ಹುಬ್ಬಳ್ಳಿ: ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ದೇಶದ ಮತದಾರರ ಶುದ್ಧೀಕರಣವಾಗಿದೆ. ಅರ್ಹರು ಬಿಟ್ಟುಹೋಗದಂತೆ ಅನರ್ಹರು ಸೇರ್ಪಡೆಯಾಗಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿ ಹೋರಾಟ ನಡೆಸಿದ್ದರು. ಆದರೆ, ಅದನ್ನು ಸಾಬೀತು ಪಡಿಸದೇ ಆರೋಪ ಮಾಡುತ್ತ ಸುಳ್ಳನ್ನೇ ಸತ್ಯವನ್ನಾಗಿಸಲು ಹೊರಟರು. ಒಂದು ಸುಳ್ಳನ್ನು ಪದೇ ಪದೇ ಹೇಳಿ ಸತ್ಯವೆಂದು ಜನರಲ್ಲಿ ಗೊಂದಲ ಸೃಷ್ಟಿಸಿದರು ಎಂದು ಆರೋಪಿಸಿದರು.
ಇಂದಿಗೂ ಹಲವರಲ್ಲಿ ಇದೇ ಗೊಂದಲ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಈ ಎಸ್ಐಆರ್ ಮೂಲಕ ಅರ್ಹ ಮತದಾರರನ್ನು ಸೇರ್ಪಡೆ ಮಾಡುವುದು, ಇರುವ ಅನರ್ಹರನ್ನು ಪಟ್ಟಿಯಿಂದ ತೆಗೆದು ಹಾಕಲು ಈ ನಿರ್ಣಯ ಕೈಗೊಂಡಿದೆಯೇ ಹೊರತು ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಮಾಡಿದ ತಂತ್ರವಲ್ಲ ಎಂಬುದನ್ನು ಕ್ಷೇತ್ರದ ಪ್ರತಿಯೊಬ್ಬ ಮತದಾರರಿಗೂ ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದರು.ಎಸ್ಐಎರ್ ಚುನಾವಣಾ ಪೂರ್ವ ನಡೆಯುವ ಸಾಮಾನ್ಯ ಪ್ರಕ್ರಿಯೆ. ಇದನ್ನು ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಸಿಕೊಂಡು ಮಾಡಬೇಕು ಎಂದು ತೀರ್ಮಾನ ಕೈಗೊಳ್ಳಲಾಗಿದೆ. ಬಿಎಲ್ಎಗಳು ಪ್ರತಿಯೊಂದು ಮನೆಮನೆಗೆ ತೆರಳಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವ ಮೂಲಕ ಮತದಾರರ ಪಟ್ಟಿಯಲ್ಲಿರದ ಅರ್ಹರನ್ನು ಸೇರ್ಪಡೆ ಮಾಡುವುದು ಜತೆಗೆ ಅನರ್ಹರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಶ್ರಮಿಸಬೇಕಿದೆ. ಈ ಎಸ್ಐಆರ್ ಶುದ್ಧೀಕರಣದಲ್ಲಿ ಶುದ್ಧ ಮನಸ್ಸಿನಿಂದ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಸೆಂಟ್ರಲ್ ಕಾರ್ಯಕರ್ತರ ಆಧಾರಿತ ಮತಕ್ಷೇತ್ರವಾಗಿದೆ. ಕ್ಷೇತ್ರದ 50 ಸಾವಿರ ಮನೆಗಳಿಗೆ ತೆರಳಿ ಅಭಿಪ್ರಾಯ ಸಂಗ್ರಹಿಸುವ ಗುರಿ ಹೊಂದಿದ್ದೇನೆ. ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳು, ಮುಂದೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಮತದಾರರನ್ನು ಸಂಪರ್ಕಿಸಿ ಮಾಹಿತಿ ಪಡೆಯುವೆ ಎಂದರು.
ಹುಬ್ಬಳ್ಳಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಸ್ಥಾನದಲ್ಲಿ ನಿಂತಾಗಲೆಲ್ಲಾ ನನ್ನದು ʼಅಪ್ಪಟ ಗ್ರಾಮೀಣ ಭಾಷೆʼ ಎಂಬ ಸಮಜಾಯಿಷಿ ನೀಡುತ್ತಾರೆ. ಹಾಗಾದರೆ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಅವರನ್ನೂ ಹೀಗೆ ಏಕವಚನದಲ್ಲೇ ಕರೆಯುವ ಧೈರ್ಯ ತೋರುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಮಹಿಳೆಯರ ಬಗ್ಗೆ ಏಕವಚನ ಸಂಬೋಧನೆ ಸಭ್ಯತೆಯಲ್ಲ. ಈ ಅವಮಾನ ಸ್ವೀಕಾರಾರ್ಹವಲ್ಲ. ದೇಶದ ಗೌರವಾನ್ವಿತರಾಗಿರುವ ಹಣಕಾಸು ಸಚಿವೆ ಅವರನ್ನು ಹೀಗೆ ಏಕವಚನದಲ್ಲಿ, ಅಗೌರವದಿಂದ ಸಂಬೋಧನೆ ಮಾಡುವುದು ಯಾವ ಸಂಸ್ಕೃತಿ? ಇವರದ್ದು ಇದೆಂಥಾ ಮನುವಾದ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.