿಯಲ್ಲಿ ಕೆಂಪುಗೌಡ, ಚನ್ನೇಗೌಡ ರಾಷ್ಟ್ರೀಯ ವಿದ್ಯಾನಿಲಯದ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಶನಿವಾರ ಸಾಮಾಜಿಕ ಸೇವಾ ಸಂಸ್ಥೆಗಳ ವತಿಯಿಂದ ವಿವಿಧ ಸೇವಾ ಕಾರ್ಯಗಳು ಹಮ್ಮಿಕೊಳ್ಳಲಾಗಿತ್ತು.

ಗ್ರಾಮದ ತಾಯಮ್ಮ-ಚನ್ನೇಗೌಡ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ಚಂದನ ಲಯನ್ಸ್ ಸಂಸ್ಥೆ ಅಧ್ಯಕ್ಷ ಪಿ. ಹೊನ್ನರಾಜು ಮತ್ತು ಪದಾಧಿಕಾರಿಗಳು ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಿದರು.

ಸಂಸ್ಥೆಯ ಅಧ್ಯಕ್ಷ ಪಿ.ಹೊನ್ನರಾಜು ಲಯನ್ಸ್ ಸಂಸ್ಥೆ ತನ್ನ ಸಾಮಾಜಿಕ ಸೇವಾಕಾರ್ಯದ ಅಂಗವಾಗಿ ಮಕ್ಕಳ ಶೈಕ್ಷಣಿಕ ಚಟುವಟಿಕೆ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡಬೇಕೆಂಬ ಉದ್ದೇಶದಿಂದ ಆಯ್ದಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಪರಿಸರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮಂಗಲ ಯೋಗೇಶ್, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಎಂ. ಕೆ .ಹರೀಶ್ ಬಾಬು ಅವರುಗಳನ್ನು ಸನ್ಮಾನಿಸಲಾಯಿತು. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಚೇತನ್ ಕೃಷ್ಣ, ಸಹ ಕಾರ್ಯದರ್ಶಿ ಎ ಟಿ ರಾಮೇಗೌಡ, ಮುಖಂಡರಾದ ಶ್ರೀಧರ್, ಗೋವರ್ಧನ್, ಮಾನಸ ಚೇತನ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಂತಿಗೆ ಹೆಚ್ಚಿನ ಪ್ರಾಮುಖ್ಯತೆ ಅಗತ್ಯ: ಡಾ.ಅನಿಲ್‌ ಆನಂದ್‌
ನಮ್ಮನ್ನು ನಾವು ಕಂಡುಕೊಳ್ಳುವುದೇ ಬದುಕು: ಆದಿಶ್ರೀ