25, 26ರಂದು ಎಸ್ಐಆರ್ ಮಹಾಸಂಪರ್ಕ ಅಭಿಯಾನ: ಕುತ್ಯಾರು

KannadaprabhaNewsNetwork |  
Published : Jul 24, 2026, 01:45 AM IST
22ಬಿಜೆಪಿ | Kannada Prabha

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ 25,26ರಂದು ರಾಜ್ಯಾದ್ಯಂತ ನಡೆಯಲಿರುವ ಎಸ್ಐಆರ್ ಮಹಾ ಸಂಪರ್ಕ ಅಭಿಯಾನವನ್ನು ಜಿಲ್ಲೆಯಾದ್ಯಂತ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ 25,26ರಂದು ರಾಜ್ಯಾದ್ಯಂತ ನಡೆಯಲಿರುವ ಎಸ್ಐಆರ್ ಮಹಾ ಸಂಪರ್ಕ ಅಭಿಯಾನವನ್ನು ಜಿಲ್ಲೆಯಾದ್ಯಂತ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್ಐಆರ್ ಮಹಾ ಸಂಪರ್ಕ ಅಭಿಯಾನದ ಎರಡೂ ದಿನಗಳಲ್ಲಿ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಮನೆ ಮನೆ ಭೇಟಿಯ ಮೂಲಕ ಎಸ್ಐಆರ್ ಪ್ರಕ್ರಿಯೆಗೆ ವೇಗ ನೀಡುವ ಜೊತೆಗೆ 26ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲೆಯ ಎಲ್ಲ 1,112 ಬೂತ್ ಗಳಲ್ಲಿ ವೀಕ್ಷಿಸಿ, ವಿವರವನ್ನು ಸರಲ್ ಆಪ್‌ನಲ್ಲಿ ಅಪ್ಲೋಡ್ ಮಾಡುವ ಮೂಲಕ ಉಡುಪಿ ಜಿಲ್ಲೆ 100 ಶೇ. ಸಾಧನೆ ದಾಖಲಿಸುವಂತೆ ಬದ್ಧತೆಯಿಂದ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ದ ಕರಾವಳಿಯಾದ್ಯಂತ ಬೃಹತ್ ಹೋರಾಟದ ರೂಪುರೇಷೆಗಳನ್ನು ಸಿದ್ದಪಡಿಸಲಾಗುವುದು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಮಾಹಿತಿ ನೀಡಿದರು. ಮಂಡಲಗಳ ಹಾಗೂ ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಚಟುವಟಿಕೆಗಳ ವಿಸ್ತೃತ ವರದಿಯನ್ನು ಮಂಡಿಸಿದರು.ಜಿಲ್ಲಾ ಪ್ರಮುಖರು, ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಇದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್ ಗೀತೆ ಹಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ ಸ್ವಾಗತಿಸಿ, ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಮ್ಮಲ್ಲಿ ಧಮ್ ಇದ್ದರೆ ನನ್ನೊಂದಿಗೆ ನೇರವಾಗಿ ಹೋರಾಡಿ: ಮುಶ್ರೀಫ್‌
ಎಸ್‌ಐಆರ್; 1,52,389 ಗಣತಿ ನಮೂನೆಗಳ ಡಿಜಿಟೈಜೇಷನ್