ಬಳ್ಳಾರಿ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವಂತೆ ಪೋಷಕರು ಪ್ರೇರೇಪಿಸಬೇಕು ಎಂದು ಹಿರಿಯ ಚಿತ್ರಕಲಾವಿದ ಪಿ.ಎಸ್. ಕಡೇಮನಿ ಸಲಹೆ ನೀಡಿದರು.
ವೀವಿ ಸಂಘದ ಅಧ್ಯಕ್ಷ ಡಾ.ಕಣೇಕಲ್ ಮಹಾಂತೇಶ್, ಕಾರ್ಯದರ್ಶಿ ಡಾ.ಅರವಿಂದ ಪಾಟೀಲ್, ವೀವಿ ಸಂಘದ ಸಹ ಕಾರ್ಯದರ್ಶಿ ಯಾಳ್ಪಿ ಪಂಪನಗೌಡ, ವೀವಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಎಲ್.ಟಿ. ಶೇಖರ್, ಕೋರಿ ವಿರುಪಾಕ್ಷಪ್ಪ, ಮುಂಡಾಸದ ಚನ್ನಬಸವರಾಜ್, ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ಅಣ್ಣ ವಿರೂಪಾಕ್ಷಪ್ಪ, ವಸಂತಕುಮಾರಗೌಡ ಪಾಟೀಲ್, ಪ್ರಾಂಶುಪಾಲೆ ಸುನಂದಾ ಎಂ. ಪಾಟೀಲ್ ಇದ್ದರು.
ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಏಳುಬೆಂಚೆ ರಾಜಶೇಖರಗೌಡ ಪ್ರಾಸ್ತಾವಿಕ ಮಾತನಾಡಿದರು.ಬಳಿಕ ಜರುಗಿದ ಕವಿಕಾವ್ಯ ಪರಿಚಯ, ಚಿತ್ರಕಲಾ ಸ್ಪರ್ಧೆಗಳಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ವೀವಿ ಸಂಘದ ಪದಾಧಿಕಾರಿಗಳು ಪ್ರಶಸ್ತಿ ಪತ್ರ, ನಗದು ಬಹುಮಾನ, ಸ್ಮರಣಿಕೆಯನ್ನು ವಿತರಿಸಿದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಕವಿಕಾವ್ಯ ಪರಿಚಯ, ಚಿತ್ರಕಲಾ ಸ್ಪರ್ಧೆ ಮುನ್ನ ಶಾಲೆಯಿಂದ ಜರುಗಿದ ಪರಿಸರ ಜಾಗೃತಿ ಹಿನ್ನೆಲೆಯ ಮ್ಯಾರಥಾನ್ ಸ್ಪರ್ಧೆಗೆ ಎಸ್ಪಿ ಡಾ.ಶೋಭಾರಾಣಿ ಚಾಲನೆ ನೀಡಿದರು.