ಕನ್ನಡಪ್ರಭ ವಾರ್ತೆ ಮಣಿಪಾಲ
ರೋಬೋಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯ ಸಹ ಉಪಾಧ್ಯಕ್ಷ (ಆಕೌಂಟ್ಸ್) ಕೃಷ್ಣರಾಜ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಮಾನವ ಸಂಪನ್ಮೂಲದ ಮೇಲೆ ಮಾಡುವ ಹೂಡಿಕೆಯು ದೀರ್ಘಕಾಲದ ಫಲಿತಾಂಶ ನೀಡುತ್ತದೆ ಎಂದ ಅವರು, ತರಬೇತಿಯ ಪ್ರಯೋಜನವನ್ನು ನಿವಾಸಿಗಳು ಪಡೆಯುವಂತೆ ತಿಳಿಸಿದರು.ಭಾರತೀಯ ವಿಕಾಸ ಟ್ರಸ್ಟ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ, ತರಬೇತಿಯ ಮಹತ್ವ ತಿಳಿಸುತ್ತಾ ನಿವಾಸಿಗಳು ಸಂಸ್ಥೆಯಿಂದ ಹೊರಗಡೆ ಹೋಗಿ ಬದುಕಲು ಸಹಾಯಕವಾಗುವುದರಿಂದ ಎಲ್ಲರೂ ತರಬೇತಿ ಪಡೆಯುವಂತೆ ಹುರಿದುಂಬಿಸಿದರು.ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನಿ, ಸಂಸ್ಥೆಯ ಅಧೀಕ್ಷಕಿ ಪುಷ್ಪಾರಾಣಿ ಎಚ್., ಸಂಪನ್ಮೂಲ ವ್ಯಕ್ತಿಗಳಾದ ರಮ್ಯ ಎ.ಸಿ., ಮುಕ್ತ ಶ್ರೀನಿವಾಸ, ಸನ್ನಿಹಿತ, ಸಂಸ್ಥೆಯ ಸಿಬ್ಬಂದಿ ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.