ಎಸ್‌ಐಆರ್‌: ಶೇ. 93.69ರಷ್ಟು ವಿತರಣೆ, ಶೇ. 20.58ರಷ್ಟು ಗಣಕೀತೃತ

KannadaprabhaNewsNetwork |  
Published : Jul 14, 2026, 02:00 AM IST
ಮತದಾರರ ಪರಿಷ್ಕರಣೆ ಕುರಿತಾಗಿ ಸೋಮವಾರ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್‌ ಆರ್ ಅವರು ಸಭೆ ನಡೆಸಿದರು. | Kannada Prabha

ಸಾರಾಂಶ

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,665 ಮತಗಟ್ಟೆಗಳಿದ್ದು, 1,665 ಬಿಎಲ್‌ಒ ಮತ್ತು 230 ಬಿಎಲ್‌ಒ ಮೇಲ್ವಿಚಾರಕರನ್ನು ನೇಮಕ ಮಾಡಿದ್ದು, ಒಟ್ಟು 16,21,961 ಮತದಾರರಿದ್ದಾರೆ.

ಧಾರವಾಡ:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ನಡೆದಿದೆ. ಮತದಾರರು ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ನೀಡಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಸ್ನೇಹಲ್ ಆರ್. ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಅರ್ಹತಾ ದಿನಾಂಕವನ್ನು ಅಕ್ಟೋಬರ್‌ 1ರಂದು ನಿಗದಿಪಡಿಸಲಾಗಿದೆ. ಈಗಾಗಲೇ ಮತದಾರರ ಪಟ್ಟಿ ತಯಾರಿ, ತರಬೇತಿ ಮತ್ತು ಮುದ್ರಣ ಕಾರ್ಯಗಳನ್ನು ನಡೆದಿದ್ದು, ಬಿಎಲ್‌ಒಗಳು ಜೂ.30ರಿಂದ ಜು. 30ರ ವರೆಗೆ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಕರಡು ಮತದಾರರ ಪಟ್ಟಿಯನ್ನು ಆ. 5ರಂದು ಪ್ರಕಟಿಸಲಾಗುವುದು. ಆಕ್ಷೇಪಣೆ ಸಲ್ಲಿಸಲು ಆ. 5ರಿಂದ ಸೆ. 4ರ ವರೆಗೆ ಕಾಲಾವಕಾಶವಿದೆ ಎಂದರು.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,665 ಮತಗಟ್ಟೆಗಳಿದ್ದು, 1,665 ಬಿಎಲ್‌ಒ ಮತ್ತು 230 ಬಿಎಲ್‌ಒ ಮೇಲ್ವಿಚಾರಕರನ್ನು ನೇಮಕ ಮಾಡಿದ್ದು, ಒಟ್ಟು 16,21,961 ಮತದಾರರಿದ್ದಾರೆ. ಅದರಲ್ಲಿ 15,19,544 ಗಣತಿ ನಮೂನೆ ವಿತರಿಸಲಾಗಿದ್ದು, ಶೇ. 93.69ರಷ್ಟು ಸಾಧನೆಯಾಗಿದೆ. ಶೇ.6.31ರಷ್ಟು ಬಾಕಿ ಇದೆ. 3,33,765 ಗಣತಿ ನಮೂನೆ ಗಣಕೀಕೃತಗೊಂಡಿದ್ದು ಶೇ. 20.58ರಷ್ಟು ಸಾಧನೆಯಾಗಿದೆ ಎಂದ ಅವರು, ವಿತರಣೆಯಾದ ನಮೂನೆಗಳನ್ನು ಮತದಾರರು ತಮ್ಮ ಮಾಹಿತಿಗಳನ್ನು ಭರ್ತಿ ಮಾಡಿ, ಬಿಎಲ್‌ಒಗಳಿಗೆ ಹಿಂದಿರುಗಿಸಬೇಕು. ಇಲ್ಲದೇ ಹೋದಲ್ಲಿ ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಸ್ತುತ ಗೈರು, ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ೦ಧಿಸಿದ೦ತೆ ಒಟ್ಟು 57,319 ಮತದಾರರನ್ನು ಗುರುತಿಸಲಾಗಿದೆ. ಈ ಪೈಕಿ 27,594 ಶಾಶ್ವತ ವಲಸೆ ಹಾಗೂ 7,242 ಮರಣ ಹೊಂದಿದ ಪ್ರಕರಣ, 1,803 ದ್ವಿಪ್ರತಿ, 20,449 ಗೈರು ಹಾಗೂ ಇತರೆ 231 ಸೇರಿವೆ ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿಗೆ ಸಂಬಂಧಿಸಿದಂತೆ ಮಾತ್ರ ಬಿಎಲ್‌ಎಗಳ ನೇಮಕವಾಗಿದ್ದು ಬಾಕಿ ಉಳಿದ ರಾಜಕೀಯ ಪಕ್ಷಗಳು ತಕ್ಷಣ ಬಿಎಲ್‌ಎಗಳ ನೇಮಕಾತಿ ಮಾಡಬೇಕಿದೆ ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕ ಅದಾಲತ್‌: ಹೈಕೋರ್ಟ್‌ನಲ್ಲಿ 366 ಪ್ರಕರಣ ಇತ್ಯರ್ಥ
ಜೀವ ರಕ್ಷಣೆಯ ಪವಿತ್ರ ವೃತ್ತಿ ವೈದ್ಯರದು