ಹುಬ್ಬಳ್ಳಿ:
ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಕೇಂದ್ರ ಸಚಿವರು ಹಾಗೂ ಬಿಜೆಪಿ ಪ್ರಮುಖರು ಸೇರಿ ರಾಜ್ಯ ಚುನಾವಣಾ ಆಯೋಗದ ಸಿಇಒ ಅವರನ್ನು ಭೇಟಿ ಮಾಡಿ. ಅಕ್ರಮಗಳ ಬಗ್ಗೆ ದಾಖಲೆ ಸಮೇತ ಗಮನ ಸೆಳೆಯಲಿದ್ದೇವೆ ಎಂದರು.
ರಾಜ್ಯಾದ್ಯಂತ ಮಸೀದಿ, ಸಮುದಾಯ ಭವನ, ಸಾರ್ವಜನಿಕ ಪ್ರದೇಶಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಸಾಮೂಹಿಕವಾಗಿ ನಡೆಯುತ್ತಿದೆ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆದಂತಹ ರೀತಿಯಲ್ಲಿದೆ. ಕರಪತ್ರದಂತೆ ಎಸ್ಐಆರ್ ಫಾರ್ಮ್ ಹಂಚಲಾಗುತ್ತಿದೆ. ಬಿಎಲ್ಒಗಳು ಯಾರಿಗೂ ಹೆದರದೆ ಅಕ್ರಮವೆಸಗುತ್ತಿದ್ದಾರೆ ಎಂದರು.ತಕರಾರು ಮಾಡಿದರೂ ಸಿಬ್ಬಂದಿ ಕ್ಯಾರೇ ಎನ್ನುತ್ತಿಲ್ಲ. ದೆಹಲಿಗೆ ಬೇಕಾದರೂ ಹೇಳಿʼ ಎಂದು ಉದ್ದಟತನ ಪ್ರದರ್ಶಿಸುತ್ತಿರುವುದು ಕಂಡು ಬಂದಿದೆ. ಇದೆಲ್ಲದರ ಬಗ್ಗೆಯೂ ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಗಮನಕ್ಕೆ ತರಲಾಗುವುದು ಎಂದು ಜೋಶಿ ಹೇಳಿದರು.ಹುಬ್ಬಳ್ಳಿ-ಧಾರವಾಡದ ವಾರ್ಡ್ ಸಂಖ್ಯೆ 66, ಬೂತ್ ನಂ. 55, ಮುಲ್ಲಾನ ಓಣಿ ಹೀಗೆ ಅನೇಕ ಕಡೆ ಎಸ್ಐಆರ್ ಅರ್ಜಿಗಳ ಸಾಮೂಹಿಕ ವಿತರಣೆ ನಡೆದಿದೆ. ಇನ್ನು ಸವಣೂರು ತಾಲೂಕಿನ ಬೂತ್ ನಂ.184, 185, 186ರಲ್ಲಿ, ಬಂಕಾಪುರ ಮಸೀದಿಗಳಲ್ಲಿ ಪ್ರಕ್ರಿಯೆ ನಡೆದಿದೆ. ವಾಟ್ಸ್ಆ್ಯಪ್ಗಳಲ್ಲಿ ರಾಜಾರೋಷವಾಗಿ ಫೋಟೋ ಸಮೇತ ಹಾಕಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳಿವೆ. ಸಾಕ್ಷ್ಯ ಸಮೇತ ಚುನಾವಣಾ ಆಯುಕ್ತರಿಗೆ ಸಲ್ಲಿಸುತ್ತೇವೆ ಎಂದರು.
ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಪ್ರತಿ ಮನೆ-ಮನೆಗೆ ಹೋಗಿ ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಯಾರ ಒತ್ತಡಕ್ಕೂ ಒಳಗಾಗಬೇಕಿಲ್ಲ. ಸಿಬ್ಬಂದಿಗೆ ಕಾಲಮಿತಿ ಕಡಿಮೆ ಎನಿಸಿದರೆ ಆಯೋಗ ಹೆಚ್ಚಿನ ಸಮಯ ನೀಡಬಹುದು ಎಂದರು.
ಮೃತಪಟ್ಟವರು, ಸ್ಥಳಾಂತರವಾದವರು ಮತ್ತು ಅಕ್ರಮ ವಲಸಿಗರ ಪರಿಷ್ಕರಣೆ ಮಾತ್ರ ಆಗಬೇಕಿದೆ. ಹಾಗಾಗಿ ಯಾವುದೇ ಬಿಎಲ್ಒಗಳು ಮತ್ತು ಎಸ್ಐಆರ್ ಸಿಬ್ಬಂದಿ ಅನಾವಶ್ಯಕ ಅಕ್ರಮದಲ್ಲಿ ತೊಡಗಿ ಸಿಲುಕಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದರು.