ಎಸ್‌.ಕೆ.ಗೋಲ್ಡ್‌ ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್ಸೊಸೈಟಿ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ

KannadaprabhaNewsNetwork |  
Published : Nov 11, 2025, 03:15 AM IST
32 | Kannada Prabha

ಸಾರಾಂಶ

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.ನ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಭಾನುವಾರ ಕೊಟ್ಟಾರಚೌಕಿಯಲ್ಲಿರುವ ಸೊಸೈಟಿಯ ಆಡಳಿತ ಕಚೇರಿ ಬಳಿ ನೆರವೇರಿತು.

ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.ನ ನವೀಕೃತ ವಿಶ್ವಸೌಧ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಭಾನುವಾರ ಕೊಟ್ಟಾರಚೌಕಿಯಲ್ಲಿರುವ ಸೊಸೈಟಿಯ ಆಡಳಿತ ಕಚೇರಿ ಬಳಿ ನೆರವೇರಿತು.ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಆಶೀರ್ವಚನದಲ್ಲಿ, 1963 ರಲ್ಲಿ ಸರ್ಕಾರದಿಂದ ಚಿನ್ನ ನಿಯಂತ್ರಣ ಕಾಯಿದೆ ಜಾರಿಯಾದ ಸಂದರ್ಭದಲ್ಲಿ ಈ ವೃತ್ತಿ ಅವಲಂಬಿಸಿ ಬದುಕುತ್ತಿದ್ದವರು. ಅವರು ಅತಂತ್ರರಾದಾಗ ಪಾಲ್ಕೆ ಬಾಬುರಾಯ ಆಚಾರ್ಯ ಅವರು 1964ರಲ್ಲಿ ಈ ಸೊಸೈಟಿ ಆರಂಭಿಸಿ ಸಮಾಜದ ಜನರಿಗೆ ಆರ್ಥಿಕವಾಗಿ ಬಲ ನೀಡಿದರು. ಅವರಿಗೆ ದುಡಿದು ಬದುಕಲು ಮಾರ್ಗ ತೋರಿಸಿಕೊಟ್ಟರು. ಇಂದು ಸೊಸೈಟಿ ಮಾದರಿಯಾಗಿ ಬೆಳದು ನಿಂತಿದೆ. ಉತ್ತಮ ವ್ಯವಹಾರದ ಜತೆಗೆ ಸಮಾಜಮುಖಿ ಕಾರ್ಯಗಳಿಂದಾಗಿ ಮಾದರಿಯಾಗಿದೆ. 18 ಶಾಖೆಗಳು 180 ಆಗಲಿ ಎಂದು ಹೇಳಿದರು.

ಅರಕಲಗೂಡು ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ ಶ್ರೀ ವಿಶ್ವಕರ್ಮ ಜಗದ್ಗುರು ಪೀಠದ ಜಗದ್ಗುರು ಅನಂತಶ್ರೀವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಸತ್ ಸಂಕಲ್ಪದಿಂದ ಸಂಸ್ಥೆಯನ್ನು ಮಾಡಿದಾಗ ಅದರಿಂದ ನಾಡಿಗೆ ಸೇವೆ ದೊರೆಯುತ್ತದೆ. ಅದರಂತೆ ಪಾಲ್ಕೆ ಬಾಬುರಾಯ ಅಚಾರ್ಯ ಅವರ ಸತ್ ಸಂಕಲ್ಪ, ಸಹೃದಯತೆಯಿಂದಾಗಿ ಸಮಾಜಕ್ಕೆ ಪ್ರಯೋಜನವಾಗಿದೆ. ಈ ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಹೇಳಿದರು.ನವೀಕೃತ ವಿಶ್ವಸೌಧ ಕಟ್ಟಡವನ್ನು ಉದ್ಘಾಟಿಸಿದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕ್‌ಗಳು ಜನರಿಗೆ ಸಾಲ ನೀಡಲು ಹಿಂಜರಿಯುತ್ತಿವೆ. ಆದರೆ ಸಹಕಾರಿ ಸಂಸ್ಥೆಗಳು ಜನರ ಮನೆ ಬಾಗಿಲಿಗೆ ಹೋಗಿ ಉತ್ತಮ ಸೇವೆ ನೀಡುತ್ತಾ ಶುಭಕಾರ್ಯಗಳು ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ತ್ವರಿತವಾಗಿ ಸಾಲ ನೀಡುತ್ತಾ ಬೆಳೆಯುತ್ತಿವೆ. ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ರಾಜ್ಯದಾದ್ಯಂತ ಶಾಖೆಗಳನ್ನು ವಿಸ್ತರಿಸಿ ಇನ್ನಷ್ಟು ಮಂದಿ ಉದ್ದಿಮೆ ಆರಂಭಿಸಲು ನೆರವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಹೇಳಿದರು. ಸೊಸೈಟಿಯ ನೂತನ ಕಟ್ಟಡಕ್ಕೆ 10 ಲ.ರು. ನೀಡುವುದಾಗಿ ರಾಜೇಂದ್ರ ಕುಮಾರ್ ಘೋಷಿಸಿದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಸಹಕಾರ ಕರಾವಳಿಯ ಸಹಜ ಗುಣ. ಇಲ್ಲಿ ಹಲವು ಸಹಕಾರಿ ಸಂಸ್ಥೆಗಳು ಮಾದರಿಯಾಗಿದ್ದು ಇದರಲ್ಲಿ ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಕೂಡ ಒಂದು ಎಂದು ಹೇಳಿದರು.

ಪಾಲ್ಕೆ ಬಾಬುರಾಯ ಆಚಾರ್ಯ ಅವರ ಪುತ್ಥಳಿ ಅನಾವುಣಗೊಳಿಸಿದ ಅಯೋಧ್ಯ ಶ್ರೀ ರಾಮಲಲ್ಲಾ ವಿಗ್ರಹದ ನಿರ್ಮಾತೃ ಶಿಲ್ಪಿ ಡಾ. ಅರುಣ್ ಯೋಗಿರಾಜ್ ಮಾತನಾಡಿ, ಬ್ಯಾಂಕ್ ಗಳಿಗಿಂತ ಸಹಕಾರಿ ಸಂಸ್ಥೆಗಳು ಜನರಿಗೆ ಉತ್ತಮವಾಗಿ ಸ್ಪಂದಿಸುತ್ತಿದೆ. ನನ್ನ ಮೊದಲ ಕೆತ್ತನೆಗೆ ಮಾರ್ಬಲ್ ಖರೀದಿಸಲು ಸಹಕಾರಿ ಸಂಸ್ಥೆಯೇ ನೆರವಾಗಿತ್ತು ಎಂದು ಹೇಳಿದರು.ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಶುಭ ಹಾರೈಸಿದರು. ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಜ್ಯುವೆಲ್ಲರ್ಸ್‌ನ ಧನಂಜಯ ಪಾಲ್ಕೆ, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ, ದ.ಕ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪಾಲಿಕೆ ಮಾಜಿ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಆಡಳಿತ ಮಂಡಳಿಯ ನಿರ್ದೇಶಕರು ಇದ್ದರು.

ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಸ್ವಾಗತಿಸಿದರು. ಎನ್.ಆರ್. ದಾಮೋದರ ಆಚಾರ್ಯ, ವಾರುಣಿ ನಾಗರಾಜ್ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಎ.ಆನಂದ ಆಚಾರ್ಯ ವಂದಿಸಿದರು. ವಿವಿಧ ಕ್ಷೇತ್ರಗಳ ಸಾಧಕರಿಗೆ ಸಮ್ಮಾನ, ಸಹಾಯಧನ ವಿತರಣೆ ನಡೆಯಿತು.

PREV

Recommended Stories

ಕೃಷಿ ಜಮೀನುಗಳ ಪೋಡಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ನಯನಾಡು ಗೆಳೆಯರ ಬಳಗ ಸೇವಾ ಟ್ರಸ್ಟ್‌ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ