ಮಣಿಪಾಲ ವಾಗ್ಶದಿಂದ ಕೌಶಲ ತರಬೇತಿಯ ಕೇಂದ್ರ ಆರಂಭ

KannadaprabhaNewsNetwork |  
Published : May 17, 2024, 12:32 AM IST
ವಾಗ್ಶ16 | Kannada Prabha

ಸಾರಾಂಶ

ಈ ನೂತನ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ನಲ್ಲಿ 6 ತಿಂಗಳು ಬೋಧನೆ ಮತ್ತು ಪ್ರಾಯೋಗಿಕ ತರಗತಿಗಳು ಮತ್ತು ಉಳಿದ ಆರು ತಿಂಗಳಿನಲ್ಲಿ ಉದ್ಯೋಗಪೂರ್ವ ಶಿಕ್ಷಣ [ಇಂಟರ್ನ್‌ಶಿಪ್‌] ದ ಮೂಲಕ ಅನುಭವ ಪಡೆಯಲು ಅವಕಾಶವಿದೆ. ಇಂಟರ್ನ್‌ಶಿಪ್‌ನ ಅವಧಿಯಲ್ಲಿ ವಿದ್ಯಾರ್ಥಿಗಳು ಹೊಟೇಲ್‌ ನಿರ್ವಹಣೆಯ ನೇರ ಅನುಭವವನ್ನು ಪಡೆಯಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಣಿಪಾಲ

ಮಾಹೆಯ ಅಂಗಸಂಸ್ಥೆ ವೆಲ್‌ಕಮ್‌ಗ್ರೂಪ್‌ ಗ್ರಾಜ್ಯುಯೇಟ್‌ ಸ್ಕೂಲ್‌ ಆಫ್‌ ಹೊಟೇಲ್‌ ಎಡ್ಮಿನಿಸ್ಟ್ರೇಶನ್‌ (ವಾಗ್ಶ) ಸಂಸ್ಥೆಯು ನ್ಯಾಶನಲ್ ಸ್ಕಿಲ್ ಡೆವೆಲಪ್ ಮೆಂಟ್ ಕಾರ್ಪೋರೇಶನ್ (ಎನ್‌ಎಸ್‌ಡಿಸಿ) ಮಾನ್ಯತೆಯಡಿ ಕೌಶಲ ತರಬೇತಿ ಕೇಂದ್ರ (ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಫಾರ್‌ ಸ್ಕಿಲ್‌ ಟ್ರೈನಿಂಗ್‌) ವನ್ನು ಬುಧವಾರ ಉದ್ಘಾಟಿಸಲಾಯಿತು.

ಟೂರಿಸಂ ಆ್ಯಂಡ್‌ ಹಾಸ್ಪಿಟಾಲಿಟಿ ಸ್ಕಿಲ್‌ ಕೌನ್ಸಿಲ್‌ (ಟಿಎಚ್‌ಎಸ್‌ಸಿ)ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಜನ್‌ ಬಹದೂರ್‌ ಅವರು ಕೇಂದ್ರವನ್ನು ಉದ್ಘಾಟಿಸಿ, ನಾವಿಂದು ಆತಿಥೇಯ ಉದ್ಯಮದ ನಿರ್ಣಾಯಕ ಕಾಲದಲ್ಲಿ ಇದ್ದೇವೆ. ಈ ಕ್ಷೇತ್ರದಲ್ಲಿ ಕೌಶಲಪೂರ್ಣ ವೃತ್ತಿಪರರ ಅಗತ್ಯ ಹೆಚ್ಚುತ್ತಿದೆ. ಈ ಬೇಡಿಕೆಯನ್ನು ಪೂರೈಸುವಲ್ಲಿ ವಾಗ್ಶದಂಥ ಸಂಸ್ಥೆಯು ಗುಣಮಟ್ಟದ ಶಿಕ್ಷಣ ಮತ್ತು ಪ್ರಾಯೋಗಿಕ ತರಬೇತಿಯನ್ನು ನೀಡುವುದರ ಮೂಲಕ ಪ್ರಧಾನ ಪಾತ್ರ ವಹಿಸುತ್ತಿದೆ ಎಂದರು.

ಮಾಹೆಯ ಸಹಕುಲಾಧಿಪತಿಗಳಾದ ಡಾ.ಎಚ್‌.ಎಸ್‌.ಬಲ್ಲಾಳ್‌ ಅವರು ಟಿಎಚ್‌ಎಸ್‌ಸಿ ಮತ್ತು ಎನ್‌ಎಸ್‌ಡಿಸಿ ಸಂಸ್ಥೆಗಳು ವಾಗ್ಶವನ್ನು ಸೆಂಟರ್‌ ಆಫ್ ಎಕ್ಸಲೆನ್ಸ್‌ ಎಂದು ಮಾನ್ಯತೆ ಮಾಡಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.

ವಾಗ್ಶದ ಪ್ರಾಂಶುಪಾಲ ಚೆಫ್‌ ಕೆ. ತಿರುಗ್ನಾನ ಸಂಬಂಧಂ ಅವರು, ವಾಗ್ಶಕ್ಕೆ ಟಿಎಚ್‌ಎಸ್‌ಸಿ -ಎನ್‌ಎಸ್‌ಡಿಎಸ್‌ ಮಾನ್ಯತೆಯು ಕರ್ನಾಟಕದ ಆತಿಥ್ಯ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಉದ್ಯೋಗವಕಾಶಗಳನ್ನು ಸೃಷ್ಟಿಸಲಿದೆ ಎಂದರು.

ಒಂದು ವರ್ಷದ ಕೋರ್ಸ್:

ಈ ನೂತನ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ನಲ್ಲಿ 6 ತಿಂಗಳು ಬೋಧನೆ ಮತ್ತು ಪ್ರಾಯೋಗಿಕ ತರಗತಿಗಳು ಮತ್ತು ಉಳಿದ ಆರು ತಿಂಗಳಿನಲ್ಲಿ ಉದ್ಯೋಗಪೂರ್ವ ಶಿಕ್ಷಣ [ಇಂಟರ್ನ್‌ಶಿಪ್‌] ದ ಮೂಲಕ ಅನುಭವ ಪಡೆಯಲು ಅವಕಾಶವಿದೆ. ಇಂಟರ್ನ್‌ಶಿಪ್‌ನ ಅವಧಿಯಲ್ಲಿ ವಿದ್ಯಾರ್ಥಿಗಳು ಹೊಟೇಲ್‌ ನಿರ್ವಹಣೆಯ ನೇರ ಅನುಭವವನ್ನು ಪಡೆಯಲಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಆತಿಥೇಯ ಶಿಕ್ಷಣದಲ್ಲಿ ಪ್ರಾವೀಣ್ಯವನ್ನು ಪಡೆದ ದ್ಯೋತಕವಾಗಿ ಟಿಎಚ್‌ಎಸ್‌ಸಿ ಮತ್ತು ಡಬ್ಲ್ಯುಜಿಎಸ್‌ಎಚ್‌ಎ [ವಾಗ್ಶ] ದಿಂದ ಜಂಟಿಯಾಗಿ ಪ್ರಮಾಣ ಪತ್ರವನ್ನು ಪಡೆಯಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ