ಕನ್ನಡಪ್ರಭ ವಾರ್ತೆ ಮೈಸೂರು
ನಗರದ ರುಡ್ ಸೆಟ್ ಸಂಸ್ಥೆಯಲ್ಲಿ ಬುಧವಾರ ನಡೆದ ವಿಶ್ವ ಯುವ ಕೌಶಲ್ಯ ದಿನಾಚರಣೆ, ರುಡ್ ಸೆಟ್ ಸಂಸ್ಥೆ ಆರಂಭವಾಗಿ 44 ವರ್ಷಗಳ ಸಾರ್ಥಕ ಸೇವೆಗಳ ಸಂಭ್ರಮಾಚರಣೆ ಮತ್ತು ಎಂಬ್ರಾಯಿಡರಿ ತರಬೇತಿಯ ಶಿಬಿರಾರ್ಥಿಗಳು ತಯಾರಿಸಿದ ಪ್ರದರ್ಶನ ಮೇಳವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಸಾಕಾಗುವುದಿಲ್ಲ. ಸಂವಹನ ಕೌಶಲ್ಯ, ತಾಂತ್ರಿಕ ಜ್ಞಾನ, ಸಮಸ್ಯೆ ಪರಿಹಾರ ಸಾಮರ್ಥ್ಯ, ನಾಯಕತ್ವ, ಸೃಜನಶೀಲತೆ ಮತ್ತು ಡಿಜಿಟಲ್ ಕೌಶಲ್ಯಗಳು ಯಶಸ್ಸಿಗೆ ಅತ್ಯಂತ ಮುಖ್ಯವಾಗಿವೆ. ಇಂತಹ ಕೌಶಲ್ಯಗಳು ಯುವಕರ ಆತ್ಮವಿಶ್ವಾಸವನ್ನು ಹೆಚ್ಚಿಸಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ನೆರವಾಗುತ್ತವೆ ಎಂದು ಅವರು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕಿ ಸಿ.ಕೆ. ಭವ್ಯಾ ಮಾತನಾಡಿ, ವಿಶ್ವ ಯುವ ಕೌಶಲ್ಯ ದಿನವು ಯುವಜನರನ್ನು ಸ್ವಾವಲಂಬಿಗಳನ್ನಾಗಿ, ಜವಾಬ್ದಾರಿಯುತ ನಾಗರಿಕರನ್ನಾಗಿ ಹಾಗೂ ದೇಶದ ಅಭಿವೃದ್ದಿಗೆ ಕೊಡುಗೆ ನೀಡುವ ಶಕ್ತಿಯನ್ನಾಗಿ ರೂಪಿಸುವ ಮಹತ್ವದ ದಿನವಾಗಿದೆ ಎಂದರು.
ಇದೇ ವೇಳೆ ರುಡ್ಸೆಟ್ ಸಂಸ್ಥೆಯಿಂದ ತರಬೇತಿ ಪಡೆದು ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾದ ಯುವ ಉದ್ಯಮಶೀಲರಾದ ಮಹದೇವಸ್ವಾಮಿ, ಪುಟ್ಟು, ಸುಜೇಂದ್ರ ಮತ್ತು ಭಾರತಿ ಅವರನ್ನು ಸನ್ಮಾನಿಸಲಾಯಿತು.