ಎಸ್‌ಐಆರ್‌ನಿಂದ 100 ಕೋಟಿ ಭಾರತೀಯರಿಗೆ ಸಂಕಷ್ಟ : ಅಬ್ದುಲ್ ಮಜೀದ್

KannadaprabhaNewsNetwork |  
Published : Jan 20, 2026, 02:45 AM IST
 | Kannada Prabha

ಸಾರಾಂಶ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕ್ರಮದಿಂದ ಕೇವಲ ಮುಸಲ್ಮಾನರಿಗೆ ಮಾತ್ರ ತೊಂದರೆಯಾಗುವುದಿಲ್ಲ, ಬದಲಿಗೆ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ 100 ಕೋಟಿ ಭಾರತೀಯರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆತಂಕ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕ್ರಮದಿಂದ ಕೇವಲ ಮುಸಲ್ಮಾನರಿಗೆ ಮಾತ್ರ ತೊಂದರೆಯಾಗುವುದಿಲ್ಲ, ಬದಲಿಗೆ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ 100 ಕೋಟಿ ಭಾರತೀಯರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆತಂಕ ವ್ಯಕ್ತಪಡಿಸಿದ್ದಾರೆ.

ಎಸ್‌ಡಿಪಿಐ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಎನ್‌ಆರ್‌ಸಿ ವಿಚಾರ ಕೋರ್ಟ್ನಲ್ಲಿ ಕಾರಣ ಚುನಾವಣಾ ಆಯೋಗದ ಮೂಲಕ ಹಿಂಬಾಗಲಿನಿಂದ ಎಸ್‌ಐಆರ್ ಪರೀಕ್ಷೆಯನ್ನು ಒಡ್ಡಲಾಗಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ ಎಂದು ಆರೋಪಿಸಿದರು.ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, ದೇಶದಲ್ಲಿ ಬಿಜೆಪಿಯನ್ನು ಬಲವಾಗಿ ಎದುರಿಸಬಲ್ಲ ಶಕ್ತಿ ಇರುವುದು ಎಸ್‌ಡಿಪಿಐಗೆ ಮಾತ್ರ, ದೇಶ ಕಾಂಗ್ರೆಸ್ ಮುಕ್ತವಾಗುತ್ತಿದೆ, ಆ ಪಕ್ಷಕ್ಕೆ ಇನ್ನು ಉಳಿಗಾವಿಲ್ಲ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಎಸ್‌ಐಅರ್ ಎನ್ನುವುದು ನುಸುಳುಕೋರರನ್ನು ಪತ್ತೆ ಹಚ್ಚುವ ಪ್ರಕ್ರಿಯೆಯಲ್ಲ, ದೇಶದ ಪೌರತ್ವವನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ಎಸ್‌ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ಅಶ್ರಫ್ ಮೌಲವಿ ಮೂವಾಟ್ಟುಪುಝ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಹಿಂದೆ ದುರುದ್ದೇಶವಿದ್ದು, ಜನರು ಜಾಗೃತರಾಗಿ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದರು.

ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟ ನಂಜಯ್ಯ, ಪತ್ರಕರ್ತ ರಾ.ಚಿಂತನ್, ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಮ್, ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅಡ್ಕಾರ್ ಮಾತನಾಡಿದರು.

ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ, ಕಾರ್ಯದರ್ಶಿ ಮೇರಿ ವೇಗಸ್, ಸದಸ್ಯ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷ ಮೊಹಮ್ಮದ್ ಅಲಿ, ನಗರಸಭಾ ಸದಸ್ಯೆ ನೀಮಾ ಅರ್ಷದ್, ಕಾರ್ಯದರ್ಶಿ ಬಶೀರ್ ಅಹಮ್ಮದ್, ಕೆ.ಸಿ.ಬಷೀರ್, ಅಬ್ದುಲ್ ಜಮೀರ್, ಫಾರುಕ್ ಖಾನ್, ಷರೀಫ್, ಭಾಷಾ, ಹನೀಫ್ ವಿರಾಜಪೇಟೆ, ಜಕ್ರಿಯ ಕುಶಾಲನಗರ, ಹಫೀಜ್ ಮತ್ತಿತರರು ಉಪಸ್ಥಿತರಿದ್ದರು. ಸಮಾವೇಶಕ್ಕೂ ಮೊದಲು ಎಸ್‌ಡಿಪಿಐ ಮುಖಂಡರು ಹಾಗೂ ಕಾರ್ಯಕರ್ತರು ಎವಿ ಶಾಲೆ ಬಳಿಯಿಂದ ಗಾಂಧಿ ಮೈದಾನದವರೆಗೆ ಘೋಷಣೆಗಳೊಂದಿಗೆ ರ‍್ಯಾಲಿ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ
ಫೆಬ್ರವರಿಯಿಂದ ರಾಜ್ಯದಲ್ಲಿ ಎಸ್‌ಐಆರ್‌?