ಸಿಎಂ ಡಿಕೆಶಿ ಮನೆಯಿಂದಲೇ ಎಸ್‌ಐಆರ್ ಅಕ್ರಮ ಶುರು: ಎಚ್ಡಿಕೆ

KannadaprabhaNewsNetwork |  
Published : Jul 04, 2026, 01:15 AM IST
3ಕೆಆರ್ ಎಂಎನ್ 5.ಜೆಪಿಜಿಕೇಂದ್ರ ಸಚಿವ ಕುಮಾರಸ್ವಾಮಿ | Kannada Prabha

ಸಾರಾಂಶ

ರಾಮನಗರ: ಮುಖ್ಯಮಂತ್ರಿಗಳು ತಮ್ಮ ಮನೆಗೆ ಜಿಲ್ಲಾಧಿಕಾರಿಗಳನ್ನು ಕರೆಸಿಕೊಂಡು ಎಸ್ಐಆರ್ ನಡೆಸಿ ಅಕ್ರಮಕ್ಕೆ ಮೊದಲ ಪೂಜೆ ಸಲ್ಲಿಸಿದರು. ಈ ಪ್ರಕ್ರಿಯೆಯಲ್ಲಿ ಯಾವ ರೀತಿ ಅಕ್ರಮ ಎಸಗಬಹುದು ಎಂಬುದನ್ನು ತಮ್ಮ ಮನೆಯಿಂದಲೇ ಶುರು ಮಾಡಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು

ರಾಮನಗರ: ಮುಖ್ಯಮಂತ್ರಿಗಳು ತಮ್ಮ ಮನೆಗೆ ಜಿಲ್ಲಾಧಿಕಾರಿಗಳನ್ನು ಕರೆಸಿಕೊಂಡು ಎಸ್ಐಆರ್ ನಡೆಸಿ ಅಕ್ರಮಕ್ಕೆ ಮೊದಲ ಪೂಜೆ ಸಲ್ಲಿಸಿದರು. ಈ ಪ್ರಕ್ರಿಯೆಯಲ್ಲಿ ಯಾವ ರೀತಿ ಅಕ್ರಮ ಎಸಗಬಹುದು ಎಂಬುದನ್ನು ತಮ್ಮ ಮನೆಯಿಂದಲೇ ಶುರು ಮಾಡಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಅನ್ನೇ ಓವರ್‌ಲುಕ್ ಮಾಡುವಂತಹ ಬಂಡರು ರಾಜ್ಯದಲ್ಲಿ ಇದ್ದಾರೆ. ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬೇರೆ ರಾಜ್ಯಗಳ ಅಧಿಕಾರಿಗಳನ್ನು ಕಳಿಸಿ ಎಸ್‌ಐಆರ್ ಮಾಡಿಸಲಾಗಿತ್ತು. ಈಗ ಕರ್ನಾಟಕದಲ್ಲೂ ಅಂತಹದೇ ಅನಿವಾರ್ಯತೆ ಸೃಷ್ಟಿಯಾಗಿದೆ. ಬೇರೆ ರಾಜ್ಯದ ಅಧಿಕಾರಿಗಳಿಂದ ಇಲ್ಲಿ ಪ್ರಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್ ) ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಸರ್ಕಾರ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಸರ್ಕಾರದ ಅಕ್ರಮಗಳ ವಿರುದ್ಧ ಚುನಾವಣಾ ಆಯೋಗಕ್ಕೆ ವಿಡಿಯೋ ಸಾಕ್ಷ್ಯ ಹಾಗೂ ದಾಖಲೆ ಸಮೇತ ದೂರು ನೀಡುವುದಾಗಿ ತಿಳಿಸಿದರು.

ರಾಜ್ಯದ ಹಲವು ಭಾಗಗಳಿಂದ ತಮಗೆ ಅಕ್ರಮದ ಬಗ್ಗೆ ಮಾಹಿತಿ ಬರುತ್ತಿದೆ. ಕಾಂಗ್ರೆಸ್ ಪಕ್ಷವು ತನ್ನ ಮತದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಅಕ್ರಮವಾಗಿ ಹೆಸರುಗಳನ್ನು ಸೇರಿಸುತ್ತಿದೆ. ಸಂವಿಧಾನದ ಬಗ್ಗೆ ಮಾತನಾಡುವ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನೋಡಲಿ ಎಂದು ಹೇಳಿದರು.

ವೇದಿಕೆ ಮೇಲೆ ಒಂದು ಹೇಳಿ, ಕಾರ್ಯರೂಪದಲ್ಲಿ ಮತ್ತೊಂದು ಮಾಡುವ ಈ ಲಜ್ಜೆಗೆಟ್ಟ ಸರ್ಕಾರದ ನಿಜವಾದ ಬಂಡವಾಳ ಸದ್ಯದಲ್ಲೇ ಹೊರಬರಲಿದೆ. ಪಾಪ, ರಾಹುಲ್ ಗಾಂಧಿ ಅವರು ದೊಡ್ಡದಾಗಿ ಭಾಷಣ ಮಾಡುತ್ತಾರಲ್ಲ, ಮೊದಲು ಇಲ್ಲಿ ಬಂದು ಏನಾಗುತ್ತಿದೆ ಎಂದು ನೋಡಲಿ ಎಂದು ಕುಮಾರಸ್ವಾಮಿ ತಿಳಿಸಿದರು.

ಕೋಟ್ ....

ರಾಮನಗರ ಜಿಲ್ಲೆಯಿಂದ ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬವನ್ನು ಓಡಿಸಿದ್ದೇವೆ. ಇಲ್ಲಿ ಅವರಿಗೇನು ಕೆಲಸ ಅನ್ನುತ್ತಿದ್ದಾರೆ. ನನ್ನ ಭೂಮಿ ಮತ್ತು ವೋಟ್ ಇರುವುದು ಇದೇ ರಾಮನಗರ ಜಿಲ್ಲೆಯಲ್ಲಿ. ವಿರೋಧಿಗಳು ಇಲ್ಲೇ ಹುಟ್ಟಿರಬಹುದು. ನಾನು ಇಲ್ಲಿ ಹುಟ್ಟದೇ ಇರಬಹುದು. ಆದರೆ, ನನಗೆ ರಾಜಕೀಯವಾಗಿ ಜನ್ಮ ನೀಡಿದ ಜಿಲ್ಲೆ ಇದು. ನಮ್ಮನ್ನು ಇಲ್ಲಿಂದ ಎಲ್ಲೂ ಕಳುಹಿಸಲು ಸಾಧ್ಯವಿಲ್ಲ. ಕಾಲಚಕ್ರ ಸುತ್ತುತ್ತದೆ. ಈಗ ನಮ್ಮ ಕೆಲಸ ಪ್ರಾರಂಭವಾಗಿದೆ. ಕಾರ್ಯಕರ್ತರ ಜೊತೆಗೂಡಿ ಇಲ್ಲೇ ಕೆಲಸ ಆರಂಭಿಸಿದ್ದೇನೆ. ಇವರ ಬಂಡವಾಳ ತೆಗೆಯಲೆಂದೇ ನಾನು ಇನ್ನು ಬದುಕಿದ್ದೇನೆ.

- ಕುಮಾರಸ್ವಾಮಿ, ಕೇಂದ್ರ ಸಚಿವರು

3ಕೆಆರ್ ಎಂಎನ್ 5.ಜೆಪಿಜಿ

ಕೇಂದ್ರ ಸಚಿವ ಕುಮಾರಸ್ವಾಮಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಸಿರಾಟ ಸಮಸ್ಯೆಯಲ್ಲಿದ್ದ ಮಹಿಳೆ ರಕ್ಷಣೆ
ಪರಿಸರ ಸ್ವಚ್ಛಗೊಳಿಸಿ, ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ: ಶ್ರೀ ಮುರುಘೇಂದ್ರ ಶಿವಾಚಾರ್ಯ ಸ್ವಾಮೀಜಿ