ಕನ್ನಡಪ್ರಭ ವಾರ್ತೆ ಕಾರ್ಕಳ
ಬೈಲೂರು ಮಹಿಷಮರ್ಧಿನಿ ಸಭಾಭವನದಲ್ಲಿ ನಡೆದ ಬೈಲೂರು ಮಹಾಶಕ್ತಿ ಕೇಂದ್ರದ ಭೂತ್ ಅಧ್ಯಕ್ಷರು- ಜನಪ್ರತಿನಿಧಿಗಳು ಮತ್ತು ಪಕ್ಷದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ತೀರಾ ತೊಂದರೆಯಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ. ಹಿಂದೆ ಬಿಜೆಪಿ ಸರ್ಕಾರ ಇರುವಾಗ ಲೆಕ್ಕವಿಲ್ಲದಷ್ಟು ರಸ್ತೆಗಳು, ಸೇತುವೆಗಳು ಮಂಜೂರಾಗಿದ್ದು ಈ ಬಾರಿ ಕನಿಷ್ಠ ತೀರಾ ಅಗತ್ಯದ ಕೆಲಸಗಳಿಗೂ ಅನುದಾನ ದೊರೆಯುತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್ನ ಕೆಲವು ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಕಾರವು ಅಧಿಕಾರಿಗಳ ಜನರನ್ನು ಸುಲಿಗೆ ಮಾಡುತ್ತಿದೆ. ಇದೊಂದು ಪಿಕ್ಪಾಕೆಟ್ ಸರಕಾರ ಎಂಬುದಾಗಿ ಸಾಬೀತಾಗಿದೆ ಎಂದು ಕಾಂಗ್ರೆಸ್ ಸರಕಾರವನ್ನು ಟೀಕಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್, ಕ್ಷೇತ್ರ ಅದ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.