ದಿಲ್ಲಿ ಹೋರಾಟಗಾರರ ಮೇಲೆ ದೌರ್ಜನ್ಯ ಖಂಡಿಸಿ ಧರಣಿ

KannadaprabhaNewsNetwork |  
Published : Jul 26, 2026, 01:30 AM IST
25ಕೆಡಿವಿಜಿ1, 2-ದಾವಣಗೆರೆಯಲ್ಲಿ ಶನಿವಾರ ದೆಹಲಿಯಲ್ಲಿ ಹೋರಾಟ ನಿರತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದಿಂದ ಪ್ರತಿಭಟನಾ ಧರಣಿ ನಡೆಸಲಾಯಿತು. | Kannada Prabha

ಸಾರಾಂಶ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿ ಜಂತರ್ ಮಂತರ್‌ನಲ್ಲಿ ಶಾಂತಿಯುತ ಧರಣಿ ನಡೆಸಿದ್ದ ವಿದ್ಯಾರ್ಥಿ- ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿ ಅಮಾನವೀಯವಾಗಿ ವರ್ತಿಸಿದ್ದನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ನಗರದಲ್ಲಿ ಶನಿವಾರ ಪ್ರತಿಭಟಿಸಿತು.

- ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪೊಲೀಸರ ವಿರುದ್ಧ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ । ಧರ್ಮೇಂದ್ರ ಪ್ರಧಾನ್‌ ವಿರುದ್ಧ ಆಕ್ರೋಶ - - -

ಕನ್ನಡಪ್ರಭ ವಾರ್ತೆ ದಾವಣಗೆರೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿ ಜಂತರ್ ಮಂತರ್‌ನಲ್ಲಿ ಶಾಂತಿಯುತ ಧರಣಿ ನಡೆಸಿದ್ದ ವಿದ್ಯಾರ್ಥಿ- ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿ ಅಮಾನವೀಯವಾಗಿ ವರ್ತಿಸಿದ್ದನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ನಗರದಲ್ಲಿ ಶನಿವಾರ ಪ್ರತಿಭಟಿಸಿತು.

ನಗರದ ಶ್ರೀ ಜಯದೇವ ವೃತ್ತದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಪದಾಧಿಕಾರಿಗಳ ನೇತೃತ್ವದಲ್ಲಿ ಪ್ರತಿಭಟಿಸಿದ ಮುಖಂಡರು, ಕಾರ್ಯಕರ್ತರು, ದೆಹಲಿಯಲ್ಲಿ ಹೋರಾಟ ನಿರದ ಮೇಲೆ ನಡೆಸಿದ ದೌರ್ಜನ್ಯ ಖಂಡಿಸಿ ಘೋಷಣೆ ಕೂಗಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಘೋಷಣೆಗಳ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಎಎಪಿ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಈ ವೇಳೆ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ 20ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಸಾವಿಗೆ ನ್ಯಾಯ ಸಿಗಬೇಕು. ಮೃತ ವಿದ್ಯಾರ್ಥಿಗಳ ಪ್ರತಿ ಕುಟುಂಬಕ್ಕೂ ಕನಿಷ್ಠ ₹1 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸತತ ಶ್ರಮ ವಹಿಸಿ, ಶ್ರದ್ಧೆಯಿಂದ ಪರೀಕ್ಷೆಗೆ ತಯಾರಾಗುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ಮೂಲಕ ಚೆಲ್ಲಾಟವಾಡಲಾಗುತ್ತಿದೆ. ಇಂತಹ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಕ್ಕೆ ಕಾರಣರಾದ ವ್ಯಕ್ತಿಗಳು ಯಾರೇ ಆಗಿದ್ದರೂ, ಎಂತಹದ್ದೇ ಪ್ರಭಾವಿಯಾಗಿದ್ದರೂ, ಯಾವುದೇ ಸ್ಥಾನಮಾನದಲ್ಲಿ ಇದ್ದರೂ ಅಂತಹವರನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ನೀಟ್ ಪರೀಕ್ಷೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ತಾಕೀತು ಮಾಡಿದರು.

ಪ್ರಜಾಪ್ರಭುತ್ವದಲ್ಲಿ ಧರಣಿ ಮತ್ತು ಉಪವಾಸ ಸತ್ಯಾಗ್ರಹ ಮಾಡುವ ಅಧಿಕಾರ, ಹಕ್ಕು ಪ್ರತಿಯೊಬ್ಬರಿಗೂ ಇದೆ. ಅಂತಹ ಹಕ್ಕನ್ನು ಕಸಿದುಕೊಳ್ಳುವುದು ಖಂಡನೀಯ. ಒಂದುವೇಳೆ ಕೇಂದ್ರ ಸರ್ಕಾರವು ದೆಹಲಿ ಹೋರಾಟ ನಿರತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ರಸ್ತೆ ತಡೆ, ಉಗ್ರ ಹೋರಾಟ ಹಾಗೂ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಆದಿಲ್ ಖಾನ್, ಸಂಘಟನಾ ಕಾರ್ಯದರ್ಶಿ ಕೆ.ರವೀಂದ್ರ, ಯುವ ಅಧ್ಯಕ್ಷ ವಿರೂಪಾಕ್ಷ ಜಕಣಾಚಾರಿ, ಮುಖಂಡರಾದ ಎಂ.ವೆಂಕಟೇಶ, ಪಿ.ಜೆ.ಮಲ್ಲಿಕಾರ್ಜುನ, ಫಯಾಜ್, ಮೊಹಮ್ಮದ್ ಯೂಸೂಫ್ ಇತರರು ಇದ್ದರು.

- - -

-25ಕೆಡಿವಿಜಿ1, 2:

ದಾವಣಗೆರೆಯಲ್ಲಿ ಶನಿವಾರ ದೆಹಲಿಯಲ್ಲಿ ಹೋರಾಟನಿರತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದಿಂದ ಧರಣಿ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

28ಕ್ಕೆ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ
ಸಂಪುಟ ವಿಸ್ತರಣೆ ಮುನ್ನೆಲೆಗೆ: ಬರ ಪರಿಸ್ಥಿತಿ ಗಾಳಿಗೆ