ಗುಳೇದಗುಡ್ಡದಲ್ಲಿ ನ್ಯಾಯಾಲಯ ಸ್ಥಾಪನೆಗೆ ಸ್ಥಳ ಪರಿಶೀಲನೆ

KannadaprabhaNewsNetwork |  
Published : Feb 07, 2024, 01:45 AM ISTUpdated : Feb 07, 2024, 03:39 PM IST
ಫೋಟೋ: 6ಜಿಎಲ್‌ಡಿ1- ಗುಳೇದಗುಡ್ಡದಲ್ಲಿ ಶಾಶ್ವತ ನ್ಯಾಯಾಲಯ ಸ್ಥಾಪನೆಗೆ ಎರಡು ಸ್ಥಳಗಳಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ವಿಜಯ ನೆರಳೆ ಅವರು  ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.  | Kannada Prabha

ಸಾರಾಂಶ

ಗುಳೇದಗುಡ್ಡ ಪಟ್ಟಣದಲ್ಲಿ ಶಾಶ್ವತ ನ್ಯಾಯಾಲಯ ಸ್ಥಾಪನೆಯ ಸಲುವಾಗಿ ಇಲ್ಲಿನ ಎರಡು ಸ್ಥಳಗಳಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ವಿಜಯ ನೆರಳೆ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಕನ್ನಡಪ್ರಭವಾರ್ತೆ ಗುಳೇದಗುಡ್ಡ

ಪಟ್ಟಣದಲ್ಲಿ ಶಾಶ್ವತ ನ್ಯಾಯಾಲಯ ಸ್ಥಾಪನೆಯ ಸಲುವಾಗಿ ಇಲ್ಲಿನ ಎರಡು ಸ್ಥಳಗಳಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ವಿಜಯ ನೆರಳೆ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಪಟ್ಟಣದ ಬಸ್ ನಿಲ್ದಾಣದ ಎದರುಗಡೆ ಇರುವ ಪೆಟ್ರೋಲ್ ಬಂಕ್ ಹಿಂದುಗಡೆಯ ಜಾಗವನ್ನು ಪರಿಶೀಲನೆ ನಡೆಸಿ, ಈ ಜಾಗಕ್ಕೆ ಬರಲು ಇರುವ ರಸ್ತೆಮಾರ್ಗದ ಬಗ್ಗೆ ಮಾಹಿತಿಯನ್ನು ತಹಸೀಲ್ದಾರ್‌ ಹಾಗೂ ಸರ್ವೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪರ್ವತಿ ಗ್ರಾಮದ ಹತ್ತಿರ ಇರುವ ಜಾಗ ಪರಿಶೀಲಿಸಿ ಈ ಜಾಗ ಚೆನ್ನಾಗಿದ್ದು, ಮುಖ್ಯರಸ್ತೆಗೆ ಹೊಂದಿಕೊಂಡಿದೆ. ಪಟ್ಟಣದಿಂದ ಜಾಸ್ತಿ ದೂರವೇನು ಇಲ್ಲ. ಎರಡು ಜಾಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಕೊಡಿ, ಮೇಲಧಿಕಾರಿಗಳಿಗೆ ಕಳುಹಿಸಿ, ಒಂದು ಜಾಗ ಅಂತಿಮಗೊಳಿಸೋಣ ಎಂದು ಹೇಳಿದರು.

ತಹಸೀಲ್ದಾರ್‌ ಎಂ.ಮಂಗಳಾ ಅವರು ನ್ಯಾಯಾಧೀಶರಾದ ವಿಜಯ ನೆರಳೆ ಅವರಿಗೆ ಲಭ್ಯವಿರುವ ಜಾಗಗಳ ಬಗ್ಗೆ ಮಾಹಿತಿ ನೀಡಿದರು. ಮೆಂಬರ್‌ ಆಫ್‌ ಸೆಕ್ರೆಟರಿ ದ್ಯಾವಪ್ಪ ಡೋಣಿ, ವಕೀಲರಾದ ಎಸ್.ಆರ್.ಬರಹಾಣಾಪೂರ, ಸಿ.ಪಿ ಬೆಕಿನಾಳ, ಶಕೀಲ್‌ ಕಂಟ್ರಾಕ್ಟರ್, ಟಿ.ಎಸ್. ಬೆನಕಟ್ಟಿ. ವಿ.ವೈ. ಹೊಸಮನಿ, ತೊಳಮಟ್ಟಿ, ಕಂದಾಯ ನೀರಿಕ್ಷಕ ಜೋಗಿನ, ಪಿಎಸ್ಐ ಲಕ್ಷ್ಮಣ ಆರಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲಾತಿಗೆ ಬಂಜಾರ ಸಮಾಜದ ವಿರೋಧ
ಜಿಲ್ಲೆಗೆ ಒಲಿದುಬಂದ 17ಕ್ಕೂ ಅಧಿಕ ಕೊಡುಗೆಗಳು