ಕನ್ನಡಪ್ರಭ ವಾರ್ತೆ ಲೋಕಾಪುರ
ಸಮೀಪದ ತಿಮ್ಮಾಪುರ (ರನ್ನ ನಗರ) ಗ್ರಾಮದಲ್ಲಿ ಬೀಳಗಿ ಶುಗರ್ ಮಿಲ್ ಯುನಿಟ್-೨ರ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ರೈತರು ಕಾರ್ಖಾನೆ ಕಟ್ಟುವಲ್ಲಿ, ಷೇರು ಸಂಗ್ರಹದಲ್ಲಿ ಭಾಗಿಯಾಗಿ ಬದುಕು ಕಟ್ಟಿಕೊಳ್ಳಲು ಶ್ರಮಪಟ್ಟಿದ್ದರಿಂದ ಇಂದು ಕಾರ್ಖಾನೆ ಮತ್ತೆ ಬೆಳೆಯಲು ಸಾಧ್ಯವಾಗಿದೆ. ಈ ಕಾರ್ಖಾನೆ ರೈತರ ಜೀವನ ಶೈಲಿ ಬದಲಾಯಿಸಲಿದೆ. ಕಾರ್ಖಾನೆಯಿಂದ ಯಾವುದೇ ಲಾಭದಾಸೆ ಹೊಂದಿಲ್ಲ. ರೈತರ, ಕಾರ್ಮಿಕರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಕಾರ್ಖಾನೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಖಾನೆಗೆ ಮಾಜಿ ನಿರ್ದೇಶಕ ದಯಾನಂದ ಪಾಟೀಲ ಮಾತನಾಡಿ, ಕಾರ್ಖಾನೆ ಬೆಳೆಯಲು ಈ ಭಾಗದ ರೈತರು ಹಾಗೂ ಷೇರು ಸದಸ್ಯರು, ರೈತರು ಹಾಗೂ ಕಾರ್ಮಿಕರು ಕಾರ್ಖಾನೆ ನಮ್ಮದು ಎಂದು ಪ್ರಾಂಜಲ ಮನಸ್ಸಿನಿಂದ ದುಡಿಯಬೇಕು. ದುಡಿದ ಹಣದಲ್ಲಿ ಬದುಕಿಗಾಗಿ, ಒಳ್ಳೆಯದಕ್ಕಾಗಿ ಹಣ ಬಳಕೆ ಮಾಡಿಕೊಳ್ಳಬೇಕು. ಈಗಾಗಲೇ ನಾವು ಅನೇಕ ತೊಂದರೆ ಅನುಭವಿಸಿದ್ದೇವೆ. ಬರುವ ದಿನಗಳಲ್ಲಿ ಯಾವುದೇ ತೊಂದರೆ ಆಗದ ಹಾಗೆ ನಡೆದುಕೊಳ್ಳುತ್ತೇವೆ. ಈ ವರ್ಷ ಬೆಳೆದ ಕಬ್ಬನ್ನು ನಮ್ಮ ಕಾರ್ಖಾನೆಗೆ ಕಳಿಸಿ ಈಗಾಗಲೇ ಕೊಟ್ಟ ಕಬ್ಬಿಗೆ ಒಳ್ಳೆಯ ದರ ಕೊಡುವ ಭರವಸೆಯನ್ನು ಎಸ್.ಆರ್. ಪಾಟೀಲ ಅವರು ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ವಕೀಲರಾದ ಆರ್.ಎಂ. ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಶಿವಕುಮಾರ ಮಲಘಾಣ, ಮಾಜಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಿವಾನಂದ ಉದಪುಡಿ, ಕೆ.ಆರ್. ಮಾಚಪ್ಪನವರ, ಮಂಜುನಾಥ ಅರಳಿಕಟ್ಟಿ ಮಾತನಾಡಿ, ಈ ಭಾಗದ ರೈತರು ಕಾರ್ಖಾನೆಗೆ ಹೆಚ್ಚಿನ ಕಬ್ಬು ಕಳಿಸಿ ಕಾರ್ಖಾನೆಯ ಉಳಿಸಿಕೊಳ್ಳಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿ, ಎಸ್.ಆರ್. ಪಾಟೀಲ ಅವರು ಈ ಕಾರ್ಖಾನೆ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ. ರೈತರ ಕಾರ್ಮಿಕರ ಮತ್ತು ಕಬ್ಬು ಬೆಳೆಗಾರರ ಪರವಾಗಿ ನಿಂತಿದ್ದು, ಒಂದು ಅದೃಷ್ಟ ಎಂದು ಹೇಳಿದರು.
ದೇಶದಲ್ಲಿ ಅನೇಕ ಸಹಕಾರಿ ಸಂಘಗಳು ರೈತರು ಮತ್ತು ವ್ಯಾಪಾರಿಗಳಿಗೆ ಕಷ್ಟ ಕಾಲದಲ್ಲಿ ಸಹಾಯಕ್ಕೆ ನಿಲ್ಲುತ್ತವೆ. ಬೀಳಗಿ ಶುಗರ್ಸ್ ಕಾರ್ಖಾನೆ ಈ ಭಾಗದ ಎಲ್ಲ ರೈತರಿಗೆ ಕಾಮಧೇನು ಕಲ್ಪವೃಕ್ಷದಂತಿದೆ. ಬರುವ ದಿನಗಳಲ್ಲಿ ಈ ಭಾಗದ ರೈತರು ತಮ್ಮ ಕಬ್ಬು ಕಾರ್ಖಾನೆಗೆ ಕಳಿಸಬೇಕು. ಕಾರ್ಖಾನೆ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ. ಬೀಳಗಿ ಶುಗರ್ಸ್ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಜವಾಬ್ದಾರಿ ವಹಿಸಿಕೊಂಡ ಈ ಕಾರ್ಖಾನೆಗೆ ಎಲ್ಲ ರೈತರ, ಕಬ್ಬು ಬೆಳೆಗಾರರ, ಕಾರ್ಮಿಕರ ಶ್ರಮ ಅತ್ಯವಶ್ಯವಿದೆ.