
ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೋಮವಾರ ಕೆಸ್ವಾನ್ ಮೂಲಕ ಜಿಲ್ಲೆಯ ಎಲ್ಲಾ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಜಿಲ್ಲಾ/ತಾಲೂಕು ಹಾಗೂ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಎಸ್ಐಆರ್ ಸಂಬಂಧ ಗಣತಿ ನಮೂನೆಗಳ ವಿತರಣೆ, ಸಂಗ್ರಹಣೆ ಹಾಗೂ ಡಿಜಿಟಲೀಕರಣ ಕಾರ್ಯಗಳ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಿ ಅವರು ಮತನಾಡಿದರು.
ಪ್ರತಿ ತಾಲೂಕಿನಲ್ಲಿಯೂ ನಿಯಂತ್ರಣ ಕೊಠಡಿ ಸ್ಥಾಪಿಸಿ, ಗಣತಿ ನಮೂನೆಗಳ ವಿತರಣೆ, ಸಂಗ್ರಹಣೆ ಹಾಗೂ ಡಿಜಿಟಲೀಕರಣ ಕಾರ್ಯದಲ್ಲಿ ಎದುರಾಗುವ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ನಿಗದಿತ ಅವಧಿಯೊಳಗೆ ಎಲ್ಲಾ ಕರ್ಯಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದ ಅಧಿಕಾರಿಗಳಿಗೆ ಪ್ರತಿ ಮತಗಟ್ಟೆ ಭೇಟಿ ನೀಡಿ ತಮ್ಮ ವ್ಯಾಪ್ತಿಯಲ್ಲಿ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟಲೀಕರಣ ಕಾರ್ಯದಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ನೆರವು ನೀಡಿ ನಿಗದಿತ ಗುರಿ ಸಾಧಿಸಲು ತಿಳಿಸಿದರು.