
ಕನ್ನಡಪ್ರಭ ವಾರ್ತೆ, ತುಮಕೂರು
ವಿಧಾನಪರಿಷತ್ ಸದಸ್ಯ ಡಾ.ರಮೇಶಬಾಬು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಂತರವು ಅರ್ಹ ಮತದಾರ ತನ್ನ ಹಕ್ಕಿನಿಂದ ವಂಚಿತರಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಎರಡನೇ ಸ್ವಾತಂತ್ರ ಹೋರಾಟ ಇದಾಗಿದೆ. ಹಾಗಾಗಿ ಪ್ರತಿಯೊಬ್ಬ ಮತದಾರರು ಫಾರಂ ತುಂಬುವ ಮೂಲಕ ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮತದಾರರನ್ನು ಸಂಪರ್ಕಿಸಿ,ಅವರಲ್ಲಿ ಜಾಗೃತಿ ಮೂಡಿಸುವ ಮೂಲಕ ಅವರ ಹಕ್ಕುಗಳನ್ನು ಕಾಪಾಡಬೇಕಿದೆ ಎಂದರು.
ಕೇಂದ್ರ ಸರ್ಕಾರ ಈಗಾಗಲೇ ಎಸ್.ಐ.ಆರ್.ನಂತರ ಅಧಿಕೃತ ಮತಪಟ್ಟಿಯಲ್ಲಿ ಇರುವ ಮತದಾರರಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ನೀಡಲಾಗುವುದು ಎಂದು ಹೇಳಿದೆ.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಹ ಇದೇ ವಿಚಾರವನ್ನು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ.ಎಸ್.ಐ.ಆರ್.ವೇಳೆ ನಾವು ಕೊಂಚ ಎಡವಿದರೂ ಸಹ ಮತದಾನದ ಹಕ್ಕಿನ ಜೊತೆಗೆ,ಸರ್ಕಾರ ಸವಲತ್ತುಗಳಿಂದಲು ವಂಚಿತವಾಗಬೇಕಾಗುತ್ತಿದೆ.ಹಾಗಾಗಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿರುವ ಎಲ್ಲಾ ಕಾರ್ಯಕರ್ತರು ಸಹ ಪ್ರತಿ ಮಾಹಿತಿಯನ್ನು ಅರ್ಥ ಮಾಡಿಕೊಂಡು,ಜನರಿಗೆ ಅದನ್ನು ಅರ್ಥಮಾಡಿಸಿ ಫಾರಂ ತುಂಬುವಂತೆ ಮಾಡಿ ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಡಾ.ರಮೇಶಬಾಬು ತಿಳಿಸಿದರು.ಕೆಪಿಸಿಸಿ ಉಪಾಧ್ಯಕ್ಷರಾದ ಮುರಳೀಧರ ಹಾಲಪ್ಪ ಮಾತನಾಡಿ, ಎಸ್.ಐ.ಆರ್.ನಿಂದಾಗಿ ಎಷ್ಟೇ ಅತಿರಥ, ಮಹಾರಥ ರೆನಿಸಿಕೊಂಡ ರಾಜಕೀಯ ಧುರೀಣರು ಸಹ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಸೋಲು ಕಂಡಿದ್ದಾರೆ. ಎಸ್.ಐ.ಆರ್ ನಿಂದ ಶಾಸನ ಸಭೆ, ಸಂಸತ್ ಸದಸ್ಯರಿಗೆ ಮಾತ್ರ ತೊಂದರೆಯಾಗುವುದಿಲ್ಲ.ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ,ಗ್ರಾಮಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವವರಿಗೂ ಹೊಡೆತ ಬೀಳಲಿದೆ. ಹಾಗಾಗಿ ಪ್ರತಿ ಹಳ್ಳಿಯಲ್ಲಿಯೂ ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕಾಗಿದೆ.ಒಂದು ವೇಳೆ ಮೈಮರೆತರೆ ನಾವು ಸೋಲುವ ಜೊತೆಗೆ, ಪಕ್ಷವೂ ಅಧಿಕಾರ ಕಳೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ಎಸ್.ಐ.ಆರ್ ಎಂಬುದು ಒಂದು ಸಾಮಾನ್ಯ ಪ್ರಕ್ರಿಯೆ ಯಾಗಿದ್ದರೂ ತಾನು ಅಧಿಕಾರದಲ್ಲಿ ಮುಂದುವರೆಯಬೇಕೆಂಬ ಉದ್ದೇಶದಿಂದ ವಿಶೇಷ ಪರೀಕ್ಷರಣೆಗೆ ಕೇಂದ್ರ ಮುಂದಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜವಾಬ್ದಾರಿ ಹೆಚ್ಚಿದೆ. ನಮ್ಮೊಂದಿಗೆ ಅನೇಕ ಸಂಘ ಸಂಸ್ಥೆಗಳು ಕೈಜೋಡಿಸಿವೆ. ಬೂತ್ ಲೆವಲ್ ಏಜೆಂಟರು ಪ್ರತಿ ಮತದಾರರ ಹಕ್ಕು ರಕ್ಷಿಸಲು ಹೋರಾಟಕ್ಕೆ ಅಣಿಯಾಗಬೇಕಿದೆ ಎಂದರು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್, ಮಾಜಿ ಶಾಸಕರಾದ ಕೆ.ಎಸ್.ಕಿರಣ್ಕುಮಾರ್, ಡಾ.ಎಸ್.ಷಪಿಅಹಮದ್,ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ.ಆರ್,ಷಣ್ಮುಗಪ್ಪ, ಕೆಂಚಮಾರಯ್ಯ, ಹೆಚ್.ಸಿ.ಹನುಮಂತಯ್ಯ, ಜಾಗೃತ ಕರ್ನಾಟಕದ ಡಾ.ಬಸವರಾಜು, ಡಾ.ಅನಿಲ್ಕುಮಾರ್ ಚಿಕ್ಕದಾಳವಾಟ,ಚಂದನ್, ಏದ್ದೇಳು ಕರ್ನಾಟಕದ ಇಂದಿರಮ್ಮ, ರಾಮಚಂದ್ರಯ್ಯ,ತಾಜುದ್ದೀನ್ ಷರೀಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.