ಕನ್ನಡಪ್ರಭ ವಾರ್ತೆ ಮೈಸೂರು
ಸಂಘವು ಎಲ್ಲಾ ಜನಾಂಗದ ಜಯಂತಿಗಳನ್ನು ಆಚರಿಸಿಕೊಂಡು ಬಂದಿದೆ. ಇದರ ಜೊತೆಗೆ ಚಾಮುಂಡಿಬೆಟ್ಟದ ಮೆಟ್ಟಿಲುಗಳ ಸ್ವಚ್ಛತೆ, ಬೈಕ್ ರ್ಯಾಲಿ, ಕಾಲ್ನಡಿಗೆ ಜಾಥಾದ ಮೂಲಕ ಸಾರ್ವಜನಿಕರಲ್ಲಿ ಮಳೆ ನೀರು ಸಂಗ್ರಹಣೆ ಕುರಿತು ಅರಿವು ಮೂಡಿಸುತ್ತಿದೆ. ವಿಶೇಷ ಮಕ್ಕಳ ಶಾಲೆ, ಬುದ್ಧಿಮಾಂಧ್ಯ ಮಕ್ಕಳ ಶಾಲೆಗೆ ಉಚಿತವಾಗಿ ಸೋಲಾರ್ ಅಳವಡಿಕೆ, ಕೆಟ್ಟಿರುವ ನಲ್ಲಿ ತೆಗೆದು ಹೊಸ ನಲ್ಲಿ ಅಳವಡಿಸಿ ಆ ದಿನ, ಆ ಶಾಲೆಗಳಲ್ಲೇ ಕಾರ್ಯಕ್ರಮ ಏರ್ಪಡಿಸಿ ಮಕ್ಕಳಿಗೆ ಮತ್ತು ಸದಸ್ಯರಿಗೆ ಬೋಜನ ವ್ಯವಸ್ಥೆ ಮಾಡಲಾಗುತ್ತದೆ.
ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲೂ ಸಂಚರಿಸಿ ನಲ್ಲಿ ಕೆಲಸದ ಕಾರ್ಮಿಕರನ್ನು ಸಂಘಟಿಸಿ ಅವರಿಗೆ ಸಂಘದ ಮಹತ್ವ ಮತ್ತು ಕಾರ್ಮಿಕ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿ ಜಾಗೃತಿ ಮೂಡಿಸಲು ಮುಂದಾಗಿದೆ.ರಾಜ್ಯದಲ್ಲಿ ಮೊದಲ ಬಾರಿಗೆ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಮೊದಲ ಸಮಾವೇಶವನ್ನು ವಸ್ತು ಪ್ರದರ್ಶನ ಆವರಣದಲ್ಲಿ ಆಯೋಜಿಸಿತ್ತು. ಮಾರುಕಟ್ಟೆ ಬಂದ ಹೊಸ ಪದಾರ್ಥಗಳ ಪರಿಚಯ ಕಾರ್ಯಕ್ರಮ, ನಿಧನರಾದ ಸಂಘದ ಸದಸ್ಯರ ಕುಟುಂಬಕ್ಕೆ ಸಹಾಯ ಧನ ಸೇರಿದಂತೆ ಅನೇಕ ಸವಲತ್ತು ನೀಡಲಾಗುತ್ತಿದೆ.