ಸಿಂಗ್ ಉದಾರೀಕರಣದಿಂದ ದೇಶಾಭಿವೃದ್ಧಿ: ಗಂಗಾಧರಸ್ವಾಮಿ

KannadaprabhaNewsNetwork |  
Published : Dec 28, 2024, 01:02 AM IST
೨೭ಕೆಎನ್‌ಕೆ-೧                                                                ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನದ ಹಿನ್ನಲೆಯಲ್ಲಿ ಕನಕಗಿರಿಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.  | Kannada Prabha

ಸಾರಾಂಶ

ಉದಾರೀಕರಣ ನೀತಿ ಜಾರಿಗೊಳಿಸುವ ದೇಶದಲ್ಲಿ ಬದಲಾವಣೆ ತರುವಲ್ಲಿ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಪಾತ್ರ ದೊಡ್ಡದಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಹೇಳಿದರು.

ಕನಕಗಿರಿ: ಉದಾರೀಕರಣ ನೀತಿ ಜಾರಿಗೊಳಿಸುವ ದೇಶದಲ್ಲಿ ಬದಲಾವಣೆ ತರುವಲ್ಲಿ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಪಾತ್ರ ದೊಡ್ಡದಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಂತಾಪ ಸಭೆಯಲ್ಲಿ ಮಾತನಾಡಿದರು.

ಸತತ ೧೦ ವರ್ಷಗಳ ಕಾಲ ಪ್ರಧಾನಿಯಾಗಿದ್ದ ಸಿಂಗ್ ಉತ್ತಮ ಆಡಳಿತ ನೀಡಿ ದೇಶವನ್ನು ಮುನ್ನೆಡೆಸಿದರು. ಸೋನಿಯಾಗಾಂಧಿ ನಿರ್ಧಾರದಿಂದ ದೇಶದಲ್ಲಿ ಸತತ ೧೦ ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಸಿಂಗ್ ಅಭಿವೃದ್ಧಿಯಿಂದ ದೇಶದ ಜನ ಇಂದು ಹಳ್ಳಿ-ಹಳ್ಳಿಯಲ್ಲೂ ಅವರನ್ನು ನೆನೆಯುತ್ತಿದ್ದಾರೆ ಎಂದರು.

ಪಪಂ ಉಪಾಧ್ಯಕ್ಷ ಕಂಠಿರಂಗಪ್ಪ ನಾಯಕ, ಸದಸ್ಯರಾದ ಅನಿಲ ಬಿಜ್ಜಳ, ಶರಣೇಗೌಡ, ಪ್ರಮುಖರಾದ ಪ್ರಶಾಂತ ಪ್ರಭುಶೆಟ್ಟರ್, ಶರಣಪ್ಪ ಭತ್ತದ, ಟಿ.ಜೆ. ರಾಮಚಂದ್ರ, ರಮೇಶ ಶ್ರೇಷ್ಠಿ ಸಿರವಾರ, ರವಿ ಪಾಟೀಲ್, ಖಲೀಲ್ ಎಲಿಗಾರ, ವೆಂಕೋಬ ಭೋವಿ, ಪಾಮಣ್ಣ ಅರಳಿಗನೂರು, ನೀಲಕಂಠ ಬಡಿಗೇರ, ಮದರಸಾಬ ಸಂತ್ರಾಸ್, ಚಂದುಸಾಬ ಗುರಿಕಾರ ಇತರರಿದ್ದರು. ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

ಯಲಬುರ್ಗಾ: ಆರ್ಥಿಕ ತಜ್ಞ, ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪಕ್ಷದ ಮುಖಂಡರು, ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ, ಸಂತಾಪ ಸೂಚಿಸಿದರು.ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಬಿ.ಎಂ. ಶಿರೂರ ಮಾತನಾಡಿ, ದೇಶ ಕಂಡ ಒಬ್ಬ ಧೀಮಂತ ಆರ್ಥಿಕ ತಜ್ಞೆ, ಸೌಮ್ಯ ಸ್ವಭಾವದ ವ್ಯಕ್ತಿತ್ವನ್ನು ಹೊಂದಿದ ಡಾ. ಮನಮೋಹನ ಸಿಂಗ್ ಅವರ ನಿಧನದಿಂದ ಇಡೀ ದೇಶವೇ ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞನನ್ನು ಕಳೆದುಕೊಂಡು ಅನಾಥವಾಗಿದೆ. ಇವರನ್ನು ಕಳೆದುಕೊಂಡ ಅವರ ಕುಟುಂಬ ವರ್ಗಕ್ಕೆ ದೇವರು ದು:ಖ ಭರಿಸಿಕೊಳ್ಳುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.ಬ್ಲಾಕ್ ಕಾಂಗ್ರೆಸ್ ವಕ್ತಾರ ಆನಂದ ಉಳ್ಳಾಗಡ್ಡಿ ಮಾತನಾಡಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತಮಗೆ ಬಂದ ಪ್ರಧಾನಿ ಪಟ್ಟವನ್ನು ತ್ಯಾಗ ಮಾಡಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರನ್ನು ೧೦ ವರ್ಷಗಳ ಕಾಲ ಪ್ರಧಾನಿಯನ್ನಾಗಿ ಮಾಡಿದರು. ದೇಶ ಸಾಕಷ್ಟು ಅಭಿವೃದ್ಧಿ ಪಥದತ್ತ ಸಾಗಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಗುಣಗಾನ ಮಾಡಿದರು.

ಚಲನಚಿತ್ರ ನಟಿ ಡಾ. ಪಂಕಜಾ ವಿಜಯಶಂಕರ್, ತಾಲೂಕು ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸಾವಿತ್ರಿ ಗೊಲ್ಲರ, ಎಂ.ಎಫ್. ನದಾಫ್, ಹಂಪಯ್ಯ ಹಿರೇಮಠ ಮಾತನಾಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆರಿಬಸಪ್ಪ ನಿಡಗುಂದಿ, ಅಶೋಕ ತೋಟದ, ಶರಣಪ್ಪ ಗಾಂಜಿ, ಮಲ್ಲು ಜಕ್ಕಲಿ, ಈಶ್ವರ ಅಟಮಾಳಗಿ, ಮಲ್ಲೇಶಗೌಡ ಪಾಟೀಲ, ಶಿವು ಬಣಕಾರ, ಹುಲಗಪ್ಪ ಬಂಡಿವಡ್ಡರ, ಹನುಮಂತ ಭಜಂತ್ರಿ, ವಂಸತರಾವ ಕುಲಕರ್ಣಿ, ಗವಿಸಿದ್ದಪ್ಪ ಜೋಳಿನ್, ಅಡಿವೆಪ್ಪ ಲಕ್ಕಲಕಟ್ಟಿ, ಸಿದ್ದನಗೌಡ ಬನ್ನಪ್ಪಗೌಡ್ರ, ಬಸವರಾಜ ಜಂಬಾಳಿ, ಭಾಗೀರಥಿ ಜೋಗಿನ, ಶರಣಮ್ಮ ಪೂಜಾರ, ಸುರೇಶ ದಾನಕೈ, ರಾಜು ಹಡಪದ, ಬಸವರಾಜ ನಾಯಕ, ಪುನೀತ್ ಕೊಪ್ಪಳ, ರಾಜು ಹಡಪದ, ರಹಿಮಾನಸಾಬ ನಾಯಕ, ಖಾಜಾವಲಿ ಗಡಾದ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!