ಜವಾಬ್ದಾರಿ ಸರ್ಕಾರವಾಗಿ ಎಸ್‌ಐಆರ್‌ ಜಾಗೃತಿ: ಡಿಕೆಶಿ

KannadaprabhaNewsNetwork |  
Published : May 25, 2026, 02:00 AM IST
ಡಿ.ಕೆ.ಶಿವಕುಮಾರ್‌  | Kannada Prabha

ಸಾರಾಂಶ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಯಿಂದ ದೇಶದಲ್ಲಿ ಸಾಕಷ್ಟು ಅನಾಹುತಗಳು ನಡೆಯುತ್ತಿವೆ. ಜವಾಬ್ದಾರಿಯುತ ಸರ್ಕಾರವಾಗಿ ಆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಯಿಂದ ದೇಶದಲ್ಲಿ ಸಾಕಷ್ಟು ಅನಾಹುತಗಳು ನಡೆಯುತ್ತಿವೆ. ಜವಾಬ್ದಾರಿಯುತ ಸರ್ಕಾರವಾಗಿ ಆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಎಸ್‌ಐಆರ್‌ನಿಂದ ದೇಶದಲ್ಲಿ ಸಾಕಷ್ಟು ಅನಾಹುತಗಳಾಗುತ್ತಿವೆ. ಅದಕ್ಕಾಗಿ ನಾವು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಬಡ ಮತ್ತು ಸಾಮಾನ್ಯ ಜನರಿಗೆ ಎಸ್‌ಐಆರ್‌ ಬಗ್ಗೆ ಪರಿಚಯ ಮಾಡಿಕೊಡಬೇಕಿದೆ. ಕೆಲ ರಾಜ್ಯಗಳಲ್ಲಿ 50ರಿಂದ 90 ಲಕ್ಷದವರೆಗೆ ಮತಗಳನ್ನು ತೆಗೆದುಹಾಕಲಾಗಿದೆ. ನಮ್ಮಲ್ಲೂ ಎಸ್‌ಐಆರ್‌ ಆರಂಭವಾಗುತ್ತಿದ್ದು, ಅದಕ್ಕಾಗಿ ಎಚ್ಚರಿಕೆ ವಹಿಸಬೇಕಿದೆ ಎಂದರು.

ಜನರು ಚುನಾವಣಾ ಆಯೋಗ ನೀಡುವ ಅರ್ಜಿ ತುಂಬಿಸಿ ದಾಖಲೆ ಸಹಿತ ವಾಪಾಸ್‌ ನೀಡಿದವರ ಮತ ಮಾತ್ರ ಉಳಿಯುತ್ತದೆ. ಅರ್ಜಿ ವಾಪಸ್‌ ನೀಡದವರ ಮತ ಹಕ್ಕು ನಷ್ಟವಾಗಲಿದೆ. ಮತದಾನದ ಹಕ್ಕು ಕಳೆದುಕೊಂಡರೆ ಸರ್ಕಾರದಿಂದ ದೊರೆಯುವ ಹಲವು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆ ದೃಷ್ಟಿಯಿಂದ ಮತ ಹಕ್ಕು ಕಳೆದುಕೊಳ್ಳದಂತೆ ಮಾಡಲು ಸರ್ಕಾರ ಜನರಿಗೆ ಬೇಕಾಗುವ ದಾಖಲೆ ಒದಗಿಸಲಿದೆ. ಇದು ಜವಾಬ್ದಾರಿಯುತ ಸರ್ಕಾರದ ಕೆಲಸವಾಗಿದೆ ಎಂದು ಹೇಳಿದರು.ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೇರಿ ಎಲ್ಲ ಪಕ್ಷಗಳ ಬಿಎಲ್‌ಎಗಳಿಗೆ ತರಬೇತಿ ನೀಡುತ್ತಿವೆ. ನಮ್ಮಿಂದ ಹಾಗೂ ಸರ್ಕಾರದಿಂದ ಏನೂ ತೊಂದರೆಯಾಗಬಾರದು ಎಲ್ಲರಿಗೂ ನ್ಯಾಯ ಒದಗಿಸಬೇಕು ಎನ್ನುವುದು ನನ್ನ ಆಶಯ. ಚುನಾವಣೆ ಗೆಲ್ಲುವುದು, ಬಿಡುವುದು ಬೇರೆ ವಿಚಾರ. ಮತ ಹಕ್ಕು ಕಳೆದು ಯೋಜನೆ ಸೌಲಭ್ಯ ಸಿಗದಿದ್ದರೆ ಆಗ ಚುನಾವಣಾ ಆಯೋಗ ಮಾಡಿದೆ ಎಂದು ಹೇಳುವುದಿಲ್ಲ. ನಮ್ಮನ್ನೇ ಜನರು ಪ್ರಶ್ನಿಸುತ್ತಾರೆ ಎಂದರು.

ಪಕ್ಷದೊಳಗೆ ಯಾವ ಗೊಂದಲವೂ ಇಲ್ಲ. ಪಕ್ಷವಿದ್ದರೆ ನೀನು. ನಂತರ ಸ್ಥಾನಮಾನ. ಮೊದಲು ಪಕ್ಷ ಇರಬೇಕು ನಂತರ ಮಿಕ್ಕಿದ್ದೆಲ್ಲ ಸ್ಥಾನಮಾನ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಕೀಲರು ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸಿ: ಎಚ್‌. ಬಿಳ್ಳಪ್ಪ
ಪುಸ್ತಕ ಖರೀದಿಸಿ ಓದುವ ಹವ್ಯಾಸ ರೂಢಿಸಿಕೊಳ್ಳಿ: ಸಭಾಪತಿ ಬಸವರಾಜ ಹೊರಟ್ಟಿ