ಶಿರಸಿ-ಹಾವೇರಿ ರಸ್ತೆ ಹೊಂಡ ಮುಚ್ಚುವ ಕೆಲಸ ಆರಂಭ

KannadaprabhaNewsNetwork |  
Published : Dec 31, 2024, 01:01 AM IST
30ಶಿರಸಿ11ಭರದಿಂದ ನಡೆದಿರುವ ಶಿರಸಿ-ಹಾವೇರಿ ರಸ್ತೆಯಲ್ಲಿದ್ದ ಹೊಂಡ-ಗುಂಡಿಗಳ ದುರಸ್ತಿ ಕಾರ್ಯ. | Kannada Prabha

ಸಾರಾಂಶ

ಸುಮಾರು ೨೨ ಕಿ.ಮೀ. ವ್ಯಾಪ್ತಿಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.

ಶಿರಸಿ: ಶಿರಸಿ-ಹಾವೇರಿ ರಸ್ತೆಯಲ್ಲಿದ್ದ ಹೊಂಡ-ಗುಂಡಿಗಳ ದುರಸ್ತಿ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆರಂಭಗೊಂಡಿದ್ದು, ಸುಮಾರು ೨೨ ಕಿ.ಮೀ. ವ್ಯಾಪ್ತಿಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.

ಶಿರಸಿ-ಹಾವೇರಿ ರಸ್ತೆಯು ಸಾಗರಮಾಲಾ ಯೋಜನೆಯಲ್ಲಿ ಹೆದ್ದಾರಿಯಾಗಿ ಮೇಲ್ದರ್ಜೇಗೇರಿ, ಅಗಲೀಕರಣ ಹಾಗೂ ಮರು ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿ, ಕಾಮಗಾರಿ

ಆರಂಭಿಸಲು ಸೂಚನೆ ನೀಡಿತ್ತು. ಆದರೆ, ಅರಣ್ಯ ಇಲಾಖೆಯ ಒಪ್ಪಿಗೆ ಸಿಗದೇ ಕಳೆದ ೨ ವರ್ಷದಿಂದ ರಸ್ತೆ ಸಂಪೂರ್ಣ ಹೊಂಡ-ಗುಂಡಿಗಳಾಗಿ ವಾಹನ ಸವಾರರು ಸಂಚಾರ ಮಾಡಲು ಸಾಧ್ಯವಾಗದೇ ಆಡಳಿತ

ವ್ಯವಸ್ಥೆಯ ವಿರುದ್ಧ ಹಿಡಿಶಾಪ ಹಾಕುವಂತಾಗಿತ್ತು. ಅಲ್ಲದೇ, ರಸ್ತೆ ಸರಿಪಡಿಸುವಂತೆ ಸ್ಥಳೀಯರು ಪ್ರತಿಭಟನೆ, ಹೋರಾಟ, ರಸ್ತೆ ತಡೆ ಮಾಡಿ ಎಚ್ಚರಿಸಿದ್ದರು. ನಂತರ ಸಂಸದರಾಗಿ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರಸಿ-ಹಾವೇರಿ ಹೆದ್ದಾರಿ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ತೊಡಕು ನಿವಾರಿಸಿ, ಹಸಿರು ನಿಶಾನೆ ದೊರಕಿಸಿಕೊಟ್ಟಿದ್ದಾರೆ. ಆದರೆ ಸಧ್ಯ ಓಡಾಡಲು ಹೊಂಡ-ಗುಂಡಿಗಳನ್ನು ಮುಚ್ಚಿ ರಸ್ತೆ ದುರಸ್ತಿ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ, ತಕ್ಷಣ ದುರಸ್ತಿ ಆರಂಭಿಸುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶಿರಸಿ-ಹಾವೇರಿ ರಸ್ತೆಯ ಸುಮಾರು ೨೨ ಕಿ.ಮೀ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಿದ್ದಾರೆ.

ಶಿರಸಿ-ಹಾವೇರಿಯ ರಸ್ತೆಯ ಸುಮಾರು ೩೦ ಕಿ.ಮೀ ದುರಸ್ತಿ ಮಾಡಲಾಗಿದೆ. ಚಿಪಗಿ ಕ್ರಾಸ್‌ನಿಂದ ಸುಮಾರು ೨೨ ಕಿ.ಮೀ ರಸ್ತೆ ರಿಪೇರಿ ಮಾಡಲಾಗುತ್ತಿದ್ದು, ೨ ಕೀಮಿ ಮಾತ್ರ ಬಾಕಿ ಇದೆ. ಡಿ. ೩೧ರ ಒಳಗಡೆ ಮುಗಿಸಲಾಗುತ್ತದೆ. ಅಗತ್ಯವಿರುವ ಎಲ್ಲ ಕಡೆಗಳಲ್ಲಿಯೂ ಗುಣಮಟ್ಟದ ದುರಸ್ತಿ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ ತಿಳಿಸಿದರು.15 ಕಾಮಗಾರಿ

ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸೂಚನೆಯಂತೆ ಶಿರಸಿ-ಹಾವೇರಿ ರಸ್ತೆ ದುರಸ್ತಿ

ಕಾಮಗಾರಿ ಆರಂಭಿಸಲಾಗಿದೆ. ಅರಣ್ಯ ಇಲಾಖೆಯ ಅನುಮತಿ ದೊರೆತಿದೆ. ೧೫ ದಿನದ ಒಳಗಡೆ

ಅಗಲೀಕರಣ ಹಾಗೂ ಹೆದ್ದಾರಿ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು.

ಶಿವಕುಮಾರ, ಎನ್.ಎಚ್.ಎ.ಐ. ಪ್ರೊಜೆಕ್ಟ್ ಡೈರೆಕ್ಟರ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ